22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಂಘ-ಸಂಸ್ಥೆಗಳು

ಮಂಗಳೂರುನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗಾಗಿ ವಕೀಲರ ಸಂಘದಿಂದ ಸಮಾಲೋಚನಾ ಸಭೆ: ಮಂಗಳೂರಿನಲ್ಲಿ ನಮಗೆ ಬೇಕು ಹೈಕೋರ್ಟ್ ಪೀಠ: ಧನಂಜಯ್ ರಾವ್

ಬೆಳ್ತಂಗಡಿ: ಮಂಗಳೂರುನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಯಾಗುವಂತೆ ಕೋರಿ ಬೆಳ್ತಂಗಡಿ ವಕೀಲರ ಸಂಘ, ಬೆಳ್ತಂಗಡಿ ಹೈ ಕೋರ್ಟ್ ಪೀಠ ಹೋರಾಟ ಸಮಿತಿ ನೇತೃತ್ವದಲ್ಲಿ ತಾಲೂಕಿನ ವಿವಿಧ ಸಂಘ ಸಂಸ್ಥೆಗಳ ಜೊತೆ ಸಮಾಲೋಚನಾ ಸಭೆಯು ನ.8 ರಂದು ಬೆಳ್ತಂಗಡಿ ವಕೀಲರ ಭವನದಲ್ಲಿ ನಡೆಯಿತು.

ತಾಲೂಕು ಹೈಕೋರ್ಟ್ ಪೀಠ ಹೋರಾಟ ಸಮಿತಿ ಅಧ್ಯಕ್ಷ ಬಿ.ಕೆ. ಧನಂಜಯ್ ರಾವ್ ಪ್ರಾಸ್ತವಿಕವಾಗಿ ಮಾತನಾಡಿ, ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಯಾಗಬೇಕು ಎಂಬ ಹೋರಾಟವು ಮಂಗಳೂರು ವಕೀಲರ ಸಂಘದಿಂದ 1981 ರಿಂದ ಪ್ರಾರಂಭವಾಗಿದ್ದು ಅದಕ್ಕೆ ಪೂರಕ ಸಹಕಾರವನ್ನು ನಾವು ನೀಡುತ್ತಾ ಬಂದಿರುತ್ತೇವೆ. ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಯಾದಲ್ಲಿ ಉತ್ತರ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಶಿವಮೂಗ್ಗ ಹಾಗೂ ದ.ಕ ಜಿಲ್ಲೆಯ ಪ್ರದೇಶದ ಜನರಿಗೆ ಬಹಳ ಅನುಕೂಲವಾಗಲಿದ್ದು, ಪ್ರತಿಯೊಬ್ಬರಿಗೂ ಕೂಡ ಕಾನೂನಿನ ಮೂಲಕ ನ್ಯಾಯ ದೊರಕಿಸಲು ಸಹಕಾರಿಯಾಗುತ್ತದೆ ಅಲ್ಲದೇ ಸಮಯದ ಉಳಿತಾಯವಾಗುತ್ತದೆ. ದ.ಕ. ಜಿಲ್ಲೆಯಲ್ಲಿ 50 ಸಾವಿರ ಕೇಸ್ ಗಳು, ತಾಲೂಕಿನಲ್ಲಿ 1 ಸಾವಿರ ಕೇಸ್ ಗಳು ಪೆಂಡಿಂಗ್ ಇದೆ. ಹಾಗಾಗಿ “ನಮಗೆ ಬೇಕು ಹೈ ಕೋರ್ಟ್ ಪೀಠ” ಎಂಬ ಆಗ್ರಹವನ್ನು ಎಲ್ಲರೂ ಹೇಳಬೇಕು ಎಂದು ಹೋರಾಟದ ನಿಲುವುಗಳನ್ನು ತಿಳಿಸಿದರು.

ಮಂಗಳೂರು ವಕೀಲರ ಸಂಘದ ಅಧ್ಯಕ್ಷ ರಾಘವೇಂದ್ರ ಹೆಚ್.ವಿ. ಮಾತನಾಡಿ ಜನ ಸಾಮಾನ್ಯರು ಹೈಕೋರ್ಟ್ ಕೇಸ್ ನ ವಿಚಾರವಾಗಿ 300-400 ಕಿ.ಮೀ ದೂರವಿರುವ ಬೆಂಗಳೂರಿನತ್ತ ಪ್ರಯಾಣ ನಡೆಸಬೇಕು. ಜನರಿಗೆ ಅನುಕೂಲದ ದೃಷ್ಟಿಯಿಂದ ಮಂಗಳೂರಿನಲ್ಲಿ ಹೈ ಕೋರ್ಟ್ ಪೀಠಬೇಕು. ಈ ಹೋರಾಟಕ್ಕೆ ಪ್ರತಿಯೊಬ್ಬರ ಸಹಕಾರ ಕೂಡ ಅಗತ್ಯ ಎಂದು ಸರ್ವರಲ್ಲಿ ಸಹಕಾರ ಕೋರಿದರು.

ಈ ಸಂದರ್ಭದಲ್ಲಿ ವಿವಿಧ ಸಂಘ ಸಂಸ್ಥೆಯ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.

ವೇದಿಕೆಯಲ್ಲಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ, ಹೋರಾಟ ಸಮಿತಿ ಉಪಾಧ್ಯಕ್ಷ ಶಿವಕುಮಾರ್ ಎಸ್.ಎಂ., ಹಿರಿಯ ವಕೀಲರ ಸಂಘದ ಅಧ್ಯಕ್ಷ ಅಲೋಶಿಯಸ್ ಲೋಬೊ, ವಕೀಲರು, ಮಾಜಿ ವಿಧಾನ ಪರಿಷತ್ ಸದಸ್ಯ ಮೋನಪ್ಪ ಭಂಡಾರಿ ಉಪಸ್ಥಿತರಿದ್ದರು.

ಸರಕಾರಿ ಅಭಿಯೋಜಕ ಮನೋಹರ್ ಕುಮಾರ್ ನಿರೂಪಿಸಿದರು. ಶೈಲೇಶ್ ಆರ್ ಟೋಸಲ್ ಸ್ವಾಗತಿಸಿ, ವಕೀಲರ ಸಂಘದ ಕಾರ್ಯದರ್ಶಿ ನವೀನ್ ಬಿ.ಕೆ. ಧನ್ಯವಾದವಿತ್ತರು.

Related posts

ಬೆಳ್ತಂಗಡಿ ತಾಲೂಕು ಹಿಂದುಳಿದ ವರ್ಗ ಮೋರ್ಚಾದ ಪೂರ್ಣ ಪ್ರಮಾಣದ ಸಭೆ

Suddi Udaya

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಸಾಮೂಹಿಕ ಪ್ರಾರ್ಥನೆ

Suddi Udaya

ಗುರುವಾಯನಕೆರೆ: ಎಕ್ಸೆಲ್‌ ಪ.ಪೂ. ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಗುರು ನಮನ ಹಾಗೂ 272 ಶಿಕ್ಷಕರಿಗೆ ಗೌರವಾರ್ಪಣೆ

Suddi Udaya

ಮೂಡಬಿದ್ರಿ : ಕೋಟೆಬಾಗಿಲು ದ.ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ಮತ್ತು ಶ್ರೀ ವೀರ ಮಾರುತಿ ದೇವಸ್ಥಾನ ವತಿಯಿಂದ ಆಟಿದ ಕೂಟ

Suddi Udaya

ಕಾರಿನಲ್ಲಿ ಬಂದು ಭಾಸ್ಕರ ನಾಯ್ಕ ಹಾಗೂ ಅವರ ಪತ್ನಿಗೆ ಹಲ್ಲೆ ನಡೆಸಿದ ಆರೋಪ: ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಆರು ಮಂದಿಯ ಮೇಲೆ ಪ್ರಕರಣ ದಾಖಲು

Suddi Udaya

ಮೇ 20: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕಾರ: ಅಳದಂಗಡಿಯಲ್ಲಿ ರೋಡ್ ಶೋ, ವಿಜಯೋತ್ಸವ- ಸಂದೀಪ್ ನೀರಲ್ಕೆ

Suddi Udaya
error: Content is protected !!