ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಹೋರಾಟಗಳಿಗೆ ಸಾರ್ವಜನಿಕರು ಬೆಂಬಲ ನೀಡಬೇಕು: ಧರ್ಮಗುರು ಫಾ. ಆದರ್ಶ್ ಜೋಸೆಫ್

ಬೆಳ್ತಂಗಡಿ: ಪಶ್ಚಿಮ ಘಟ್ಟದ ತಪ್ಪಲಿನ ಅಂಚಿನಲ್ಲಿರುವ ಗ್ರಾಮಗಳಿಗೆ ಹಾಗೂ ರೈತರ ಕೃಷಿ ಜಾಗಗಳಿಗೆ ಕಸ್ತೂರಿ ರಂಗನ್ ವರದಿಯಿಂದ ಆಗುವ ತೊಂದರೆಗಳ ವಿರುದ್ದ ‘ಮಲನಾಡು ಜನ ಹಿತ ರಕ್ಷಣಾ ವೇದಿಕೆಯ’ ನೇತೃತ್ವದಲ್ಲಿ ನ. 15 ರಂದು ಗುಂಡ್ಯದಲ್ಲಿ ನಡೆಯಲಿರುವ ಪ್ರತಿಭಟನೆಗೆ ಸಂಪೂರ್ಣ ಬೆಂಬಲವನ್ನು ನೀಡುವುದಾಗಿ ಪುದುವೆಟ್ಟು ಗುತ್ತಿಗಾರು ಧರ್ಮಗುರು ಫಾ. ಆದರ್ಶ್ ಜೋಸೆಫ್ ತಿಳಿಸಿದರು.

ಹತ್ತು ಹಲವಾರು ಸಮಸ್ಯೆಗಳಿಂದ ನಮ್ಮ ರೈತರು ಮಾನಸಿಕ ಹಿಂಸೆಗೆ ಒಳಗಾಗುತ್ತಿದ್ದಾರೆ. ಅದರಲ್ಲಿ ಅವೈಜಾನಿಕ ಕಸ್ತೂರಿ ರಂಗನ್ ವರದಿ, ಪಶ್ಚಿಮ ಘಟ್ಟ ಮತ್ತು ಜನವಸತಿ ಕೇಂದ್ರಗಳ ಗಡಿ ಗುರುತು ಆಗದೇ ಇರುವುದು, ಫ್ಲೋಟಿಂಗ್ ಸಮಸ್ಯೆ, ಹಾಗೂ ಕಂದಾಯ ಮತ್ತು ಅರಣ್ಯ ಇಲಾಖೆಯಿಂದ ಜಂಟಿ ಸರ್ವೇ ಆಗದೇ ಇರುವುದು. ಈ ಎಲ್ಲಾ ಸಮಸ್ಯೆಗಳಿಂದ ರೈತರ ಬದುಕು ತ್ರಿಶಂಕು ಲೋಕದಲ್ಲಿ ಇದೆ. ಆದುದ್ದರಿಂದ ಎಲ್ಲಾ ರೈತರು, ಭಾಧಿತ ಗ್ರಾಮಸ್ಥರು, ಸಂಘ ಸಂಸ್ಥೆಗಳು ಪಕ್ಷತಿತಾವಾಗಿ, ಧರ್ಮತಿತವಾಗಿ ಈ ಹೋರಾಟಕ್ಕೆ ಬೆಂಬಲ ಕೊಡಬೇಕಾಗಿ ಕೇಳಿಕೊಳ್ಳುತ್ತೇನೆ. ರೈತರಿಗೆ ಮಾನಸಿಕ ಒತ್ತಡ ಕೊಡುವಂತ ಈ ಸಮಸ್ಯೆಗಳಿಗೆ ತಾರ್ಕಿಕವಾದ ಅಂತ್ಯ ಕಾಣುವ ತನಕ ಹೋರಾಟ ಮುಂದುವರಿಸಬೇಕಾಗಿದೆ. ಈ ಹೋರಾಟಕ್ಕೆ ಸಂಪೂರ್ಣ ಬೆಂಬಲವನ್ನು ಕೊಡಬೇಕಾಗಿ ಸಾರ್ವಜನಿಕರಲ್ಲಿ ಮನವಿ ಮಾಡುತ್ತೇನೆ ಎಂದು ತಿಳಿಸಿದರು.

,

Related posts

ಪುಂಜಾಲಕಟ್ಟೆಯಲ್ಲಿ ಎಸ್.ಡಿ.ಪಿ.ಐ ಅಭ್ಯರ್ಥಿ ಅಕ್ಬರ್ ಮತ ಯಾಚನೆ

Suddi Udaya

ಉಜಿರೆ ಕಕ್ಕರೆಬೆಟ್ಟು ಮನೆ ಕೆಡವಿ, ಸೊತ್ತುಗಳನ್ನು ಹೊರಗೆ ಎಸೆದ ಪ್ರಕರಣ: ಆರೋಪಿ ವಿರುದ್ಧ ಕೇಸು ದಾಖಲು

Suddi Udaya

ಗೇರುಕಟ್ಟೆ: ವಿದ್ಯುತ್‌ ತಂತಿ ಮೇಲೆ ಅಪಾಯಕಾರಿ ಮರ

Suddi Udaya

ನಿಡ್ಲೆ: ಬೂಡುಜಾಲು ನಾಡ ದೈವ ಮತ್ತು ಉಳ್ಳಾಲ್ತಿ ಅಮ್ಮನವರ ವರ್ಷಾವಧಿ ಸೋಣ ನಡಾವಳಿ ದೊಂಪದ ಬಲಿ ಜಾತ್ರಾ ಮಹೋತ್ಸವ

Suddi Udaya

ನಡ: ಮನೆಯ ಕೊಟ್ಟಿಗೆ ನುಗ್ಗಿದ ಬೃಹತ್ ಗಾತ್ರದ ಹೆಬ್ಬಾವು: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಪ್ರತಿನಿಧಿ ಮಂಜುನಾಥ್

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಭೇಟಿ

Suddi Udaya
error: Content is protected !!