ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿಯಲ್ಲಿ ಪ್ರವೀಣ್ ಕ್ಯಾಪಿಟಲ್ ಪ್ರೈವೇಟ್ ಲಿಮಿಟೆಡ್ ನ 13ನೇ ಶಾಖೆ ಶುಭಾರಂಭ: ಆರ್ಥಿಕ ವರ್ಷದಲ್ಲಿ 350 ಕೋಟಿ ವಹಿವಾಟನ್ನು ತಲುಪುವ ಗುರಿ: ಅಮೋಘ ಜೆ.ರೈ

ಬೆಳ್ತಂಗಡಿ:1994ರಲ್ಲಿ ಪ್ರಾರಂಭಗೊಂಡ ಪ್ರವೀಣ್ ಕ್ಯಾಪಿಟಲ್ ಪ್ರೈವೇಟ್ ಲಿಮಿಟೆಡ್ ನ 13ನೇ ಶಾಖೆಯು ಬೆಳ್ತಂಗಡಿಯ ಹನುಮಾನ್ ಕಾಂಪ್ಲೆಕ್ಸ್, ಬಾಳಿಗ ಕಟ್ಟಡದ ಒಂದನೇ ಮಹಡಿಯಲ್ಲಿ ನ.8 ರಂದು ಉದ್ಘಾಟನೆಗೊಂಡಿತು.

ಸಂಸ್ಥೆಯ ಉದ್ಘಾಟನೆಯನ್ನು ಶಾರದಾ ಟ್ರೇಡರ್ಸ್ ಮಾಲಿಕ ರಮೇಶ್ ಭಟ್ ನೇರವೇರಿಸಿ ಶುಭ ಕೋರಿದರು.

ಸಿಇಒ ಅಮೋಘ ಜೆ.ರೈ ದೀಪ ಬೆಳಗಿಸಿ ಮಾತನಾಡಿ ಪುತ್ತೂರಿನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಸಂಸ್ಥೆಯು ಹಣಕಾಸು ಕ್ಷೇತ್ರದಲ್ಲಿ 30 ವರ್ಷಗಳ ಅನುಭವದೊಂದಿಗೆ ಕರ್ನಾಟಕ ರಾಜ್ಯದ 15 ಜಿಲ್ಲೆಗಳಲ್ಲಿ ಗ್ರಾಹಕರನ್ನು ಹೊಂದಿದೆ ಎಂದರು.

ಉದ್ಘಾಟನಾ ಸಮಾರಂಭದಲ್ಲಿ ಡಿಜಿಎಮ್ ಶ್ರೀವತ್ಸರಾಜ್, ರಿಜಿನಲ್ ಮ್ಯಾನೇಜರ್ ಉದಯ್ ಶ್ಯಾಮ್, ಬ್ರಾಂಚ್ ಮ್ಯಾನೇಜರ್ ಪ್ರದೀಪ್ ಬಂಗೇರ, ಚಾರ್ಟೆಡ್ ಅಕೌಂಟೆಂಟ್ ಹೇಮಂತ್ ಪೈ, ಬೆಳ್ತಂಗಡಿ ಹನುಮಾನ್ ಕಾಂಪ್ಲೆಕ್ಸ್ ಮಾಲಕ ಯಶವಂತ ಬಾಳಿಗ,
ತಾ.ಪಂ ಮಾಜಿ ಸದಸ್ಯರು ಶಶಿಧರ ಕಲ್ಮಂಜ,ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ನವೀ‌ನ್ ನೆರಿಯ,ವಕೀಲ ಪ್ರಶಾಂತ್, ಸ್ಪಂದನ ಲ್ಯಾಬೋರೇಟರಿ ಮುಖ್ಯಸ್ಥ ಮೆಲ್ಬಿ, ಪುತ್ತೂರು ಬ್ರಾಂಚ್ ಮ್ಯಾನೇಜರ್ ಶಿವ ಕುಮಾರ್, ಸಂಜೀವ ಎ ಬೆಳ್ತಂಗಡಿ, ಭಾರತ್ ಆಟೋ ಕಾರ್ಸ್ ನ ಪ್ರವೀಣ್ ಕುಮಾರ್ ಹೆಚ್.ಎಸ್, ಶ್ರೀರಾಮ್ ಪೈನಾನ್ಸ್ ನ ಮ್ಯಾನೇಜರ್ ಸುಭಾಶ್ ಪುದ್ದರಬೈಲು, ಪ್ರಮೋದ್ ಬಂಗೇರ ನೆರಿಯ ಮೊದಲಾದವರು ಉಪಸ್ಥಿತರಿದ್ದರು.

Related posts

ಬರೆಂಗಾಯ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಮೊಸರು ಕುಡಿಕೆ ಉತ್ಸವ

Suddi Udaya

ಚಾರ್ಮಾಡಿ: ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಕೊಕ್ಕಡ: ಹಿಂದೂ ಜಾಗರಣ ವೇದಿಕೆ ಶಿವಾಜಿ ಗ್ರೂಪ್ ಆಫ್ ಬಾಯ್ಸ್ ಕೊಕ್ಕಡ ಘಟಕ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ

Suddi Udaya

ಎಸ್‌.ಡಿ.ಎಂ ಶಿಕ್ಷಣ ಸಂಸ್ಥೆಗಳ ಶಾಲಾ ಬಸ್ಸು ಚಾಲಕರಿಗೆ “ಸ್ಟೇರಿಂಗ್ ಟುವರ್ಡ್ಸ್ ಸೇಫ್ಟಿ” ಕಾರ್ಯಾಗಾರ

Suddi Udaya

ಕೊಕ್ಕಡ: ಎಂಡೋ ಸಂತ್ರಸ್ತರ ಪುನರ್‌ವಸತಿ ಕೇಂದ್ರದ ನೂತನ ಕಟ್ಟಡಕ್ಕೆ ಶಾಸಕ ಹರೀಶ್ ಪೂಂಜರಿಂದ ಭೂಮಿ ಪೂಜೆ

Suddi Udaya

ದಿವ್ಯಾಂಗರ ಹಕ್ಕುಗಳು ಹಾಗೂ ಕಲ್ಯಾಣ ಯೋಜನೆಗಳ ಕುರಿತು ರಾಜ್ಯಪಾಲರಿಗೆ ಮನವಿ

Suddi Udaya
error: Content is protected !!