25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಳೆಂಜ ನಡುಜಾರು ಸ.ಕಿ.ಪ್ರಾ. ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

ಕಳೆಂಜ: ಇಲ್ಲಿಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ನಡುಜಾರು ಮತ್ತು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಹಿರಿಯ ವಿದ್ಯಾರ್ಥಿ ಸಂಘ ಇವರ ಸಹಭಾಗಿತ್ವದಲ್ಲಿ ನ್ಯೂ ವಿಷನ್ ಜನರೇಷನ್ ಕಾರ್ಯಕ್ರಮ ಕಾರ್ಯಕ್ರಮದಡಿಯಲ್ಲಿ 2.5 NVG eyeMiTRA ಸುರತ್ಕಲ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ಅಂಧತ್ವ ವಿಭಾಗ) ಇವರ ಜಂಟಿ ಆಶ್ರಯದಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರವು ನ.8 ರಂದು ನಡುಜಾರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಶಿಬಿರವನ್ನು ನಡುಜಾರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಎಸ್.ಡಿ.ಎಮ್.ಸಿ ಅಧ್ಯಕ್ಷ ಹರೀಶ್ ಕೆ.ಬಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರು, ಎಸ್.ಡಿ.ಎಮ್.ಸಿ ಸದಸ್ಯರು, ಶಾಲಾ ಶಿಕ್ಷಕರು, ಊರಿನ ನಾಗರಿಕರು, ಶಾಲಾ ವಿದ್ಯಾರ್ಥಿಗಳು, ಅಂಗನವಾಡಿ ಕಾರ್ಯಕರ್ತೆ ಹಾಗೂ ಪುಟಾಣಿಗಳು ಉಪಸ್ಥಿತರಿದ್ದರು.

ಶಿಬಿರದಲ್ಲಿ ಕಂಪ್ಯೂಟರೀಕೃತ ಕಣ್ಣಿನ ಉಚಿತ ತಪಾಸಣೆ, 5ರಿಂದ 15 ವಯಸ್ಸಿನವರೆಗೆ ಕಣ್ಣಿನ ತೊಂದರೆ ಇರುವ ಮಕ್ಕಳಿಗೆ ಶಿಬಿರದ ಪ್ರಯುಕ್ತ ಉಚಿತವಾಗಿ ಕನ್ನಡಕ ವಿತರಣೆ, ಶಿಬಿರದಲ್ಲಿ ಸಮೀಪ ದೃಷ್ಟಿ (Near Vision) ತೊಂದರೆಯವರಿಗೆ ಉಚಿತ ಕನ್ನಡಕ ವಿತರಣೆ, 15 ವಯಸ್ಸಿಗಿಂತ ಮೇಲ್ಪಟ್ಟು ದೂರದೃಷ್ಟಿ ಮತ್ತು ಸಮೀಪ ದೃಷ್ಟಿ ತೊಂದರೆ ಇರುವ ಅಗತ್ಯವುಳ್ಳವರಿಗೆ ಕನ್ನಡಕ ರಿಯಾಯಿತಿ ದರದಲ್ಲಿ ವಿತರಣೆ ಹಾಗೂ ಶಿಬಿರದಲ್ಲಿ ಅಗತ್ಯವುಳ್ಳವರಿಗೆ ಕಣ್ಣಿನ ಪೊರೆ ಚಿಕಿತ್ಸೆಯ ಬಗ್ಗೆ ಮಾಹಿತಿ ನೀಡಲಾಯಿತು.

Related posts

ಬೆಳ್ತಂಗಡಿ: ಸ.ಪ್ರ. ದರ್ಜೆ ಕಾಲೇಜಿನಲ್ಲಿ ಮತದಾರರ ಜಾಗೃತಿ ಅರಿವು ಕಾರ್ಯಕ್ರಮ

Suddi Udaya

ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದ ಮಹಿಳೆಯ ಬ್ಯಾಗ್‌ನಲ್ಲಿದ್ದ ನಗದು ಸಹಿತ ಸುಮಾರು ರೂ. 12.90 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya

ಎಸ್.ಡಿ.ಎಂ ಪಾಲಿಟೆಕ್ನಿಕ್: ಪ್ರಾರಂಭೋತ್ಸವ ಸಮಾರಂಭ

Suddi Udaya

ಶಾಸಕ ಹರೀಶ್ ಪೂಂಜರಿಂದ ರಾಜ್ಯ ಕಂದಾಯ ಇಲಾಖೆಯ ಕಾರ್ಯದರ್ಶಿ ಮೌನೀಶ್ ಮೌದ್ಧಿಗಲ್ ರವರ ಭೇಟಿ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಕಂಪ್ಯೂಟರ್ ಡಿ.ಟಿ.ಪಿ ಮತ್ತು ಮಹಿಳಾ ಟೈಲರಿಂಗ್ ತರಬೇತಿಯ ಸಮಾರೋಪ

Suddi Udaya

ಬೆಳ್ತಂಗಡಿ ಅಗ್ನಿಶಾಮಕ ಠಾಣೆಗೆ ಹೊಸ ವಾಹನ , ಅತ್ಯಾಧುನಿಕ ವ್ಯವಸ್ಥೆ ಒಳಗೊಂಡ ವಾಹನ ಆಪತ್ತಿನ ಸೇವೆಗೆ ಸಜ್ಜಾಗಿದೆ

Suddi Udaya
error: Content is protected !!