September 6, 2026
Uncategorized

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಅಂಗವಾಗಿ ಕಸದಿಂದ ರಸ ಶೈಕ್ಷಣಿಕ ಕಾರ್ಯಕ್ರಮ

ಉಜಿರೆ: ಆರೋಗ್ಯಯುತ ಜೀವನ ಪದ್ಧತಿ ಅಳವಡಿಸಿಕೊಂಡು ರೋಗ ಮುಕ್ತರಾಗಬೇಕಿದೆ. ಜನರಿಗೆ ಇತ್ತೀಚೆಗೆ ಸಿದ್ದ ಆಹಾರ ಹಾಗೂ ವಿದೇಶಿ ಆಹಾರದ ಬಗ್ಗೆ ಒಲವು ತೋರುತ್ತಿದ್ದಾರೆ. ಇದು ಅನಾರೋಗ್ಯಕ್ಕೆ ಎಡೆಮಾಡಿಕೊಡುತ್ತಿದೆ ಎಂದು ಬೆಂಗಳೂರಿನ ವೈದ್ಯೆ ಡಾ. ಪೂರ್ಣಿಮಾ ಕೊಲ್ಲಿಪಾಲ್ ಹೇಳಿದರು.

ಇವರು ಮಿತ್ತಬಾಗಿಲು ಗ್ರಾಮದ ಕಿಲ್ಲೂರಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯುತ್ತಿರುವ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಅಂಗವಾಗಿ ನಡೆದ ಕಸದಿಂದ ರಸ ಎನ್ನುವ ಶೈಕ್ಷಣಿಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಶಾಲಾಭಿವೃದ್ಧಿ ಸಮಿತಿಯ ಸದಸ್ಯರಾದ ಸುಂದರ ಗೌಡ ಅವರು ಭಿತ್ತಿಪತ್ರಿಕೆಯನ್ನು ಅನಾವರಣಗೊಳಿಸಿದರು. ಬೆಳ್ತಂಗಡಿ ಆನ್ಸ್ ಕ್ಲಬ್ ಅಧ್ಯಕ್ಷೆ ಗಾಯತ್ರಿ ಶ್ರೀಧರ್ , ಉಜಿರೆ ಮಹಿಳಾ ಮಂಡಳಿ ಅಧ್ಯಕ್ಷೆ ಜಯಶ್ರೀ ಅಪ್ರಮೇಯ , ಸಂಪನ್ಮೂಲ ವ್ಯಕ್ತಿ ಚೇತನಾ ಅವರು ಕಸದಿಂದ ರಸ ವಿಷಯವಾಗಿ ಅನೇಕ ಗಿಡಗಳು ,ಹೂವುಗಳ ವಿವಿಧ ಕಲಾಕೃತಿ ರಚನೆಗಳ ಪ್ರಾತ್ಯಕ್ಷಿಕೆ ಮಾಡಿದರು.

ಕಿಲ್ಲೂರಿನ ಸರಕಾರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ರಮೇಶ್ ಪೈಲಾರ್ ಅವರಿಗೆ ಶಾಲಾ ಆವರಣದಲ್ಲಿ ನೆಡಲು ವಿವಿಧ ಹಣ್ಣುಗಳ ಗಿಡಗಳನ್ನು ಹಾಗೂ ಅನೇಕ ತರಕಾರಿ ಬೀಜಗಳನ್ನು ಆನ್ಸ್ ಕ್ಲಬ್ ಹಾಗೂ ಉಜಿರೆ ಮಹಿಳಾ ಮಂಡಳಿ ವತಿಯಿಂದ ನೀಡಿದರು.

ರಾ.ಸೇ ಯೋಜನೆಯ ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ , ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ ಗೌರವಿಸಿದರು.
ಅಭಿಜಿತ್ ಸ್ವಾಗತಿಸಿ , ಸಿಂಚನಾ ವಂದಿಸಿದರು. ಸಂಜನಾ ಬಿ. ಜೆ. ನಿರೂಪಿಸಿದರು.

Related posts

ಪುದುವೆಟ್ಟು ಗ್ರಾ.ಪಂ.ನ ಗ್ರಾಮ ಸಭೆ

Suddi Udaya

ಕಾರಿಂಜ ಶ್ರೀ ವನಶಾಸ್ತಾರ ಶ್ರೀ ವೀರಭದ್ರ ಸ್ವಾಮಿದೇವರ ಪುನರ್‌ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಚಾಲನೆ: ಭವ್ಯ ಮೆರವಣಿಗೆಯೊಂದಿಗೆ ಹಸಿರು ಹೊರೆಕಾಣಿಕೆ ಸಮರ್ಪಣೆ

Suddi Udaya

ಗೇರುಕಟ್ಟೆ ಪೇಟೆಯ ಬಳಿಯ ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಶ ವ ಪತ್ತೆ

Suddi Udaya

ದೇಶಭಕ್ತಿ ಗೀತೆ ಸ್ಪರ್ಧೆ: ಉಜಿರೆ ಶ್ರೀ. ಧ. ಮಂ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಕೊಕ್ಕಡ: ಉಪ್ಪಾರಪಳಿಕೆಯಲ್ಲಿ ಕೋಳಿ ಗೂಡಿನಲ್ಲಿ ಬೃಹತ್ ಗಾತ್ರದ ನಾಗರಹಾವು ಪತ್ತೆ

Suddi Udaya

.ಸುಬ್ರಹ್ಮಣ್ಯ ಭಟ್ಟರು ಬರೆದ ಪೌರಾಣಿಕ ಕಾದಂಬರಿ “ಸುಜ್ಞಾನಿ ಸಹದೇವ” ವನ್ನು  ಇಂದು ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆ

Suddi Udaya
error: Content is protected !!