May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಹೋರಾಟಗಳಿಗೆ ಸಾರ್ವಜನಿಕರು ಬೆಂಬಲ ನೀಡಬೇಕು: ಧರ್ಮಗುರು ಫಾ. ಆದರ್ಶ್ ಜೋಸೆಫ್

ಬೆಳ್ತಂಗಡಿ: ಪಶ್ಚಿಮ ಘಟ್ಟದ ತಪ್ಪಲಿನ ಅಂಚಿನಲ್ಲಿರುವ ಗ್ರಾಮಗಳಿಗೆ ಹಾಗೂ ರೈತರ ಕೃಷಿ ಜಾಗಗಳಿಗೆ ಕಸ್ತೂರಿ ರಂಗನ್ ವರದಿಯಿಂದ ಆಗುವ ತೊಂದರೆಗಳ ವಿರುದ್ದ ‘ಮಲನಾಡು ಜನ ಹಿತ ರಕ್ಷಣಾ ವೇದಿಕೆಯ’ ನೇತೃತ್ವದಲ್ಲಿ ನ. 15 ರಂದು ಗುಂಡ್ಯದಲ್ಲಿ ನಡೆಯಲಿರುವ ಪ್ರತಿಭಟನೆಗೆ ಸಂಪೂರ್ಣ ಬೆಂಬಲವನ್ನು ನೀಡುವುದಾಗಿ ಪುದುವೆಟ್ಟು ಗುತ್ತಿಗಾರು ಧರ್ಮಗುರು ಫಾ. ಆದರ್ಶ್ ಜೋಸೆಫ್ ತಿಳಿಸಿದರು.

ಹತ್ತು ಹಲವಾರು ಸಮಸ್ಯೆಗಳಿಂದ ನಮ್ಮ ರೈತರು ಮಾನಸಿಕ ಹಿಂಸೆಗೆ ಒಳಗಾಗುತ್ತಿದ್ದಾರೆ. ಅದರಲ್ಲಿ ಅವೈಜಾನಿಕ ಕಸ್ತೂರಿ ರಂಗನ್ ವರದಿ, ಪಶ್ಚಿಮ ಘಟ್ಟ ಮತ್ತು ಜನವಸತಿ ಕೇಂದ್ರಗಳ ಗಡಿ ಗುರುತು ಆಗದೇ ಇರುವುದು, ಫ್ಲೋಟಿಂಗ್ ಸಮಸ್ಯೆ, ಹಾಗೂ ಕಂದಾಯ ಮತ್ತು ಅರಣ್ಯ ಇಲಾಖೆಯಿಂದ ಜಂಟಿ ಸರ್ವೇ ಆಗದೇ ಇರುವುದು. ಈ ಎಲ್ಲಾ ಸಮಸ್ಯೆಗಳಿಂದ ರೈತರ ಬದುಕು ತ್ರಿಶಂಕು ಲೋಕದಲ್ಲಿ ಇದೆ. ಆದುದ್ದರಿಂದ ಎಲ್ಲಾ ರೈತರು, ಭಾಧಿತ ಗ್ರಾಮಸ್ಥರು, ಸಂಘ ಸಂಸ್ಥೆಗಳು ಪಕ್ಷತಿತಾವಾಗಿ, ಧರ್ಮತಿತವಾಗಿ ಈ ಹೋರಾಟಕ್ಕೆ ಬೆಂಬಲ ಕೊಡಬೇಕಾಗಿ ಕೇಳಿಕೊಳ್ಳುತ್ತೇನೆ. ರೈತರಿಗೆ ಮಾನಸಿಕ ಒತ್ತಡ ಕೊಡುವಂತ ಈ ಸಮಸ್ಯೆಗಳಿಗೆ ತಾರ್ಕಿಕವಾದ ಅಂತ್ಯ ಕಾಣುವ ತನಕ ಹೋರಾಟ ಮುಂದುವರಿಸಬೇಕಾಗಿದೆ. ಈ ಹೋರಾಟಕ್ಕೆ ಸಂಪೂರ್ಣ ಬೆಂಬಲವನ್ನು ಕೊಡಬೇಕಾಗಿ ಸಾರ್ವಜನಿಕರಲ್ಲಿ ಮನವಿ ಮಾಡುತ್ತೇನೆ ಎಂದು ತಿಳಿಸಿದರು.

,

Related posts

ಮೂಲಭೂತ ಸೌಕರ್ಯ ವಂಚಿತ ಪುಳಿತ್ತಡಿ, ಎರ್ಮಲೆ ಪ್ರದೇಶ ಆದಿವಾಸಿ ಕುಟುಂಬಗಳಿಂದ ನೋಟಾ ಅಭಿಯಾನಕ್ಕೆ ನಿರ್ಧಾರ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನಕ್ಕೆ ಪ್ರಕರ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಭೇಟಿ

Suddi Udaya

ಉಜಿರೆ ಟಿಬಿ ಕ್ರಾಸ್ ಬಳಿ ಸ್ಮಾರ್ಟ್ ಎಂಟರ್ಪ್ರೈಸಸ್ ಶುಭಾರಂಭ

Suddi Udaya

ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಟ: ಉಜಿರೆಯ ಪ್ರತೀಕ್ ಶೆಟ್ಟಿ ರಿಗೆ ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ ಹಾಗೂ ಕಟಾ ವಿಭಾಗದಲ್ಲಿ ಕಂಚಿನ ಪದಕ

Suddi Udaya

ಹ‌ರ್ ಘರ್ ತಿರಂಗಾ ಅಭಿಯಾನ ಪ್ರಯುಕ್ತ ಶಾಸಕ ಹರೀಶ್ ಪೂಂಜರ ಮನೆಯಲ್ಲಿ ರಾಷ್ಟ್ರ ಧ್ವಜಾರೋಹಣ

Suddi Udaya

ಪಿಲ್ಯ ಗೋಳಿಕಟ್ಟೆಯಲ್ಲಿ ಕಾರು ಅಪಘಾತ

Suddi Udaya
error: Content is protected !!