July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಹೋರಾಟಗಳಿಗೆ ಸಾರ್ವಜನಿಕರು ಬೆಂಬಲ ನೀಡಬೇಕು: ಧರ್ಮಗುರು ಫಾ. ಆದರ್ಶ್ ಜೋಸೆಫ್

ಬೆಳ್ತಂಗಡಿ: ಪಶ್ಚಿಮ ಘಟ್ಟದ ತಪ್ಪಲಿನ ಅಂಚಿನಲ್ಲಿರುವ ಗ್ರಾಮಗಳಿಗೆ ಹಾಗೂ ರೈತರ ಕೃಷಿ ಜಾಗಗಳಿಗೆ ಕಸ್ತೂರಿ ರಂಗನ್ ವರದಿಯಿಂದ ಆಗುವ ತೊಂದರೆಗಳ ವಿರುದ್ದ ‘ಮಲನಾಡು ಜನ ಹಿತ ರಕ್ಷಣಾ ವೇದಿಕೆಯ’ ನೇತೃತ್ವದಲ್ಲಿ ನ. 15 ರಂದು ಗುಂಡ್ಯದಲ್ಲಿ ನಡೆಯಲಿರುವ ಪ್ರತಿಭಟನೆಗೆ ಸಂಪೂರ್ಣ ಬೆಂಬಲವನ್ನು ನೀಡುವುದಾಗಿ ಪುದುವೆಟ್ಟು ಗುತ್ತಿಗಾರು ಧರ್ಮಗುರು ಫಾ. ಆದರ್ಶ್ ಜೋಸೆಫ್ ತಿಳಿಸಿದರು.

ಹತ್ತು ಹಲವಾರು ಸಮಸ್ಯೆಗಳಿಂದ ನಮ್ಮ ರೈತರು ಮಾನಸಿಕ ಹಿಂಸೆಗೆ ಒಳಗಾಗುತ್ತಿದ್ದಾರೆ. ಅದರಲ್ಲಿ ಅವೈಜಾನಿಕ ಕಸ್ತೂರಿ ರಂಗನ್ ವರದಿ, ಪಶ್ಚಿಮ ಘಟ್ಟ ಮತ್ತು ಜನವಸತಿ ಕೇಂದ್ರಗಳ ಗಡಿ ಗುರುತು ಆಗದೇ ಇರುವುದು, ಫ್ಲೋಟಿಂಗ್ ಸಮಸ್ಯೆ, ಹಾಗೂ ಕಂದಾಯ ಮತ್ತು ಅರಣ್ಯ ಇಲಾಖೆಯಿಂದ ಜಂಟಿ ಸರ್ವೇ ಆಗದೇ ಇರುವುದು. ಈ ಎಲ್ಲಾ ಸಮಸ್ಯೆಗಳಿಂದ ರೈತರ ಬದುಕು ತ್ರಿಶಂಕು ಲೋಕದಲ್ಲಿ ಇದೆ. ಆದುದ್ದರಿಂದ ಎಲ್ಲಾ ರೈತರು, ಭಾಧಿತ ಗ್ರಾಮಸ್ಥರು, ಸಂಘ ಸಂಸ್ಥೆಗಳು ಪಕ್ಷತಿತಾವಾಗಿ, ಧರ್ಮತಿತವಾಗಿ ಈ ಹೋರಾಟಕ್ಕೆ ಬೆಂಬಲ ಕೊಡಬೇಕಾಗಿ ಕೇಳಿಕೊಳ್ಳುತ್ತೇನೆ. ರೈತರಿಗೆ ಮಾನಸಿಕ ಒತ್ತಡ ಕೊಡುವಂತ ಈ ಸಮಸ್ಯೆಗಳಿಗೆ ತಾರ್ಕಿಕವಾದ ಅಂತ್ಯ ಕಾಣುವ ತನಕ ಹೋರಾಟ ಮುಂದುವರಿಸಬೇಕಾಗಿದೆ. ಈ ಹೋರಾಟಕ್ಕೆ ಸಂಪೂರ್ಣ ಬೆಂಬಲವನ್ನು ಕೊಡಬೇಕಾಗಿ ಸಾರ್ವಜನಿಕರಲ್ಲಿ ಮನವಿ ಮಾಡುತ್ತೇನೆ ಎಂದು ತಿಳಿಸಿದರು.

,

Related posts

ಎಕ್ಸೆಲ್ ಕಾಲೇಜಿನಲ್ಲಿ ಎಸ್ ಎಸ್ ಎಲ್ ಸಿ ನಂತರ ಮುಂದೇನು ವಿಶೇಷ ಕಾರ್ಯಾಗಾರ

Suddi Udaya

ಕುದುರೆಮುಖ, ನೇತ್ರಾವತಿ ಪೀಕ್ ಚಾರಣಕ್ಕೆ ಆನ್‌ಲೈನ್ ಮೂಲಕ ಬುಕಿಂಗ್

Suddi Udaya

ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ ಗಣರಾಜ್ಯೋತ್ಸವ ದಿನಾಚರಣೆ

Suddi Udaya

ಹಾಸನ ಜಿಲ್ಲಾ ರಾಷ್ಟ್ರೀಯ ಹೆದ್ದಾರಿ ವಿಭಾಗದ ಕಾರ್ಯಪಾಲಕ ಅಭಿಯಂತರರಾಗಿ ಶಿವಪ್ರಸಾದ್ ಅಜಿಲರಿಗೆ ಹೆಚ್ಚುವರಿ ಜವಾಬ್ದಾರಿ: ಇಂದು ಅಧಿಕಾರ ಸ್ವೀಕಾರ

Suddi Udaya

ಕುಮ್ಕಿ ಜಮೀನಿನ ಹಕ್ಕನ್ನು ರೈತರಿಗೆ ನೀಡುವ ಕುರಿತಾಗಿ ಸದನದಲ್ಲಿ ಧ್ವನಿ ಎತ್ತಿದ ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಡಾ|| ವೀರೇoದ್ರ ಹೆಗ್ಗಡೆಯವರ ಪಟ್ಟಾಭಿಷೇಕದ ವರ್ಧoತಿ ಪ್ರಯುಕ್ತ ಗೌರವಾರ್ಪಣೆ

Suddi Udaya
error: Content is protected !!