22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ನಿಟ್ಟಡೆ: ಗೋಳಿಯಂಗಡಿಯಲ್ಲಿ ಬೈಕ್ ಗೆ ಡಿಕ್ಕಿಯೊಡೆದ ಆಟೋ ರಿಕ್ಷಾ

ನಿಟ್ಟಡೆ ಗ್ರಾಮದ ಗೋಳಿಯಂಗಡಿ ಎಂಬಲ್ಲಿ ಆಟೋ ರಿಕ್ಷಾವು ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾದ ಘಟನೆ ನ.7 ರಂದು ವರದಿಯಾಗಿದೆ.

ನಿಟ್ಟಡೆ ನಿವಾಸಿ ನಿರಂಜನ್ ರವರ ದೂರಿನಂತೆ ಗೋಳಿಯಂಗಡಿ ಎಂಬಲ್ಲಿ ಗುರುವಾಯನಕೆರೆ-ಮೂಡಬಿದ್ರೆ ಸಾರ್ವಜನಿಕ ರಸ್ತೆಯಲ್ಲಿ ನೈನಾಡು ಕಡೆಯಿಂದ ಅಟೋ ರಿಕ್ಷಾ ಚಾಲಕ ಅಬ್ದುಲ್‌ ಖಾದರ್‌ ರವರು ದುಡುಕುತನ ಹಾಗೂ ನಿರ್ಲಕ್ಷ ತನದಿಂದ ಚಲಾಯಿಸಿಕೊಂಡು ಗುರುವಾಯನಕೆರೆ- ವೇಣೂರು ಮುಖ್ಯ ರಸ್ತೆಗೆ ಒಮ್ಮೆಲೇ ಚಲಾಯಿಸಿ ಗುರುವಾಯನಕೆರೆ ಕಡೆಯಿಂದ ಬರುತ್ತಿದ್ದ ದ್ವಿಚಕ್ರ ಕ್ಕೆ ರಭಸದಿಂದ ಡಿಕ್ಕಿ ಹೊಡೆದ ಪರಿಣಾಮ ವಾಹನಗಳೆರಡೂ ಜಖಂಗೊಂಡು ದ್ವಿಚಕ್ರ ವಾಹನ ಸವಾರ ಸುದೀಪ್ ರವರು ದ್ವಿಚಕ್ರದೊಂದಿಗೆ ರಸ್ತೆಗೆ ಬಿದ್ದು ಮುಖಕ್ಕೆ ಕೈಕಾಲುಗಳಿಗೆ ರಕ್ತ ಗಾಯ ಹಾಗೂ ಗುದ್ದಿದ ಗಾಯಗಳಾಗಿ ಬಂಟ್ವಾಳ ಸರಕಾರಿ ಆಸ್ಪತೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಫಾಧರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿ ದಾಖಲಾಗಿರುವುದಾಗಿದೆ,. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ನ .29: ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ವಾಹನಗಳ ಹರಾಜು

Suddi Udaya

ನಾಳೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಾತ್ರೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣೆ ಶೇ. 73.64 ಮತದಾನ

Suddi Udaya

ಬೆಳ್ತಂಗಡಿ ಕೋಟಕ್ ಲೈಫ್ 2ನೇ ವರ್ಷಕ್ಕೆ ಪಾದಾರ್ಪಣೆ

Suddi Udaya

ಅನೀಶ್‌ ನಿರ್ದೇಶನದ ದಸ್ಕತ್‌ ತುಳು ಸಿನಿಮಾಕ್ಕೆ ಪ್ರಶಸ್ತಿಯ ಗೌರವ

Suddi Udaya

ಭಾರೀ ಮಳೆ ಹಿನ್ನೆಲೆ: ಇಂದು (ಮೇ 30) ದ.ಕ.ಜಿಲ್ಲೆಯ ಶಾಲೆಗಳಿಗೆ ರಜೆಘೋಷಣೆ

Suddi Udaya
error: Content is protected !!