25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನ.9: ನಾಳ-ಗೇರುಕಟ್ಟೆ ಯಕ್ಷಾರಾಧನಾ ಕಲಾ ಪ್ರತಿಷ್ಠಾನ ಸಹಯೋಗದೊಂದಿಗೆ “ಯಕ್ಷೋತ್ಸವ”

ಗೇರುಕಟ್ಟೆ : ಕರ್ನಾಟಕ ಯಕ್ಷಗಾನ ಅಕಾಡೆಮಿ, ಬೆಂಗಳೂರು ಇದರ ಆಶ್ರಯದಲ್ಲಿ ಯಕ್ಷಾರಾಧನಾ ಕಲಾ ಪ್ರತಿಷ್ಠಾನ ನಾಳ-ಗೇರುಕಟ್ಟೆ ಇದರ ಸಹಯೋಗದೊಂದಿಗೆ ನ.9 ರಂದು ಪೂರ್ವಾಹ್ನ ಗಂಟೆ 11.೦೦ ರಿಂದ ಶ್ರೀ ಗಣೇಶೋತ್ಸವ ಸಭಾ ಭವನ ಗೇರುಕಟ್ಟೆಯಲ್ಲಿ “ಯಕ್ಷೋತ್ಸವ” ಕಾರ್ಯಕ್ರಮ ಜರಗಲಿದೆ.


ಶ್ರೀ ಕ್ಷೇತ್ರ ನಾಳ ಪ್ರಧಾನ ಅರ್ಚಕ ವೇ| ಮೂ| ರಾಘವೇಂದ್ರ ಅಸ್ರಣ್ಣ, ರವರು ಪೂರ್ವಾಹ್ನ ಯಕ್ಷೋತ್ಸವ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ ತಲ್ಲೂರು ಶ್ರೀ ಶಿವರಾಮ ಶೆಟ್ಟಿ ವಹಿಸಲಿದ್ದಾರೆ. ದಿವಾಕರ ಎಂ, ಡಾ. ಅನಂತ ಭಟ್, ಶ್ರೀಕೃಷ್ಣ. ಕೆ. ಇವರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ಜರಗಲಿದೆ.


ಆ ಬಳಿಕ ಯಕ್ಷಭಜನೆ, ಯಕ್ಷಗಾನ ತಾಳಮದ್ದಳೆ, ಮಕ್ಕಳ ಯಕ್ಷಗಾನ ಮತ್ತು ತೆಂಕುತಿಟ್ಟಿನ ಅಗ್ರಮಾನ್ಯ ವೃತ್ತಿಪರ ಮೇಳಗಳ ಕಲಾವಿದರ ಕೂಡುವಿಕೆಯಿಂದ ‘ಸಂಪೂರ್ಣ ದೇವಿಮಹಾತ್ಮೆ’ ಯಕ್ಷಗಾನ ಬಯಲಾಟ ಜರುಗಲಿದೆ. ಸಂಜೆ 6.30ಕ್ಕೆ ಸಮಾರೋಪ ಸಮಾರಂಭ ಜರಗಲಿದ್ದು, ಅಧ್ಯಕ್ಷತೆಯನ್ನು ಅಕಾಡೆಮಿಯ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ವಹಿಸಲಿದ್ದಾರೆ. ಕಟೀಲಿನ ಅನುವಂಶಿಕ ಅರ್ಚಕರಾದ ವೇ|ಮೂ| ಹರಿನಾರಾಯಣ ಅಸ್ರಣ್ಣ ಆಶೀರ್ವಚನ ನೀಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶ್ರೀಮತಿ ಮಮತಾ ಗಟ್ಟಿ, ಬೆಸ್ಟ್ ಫೌಂಡೇಶನ್ ಬೆಳ್ತಂಗಡಿ ಇದರ ಅಧ್ಯಕ್ಷ ರಕ್ಷಿತ್ ಶಿವರಾಂ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಂಗಳೂರು ಇದರ ಅಧ್ಯಕ್ಷ ತಾರಾನಾಥ ಗಟ್ಟಿ, ಕಾಪಿಕಾಡು, ಶ್ರೀ ಕ್ಷೇತ್ರ ಧರ್ಮಸ್ಥಳದ ಜಮಾ ಉಗ್ರಾಣದ ನಿವೃತ್ತ ಮುತ್ಸದಿ ಭುಜಬಲಿ, ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವಸಂತ ಮಜಲು, ಮಂಗಳೂರು ಸರಕಾರಿ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಆರ್.ಎ.ಪಿ.ಸಿ.ಸಿ. ವಿಭಾಗ ಮುಖ್ಯಸ್ಥರಾದ ಸದಾಶಿವ ರಾವ್, ಬೆಂಗಳೂರು ಯುವ ಉದ್ಯಮಿ ಕಿರಣ್ ಚಂದ್ರ ‘ಡಿ’ ಪುಷ್ಪಗಿರಿ, ಕಳೆಯಬೀಡಿನ ಸುರೇಂದ್ರ ಕುಮಾರ್ ಜೈನ್, ವಿನಯ್ ಪೇರಾಜೆ, ಗೇರುಕಟ್ಟೆ ಭಾಗವಹಿಸಲಿದ್ದಾರೆ.

Related posts

ಬಜಿರೆ: ನಾಟಿ ವೈದ್ಯ ದುಗ್ಗಪ್ಪ ಗೌಡ ನಿಧನ

Suddi Udaya

ಹರಿದ್ವಾರ-ರಿಷಿಕೇಶ್ ಯಾತ್ರೆಯಲ್ಲಿ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜು ಇದರ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಭೇಟಿ

Suddi Udaya

ರಾಷ್ಟ್ರೀಯ ಸ್ವಚ್ಛತಾ ಅಭಿಯಾನದ ಪ್ರಯುಕ್ತ ಶಿಬರಾಜೆ ಪಾದೆ ಅಂಗನವಾಡಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಕರಂಬಾರು: ಮಾನಸಿಕ ಖಿನ್ನತೆಗೆ ಒಳಗಾಗಿ ನಾಗೇಶ್ ನೇಣು ಬಿಗಿದು ಆತ್ಮಹತ್ಯೆ

Suddi Udaya

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮನನೊಂದು ಸುತ್ತಾಡುತ್ತಿದ್ದ ಮಹಿಳೆಗೆ ಸಾಂತ್ವನ ಹೇಳಿ, ಕುಟುಂಬದ ಜೊತೆ ಕಳಿಸಿ ಮಾನವೀಯತೆ ಮೆರೆದ ಸಮಾಜ ಸೇವಕ ರವಿ ಕಕ್ಕೆಪದವು

Suddi Udaya
error: Content is protected !!