27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಹೋರಾಟಗಳಿಗೆ ಸಾರ್ವಜನಿಕರು ಬೆಂಬಲ ನೀಡಬೇಕು: ಧರ್ಮಗುರು ಫಾ. ಆದರ್ಶ್ ಜೋಸೆಫ್

ಬೆಳ್ತಂಗಡಿ: ಪಶ್ಚಿಮ ಘಟ್ಟದ ತಪ್ಪಲಿನ ಅಂಚಿನಲ್ಲಿರುವ ಗ್ರಾಮಗಳಿಗೆ ಹಾಗೂ ರೈತರ ಕೃಷಿ ಜಾಗಗಳಿಗೆ ಕಸ್ತೂರಿ ರಂಗನ್ ವರದಿಯಿಂದ ಆಗುವ ತೊಂದರೆಗಳ ವಿರುದ್ದ ‘ಮಲನಾಡು ಜನ ಹಿತ ರಕ್ಷಣಾ ವೇದಿಕೆಯ’ ನೇತೃತ್ವದಲ್ಲಿ ನ. 15 ರಂದು ಗುಂಡ್ಯದಲ್ಲಿ ನಡೆಯಲಿರುವ ಪ್ರತಿಭಟನೆಗೆ ಸಂಪೂರ್ಣ ಬೆಂಬಲವನ್ನು ನೀಡುವುದಾಗಿ ಪುದುವೆಟ್ಟು ಗುತ್ತಿಗಾರು ಧರ್ಮಗುರು ಫಾ. ಆದರ್ಶ್ ಜೋಸೆಫ್ ತಿಳಿಸಿದರು.

ಹತ್ತು ಹಲವಾರು ಸಮಸ್ಯೆಗಳಿಂದ ನಮ್ಮ ರೈತರು ಮಾನಸಿಕ ಹಿಂಸೆಗೆ ಒಳಗಾಗುತ್ತಿದ್ದಾರೆ. ಅದರಲ್ಲಿ ಅವೈಜಾನಿಕ ಕಸ್ತೂರಿ ರಂಗನ್ ವರದಿ, ಪಶ್ಚಿಮ ಘಟ್ಟ ಮತ್ತು ಜನವಸತಿ ಕೇಂದ್ರಗಳ ಗಡಿ ಗುರುತು ಆಗದೇ ಇರುವುದು, ಫ್ಲೋಟಿಂಗ್ ಸಮಸ್ಯೆ, ಹಾಗೂ ಕಂದಾಯ ಮತ್ತು ಅರಣ್ಯ ಇಲಾಖೆಯಿಂದ ಜಂಟಿ ಸರ್ವೇ ಆಗದೇ ಇರುವುದು. ಈ ಎಲ್ಲಾ ಸಮಸ್ಯೆಗಳಿಂದ ರೈತರ ಬದುಕು ತ್ರಿಶಂಕು ಲೋಕದಲ್ಲಿ ಇದೆ. ಆದುದ್ದರಿಂದ ಎಲ್ಲಾ ರೈತರು, ಭಾಧಿತ ಗ್ರಾಮಸ್ಥರು, ಸಂಘ ಸಂಸ್ಥೆಗಳು ಪಕ್ಷತಿತಾವಾಗಿ, ಧರ್ಮತಿತವಾಗಿ ಈ ಹೋರಾಟಕ್ಕೆ ಬೆಂಬಲ ಕೊಡಬೇಕಾಗಿ ಕೇಳಿಕೊಳ್ಳುತ್ತೇನೆ. ರೈತರಿಗೆ ಮಾನಸಿಕ ಒತ್ತಡ ಕೊಡುವಂತ ಈ ಸಮಸ್ಯೆಗಳಿಗೆ ತಾರ್ಕಿಕವಾದ ಅಂತ್ಯ ಕಾಣುವ ತನಕ ಹೋರಾಟ ಮುಂದುವರಿಸಬೇಕಾಗಿದೆ. ಈ ಹೋರಾಟಕ್ಕೆ ಸಂಪೂರ್ಣ ಬೆಂಬಲವನ್ನು ಕೊಡಬೇಕಾಗಿ ಸಾರ್ವಜನಿಕರಲ್ಲಿ ಮನವಿ ಮಾಡುತ್ತೇನೆ ಎಂದು ತಿಳಿಸಿದರು.

,

Related posts

ನೆತ್ತರ ಅಂಗನವಾಡಿ ಕೇಂದ್ರದಲ್ಲಿ ಪೊಷಣ್ ಅಭಿಯಾನದಡಿ ಸಿರಿಧಾನ್ಯ ಮಾಹಿತಿ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ತಾಲೂಕು ಮಟ್ಟದ ಸ್ವಾಸ್ತ್ಯ ಸಂಕಲ್ಪ ಸಪ್ತಾಹ

Suddi Udaya

ಮಾ.12: ಮದ್ದಡ್ಕತಾಯಿ ಶ್ರೀ ರಕ್ತೇಶ್ವರಿ, ಪಿಲಿಚಾಮುಂಡಿ ದೈವಸ್ಥಾನದ ದೈವಗಳ ಪ್ರತಿಷ್ಠಾ ಕಾರ್ಯಕ್ರಮ-ಆಮoತ್ರಣ ಪತ್ರಿಕೆ ಬಿಡುಗಡೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಿಂಶತಿ ಸಂಭ್ರಮ ಹಾಗೂ ಕಾಲೇಜಿನ ವಾರ್ಷಿಕೋತ್ಸವ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್ ಕಾಲೇಜಿನಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿ ಆಚರಣೆ

Suddi Udaya

ಸಾಮಾಜಿಕ ಕ್ಷೇತ್ರದ ಧುರೀಣ ಈಶ್ವರ ಭಟ್ ಕಾಂತಾಜೆ ನಿಧನ

Suddi Udaya
error: Content is protected !!