23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಹೋರಾಟಗಳಿಗೆ ಸಾರ್ವಜನಿಕರು ಬೆಂಬಲ ನೀಡಬೇಕು: ಧರ್ಮಗುರು ಫಾ. ಆದರ್ಶ್ ಜೋಸೆಫ್

ಬೆಳ್ತಂಗಡಿ: ಪಶ್ಚಿಮ ಘಟ್ಟದ ತಪ್ಪಲಿನ ಅಂಚಿನಲ್ಲಿರುವ ಗ್ರಾಮಗಳಿಗೆ ಹಾಗೂ ರೈತರ ಕೃಷಿ ಜಾಗಗಳಿಗೆ ಕಸ್ತೂರಿ ರಂಗನ್ ವರದಿಯಿಂದ ಆಗುವ ತೊಂದರೆಗಳ ವಿರುದ್ದ ‘ಮಲನಾಡು ಜನ ಹಿತ ರಕ್ಷಣಾ ವೇದಿಕೆಯ’ ನೇತೃತ್ವದಲ್ಲಿ ನ. 15 ರಂದು ಗುಂಡ್ಯದಲ್ಲಿ ನಡೆಯಲಿರುವ ಪ್ರತಿಭಟನೆಗೆ ಸಂಪೂರ್ಣ ಬೆಂಬಲವನ್ನು ನೀಡುವುದಾಗಿ ಪುದುವೆಟ್ಟು ಗುತ್ತಿಗಾರು ಧರ್ಮಗುರು ಫಾ. ಆದರ್ಶ್ ಜೋಸೆಫ್ ತಿಳಿಸಿದರು.

ಹತ್ತು ಹಲವಾರು ಸಮಸ್ಯೆಗಳಿಂದ ನಮ್ಮ ರೈತರು ಮಾನಸಿಕ ಹಿಂಸೆಗೆ ಒಳಗಾಗುತ್ತಿದ್ದಾರೆ. ಅದರಲ್ಲಿ ಅವೈಜಾನಿಕ ಕಸ್ತೂರಿ ರಂಗನ್ ವರದಿ, ಪಶ್ಚಿಮ ಘಟ್ಟ ಮತ್ತು ಜನವಸತಿ ಕೇಂದ್ರಗಳ ಗಡಿ ಗುರುತು ಆಗದೇ ಇರುವುದು, ಫ್ಲೋಟಿಂಗ್ ಸಮಸ್ಯೆ, ಹಾಗೂ ಕಂದಾಯ ಮತ್ತು ಅರಣ್ಯ ಇಲಾಖೆಯಿಂದ ಜಂಟಿ ಸರ್ವೇ ಆಗದೇ ಇರುವುದು. ಈ ಎಲ್ಲಾ ಸಮಸ್ಯೆಗಳಿಂದ ರೈತರ ಬದುಕು ತ್ರಿಶಂಕು ಲೋಕದಲ್ಲಿ ಇದೆ. ಆದುದ್ದರಿಂದ ಎಲ್ಲಾ ರೈತರು, ಭಾಧಿತ ಗ್ರಾಮಸ್ಥರು, ಸಂಘ ಸಂಸ್ಥೆಗಳು ಪಕ್ಷತಿತಾವಾಗಿ, ಧರ್ಮತಿತವಾಗಿ ಈ ಹೋರಾಟಕ್ಕೆ ಬೆಂಬಲ ಕೊಡಬೇಕಾಗಿ ಕೇಳಿಕೊಳ್ಳುತ್ತೇನೆ. ರೈತರಿಗೆ ಮಾನಸಿಕ ಒತ್ತಡ ಕೊಡುವಂತ ಈ ಸಮಸ್ಯೆಗಳಿಗೆ ತಾರ್ಕಿಕವಾದ ಅಂತ್ಯ ಕಾಣುವ ತನಕ ಹೋರಾಟ ಮುಂದುವರಿಸಬೇಕಾಗಿದೆ. ಈ ಹೋರಾಟಕ್ಕೆ ಸಂಪೂರ್ಣ ಬೆಂಬಲವನ್ನು ಕೊಡಬೇಕಾಗಿ ಸಾರ್ವಜನಿಕರಲ್ಲಿ ಮನವಿ ಮಾಡುತ್ತೇನೆ ಎಂದು ತಿಳಿಸಿದರು.

,

Related posts

ನಾರಾವಿಯಲ್ಲಿ ನಿರ್ಮಿಸಲಾದ ಚೆಕ್ ಪೋಸ್ಟ್ ಗೆ ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ, ಪರಿಶೀಲನೆ

Suddi Udaya

ಡಿ. 17: ಶ್ರೀ ಕ್ಷೇತ್ರ ಸೌತಡ್ಕದ ಗಣೇಶ ಸಭಾಭವನದಲ್ಲಿ ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ವಾರ್ಷಿಕೋತ್ಸವ

Suddi Udaya

ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯಿಂದ ದ.ಕ. ಜಿಲ್ಲೆಯ 7 ಮಸೀದಿಗಳಿಗೆ ಮೃತದೇಹ ಸಂರಕ್ಷಣಾ ಫ್ರೀಝರ್ ಹಸ್ತಾಂತರ

Suddi Udaya

ಸೌತಡ್ಕ ಸಂರಕ್ಷಣಾ ಸಮಿತಿ ನೂತನ ಅಧ್ಯಕ್ಷರಾಗಿ ಪ್ರಶಾಂತ ರೈ ಅರಂತಬೈಲು ಗೋಳಿತೊಟ್ಟು ಆಯ್ಕೆ

Suddi Udaya

ಕಣಿಯೂರು ಗ್ರಾಮ ಪಂಚಾಯತ್ ನವೀಕರಣ ತಡೆಕೋರಿ ಸಲ್ಲಿಸಿದ್ದ ಅರ್ಜಿ ವಜಾ

Suddi Udaya

ಬೆಳಾಲು ಪ್ರೌಢಶಾಲಾ ಮಕ್ಕಳಿಂದ ಬಳಂಜ ಫಾರ್ಮ್ ಭೇಟಿ

Suddi Udaya
error: Content is protected !!