March 7, 2026
Uncategorized

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಅಂಗವಾಗಿ ಕಸದಿಂದ ರಸ ಶೈಕ್ಷಣಿಕ ಕಾರ್ಯಕ್ರಮ

ಉಜಿರೆ: ಆರೋಗ್ಯಯುತ ಜೀವನ ಪದ್ಧತಿ ಅಳವಡಿಸಿಕೊಂಡು ರೋಗ ಮುಕ್ತರಾಗಬೇಕಿದೆ. ಜನರಿಗೆ ಇತ್ತೀಚೆಗೆ ಸಿದ್ದ ಆಹಾರ ಹಾಗೂ ವಿದೇಶಿ ಆಹಾರದ ಬಗ್ಗೆ ಒಲವು ತೋರುತ್ತಿದ್ದಾರೆ. ಇದು ಅನಾರೋಗ್ಯಕ್ಕೆ ಎಡೆಮಾಡಿಕೊಡುತ್ತಿದೆ ಎಂದು ಬೆಂಗಳೂರಿನ ವೈದ್ಯೆ ಡಾ. ಪೂರ್ಣಿಮಾ ಕೊಲ್ಲಿಪಾಲ್ ಹೇಳಿದರು.

ಇವರು ಮಿತ್ತಬಾಗಿಲು ಗ್ರಾಮದ ಕಿಲ್ಲೂರಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯುತ್ತಿರುವ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಅಂಗವಾಗಿ ನಡೆದ ಕಸದಿಂದ ರಸ ಎನ್ನುವ ಶೈಕ್ಷಣಿಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಶಾಲಾಭಿವೃದ್ಧಿ ಸಮಿತಿಯ ಸದಸ್ಯರಾದ ಸುಂದರ ಗೌಡ ಅವರು ಭಿತ್ತಿಪತ್ರಿಕೆಯನ್ನು ಅನಾವರಣಗೊಳಿಸಿದರು. ಬೆಳ್ತಂಗಡಿ ಆನ್ಸ್ ಕ್ಲಬ್ ಅಧ್ಯಕ್ಷೆ ಗಾಯತ್ರಿ ಶ್ರೀಧರ್ , ಉಜಿರೆ ಮಹಿಳಾ ಮಂಡಳಿ ಅಧ್ಯಕ್ಷೆ ಜಯಶ್ರೀ ಅಪ್ರಮೇಯ , ಸಂಪನ್ಮೂಲ ವ್ಯಕ್ತಿ ಚೇತನಾ ಅವರು ಕಸದಿಂದ ರಸ ವಿಷಯವಾಗಿ ಅನೇಕ ಗಿಡಗಳು ,ಹೂವುಗಳ ವಿವಿಧ ಕಲಾಕೃತಿ ರಚನೆಗಳ ಪ್ರಾತ್ಯಕ್ಷಿಕೆ ಮಾಡಿದರು.

ಕಿಲ್ಲೂರಿನ ಸರಕಾರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ರಮೇಶ್ ಪೈಲಾರ್ ಅವರಿಗೆ ಶಾಲಾ ಆವರಣದಲ್ಲಿ ನೆಡಲು ವಿವಿಧ ಹಣ್ಣುಗಳ ಗಿಡಗಳನ್ನು ಹಾಗೂ ಅನೇಕ ತರಕಾರಿ ಬೀಜಗಳನ್ನು ಆನ್ಸ್ ಕ್ಲಬ್ ಹಾಗೂ ಉಜಿರೆ ಮಹಿಳಾ ಮಂಡಳಿ ವತಿಯಿಂದ ನೀಡಿದರು.

ರಾ.ಸೇ ಯೋಜನೆಯ ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ , ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ ಗೌರವಿಸಿದರು.
ಅಭಿಜಿತ್ ಸ್ವಾಗತಿಸಿ , ಸಿಂಚನಾ ವಂದಿಸಿದರು. ಸಂಜನಾ ಬಿ. ಜೆ. ನಿರೂಪಿಸಿದರು.

Related posts

ಬೆಳ್ತಂಗಡಿ : ಮೂರುಗೋಳಿಯ ಪ್ರವೀಣ್.ಎಂ‌‌ ಅವರಿಗೆ ಮುಖ್ಯಮಂತ್ರಿ ಪದಕ ಪ್ರದಾನ:

Suddi Udaya

ನಿಡ್ಲೆ ಸಿಡಿಲು ಬಡಿದು ಹಾನಿಗೊಳಗಾದ ರಾಜೇಂದ್ರ ಗೌಡ ರವರ ಮನೆಗೆ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನಿಂದ ಭೇಟಿ

Suddi Udaya

ಜೂ.30 : ಕೊಕ್ಕಡ ಮಿಯಾವಕಿ ಅರಣ್ಯೀಕರಣ ಗಿಡನಾಟಿ ಕಾರ್ಯಕ್ರಮ

Suddi Udaya

ಅಳದಂಗಡಿಯಲ್ಲಿ ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆಯ ಶೆಡ್ ಗೆ ಬಂತು ಸೋಲಾರ್ ಲೈಟ್ – ಡಿ .ಸಿ. ಕರೆ ಮಾಡಿ ಅಜ್ಜಿಯ ಬಗ್ಗೆ ಮಾಹಿತಿ ಸಂಗ್ರಹ: ‌ಸುದ್ದಿ ಉದಯ ಪತ್ರಿಕೆಯ ಸ್ಪೆಷಲ್ ರಿಪೋರ್ಟ್ ಗೆ ಸಾರ್ವಜನಿಕರ ವ್ಯಾಪಕ ಮೆಚ್ಚುಗೆ

Suddi Udaya

ವೇಣೂರು: 32ನೇ ವರ್ಷದ ವೇಣೂರು-ಪೆರ್ಮುಡ ಸೂರ್ಯ -ಚಂದ್ರ ಜೋಡುಕರೆ ಕಂಬಳ ಉದ್ಘಾಟನೆ

Suddi Udaya

ನಾಳೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಾತ್ರೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!