23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಹೋರಾಟಗಳಿಗೆ ಸಾರ್ವಜನಿಕರು ಬೆಂಬಲ ನೀಡಬೇಕು: ಧರ್ಮಗುರು ಫಾ. ಆದರ್ಶ್ ಜೋಸೆಫ್

ಬೆಳ್ತಂಗಡಿ: ಪಶ್ಚಿಮ ಘಟ್ಟದ ತಪ್ಪಲಿನ ಅಂಚಿನಲ್ಲಿರುವ ಗ್ರಾಮಗಳಿಗೆ ಹಾಗೂ ರೈತರ ಕೃಷಿ ಜಾಗಗಳಿಗೆ ಕಸ್ತೂರಿ ರಂಗನ್ ವರದಿಯಿಂದ ಆಗುವ ತೊಂದರೆಗಳ ವಿರುದ್ದ ‘ಮಲನಾಡು ಜನ ಹಿತ ರಕ್ಷಣಾ ವೇದಿಕೆಯ’ ನೇತೃತ್ವದಲ್ಲಿ ನ. 15 ರಂದು ಗುಂಡ್ಯದಲ್ಲಿ ನಡೆಯಲಿರುವ ಪ್ರತಿಭಟನೆಗೆ ಸಂಪೂರ್ಣ ಬೆಂಬಲವನ್ನು ನೀಡುವುದಾಗಿ ಪುದುವೆಟ್ಟು ಗುತ್ತಿಗಾರು ಧರ್ಮಗುರು ಫಾ. ಆದರ್ಶ್ ಜೋಸೆಫ್ ತಿಳಿಸಿದರು.

ಹತ್ತು ಹಲವಾರು ಸಮಸ್ಯೆಗಳಿಂದ ನಮ್ಮ ರೈತರು ಮಾನಸಿಕ ಹಿಂಸೆಗೆ ಒಳಗಾಗುತ್ತಿದ್ದಾರೆ. ಅದರಲ್ಲಿ ಅವೈಜಾನಿಕ ಕಸ್ತೂರಿ ರಂಗನ್ ವರದಿ, ಪಶ್ಚಿಮ ಘಟ್ಟ ಮತ್ತು ಜನವಸತಿ ಕೇಂದ್ರಗಳ ಗಡಿ ಗುರುತು ಆಗದೇ ಇರುವುದು, ಫ್ಲೋಟಿಂಗ್ ಸಮಸ್ಯೆ, ಹಾಗೂ ಕಂದಾಯ ಮತ್ತು ಅರಣ್ಯ ಇಲಾಖೆಯಿಂದ ಜಂಟಿ ಸರ್ವೇ ಆಗದೇ ಇರುವುದು. ಈ ಎಲ್ಲಾ ಸಮಸ್ಯೆಗಳಿಂದ ರೈತರ ಬದುಕು ತ್ರಿಶಂಕು ಲೋಕದಲ್ಲಿ ಇದೆ. ಆದುದ್ದರಿಂದ ಎಲ್ಲಾ ರೈತರು, ಭಾಧಿತ ಗ್ರಾಮಸ್ಥರು, ಸಂಘ ಸಂಸ್ಥೆಗಳು ಪಕ್ಷತಿತಾವಾಗಿ, ಧರ್ಮತಿತವಾಗಿ ಈ ಹೋರಾಟಕ್ಕೆ ಬೆಂಬಲ ಕೊಡಬೇಕಾಗಿ ಕೇಳಿಕೊಳ್ಳುತ್ತೇನೆ. ರೈತರಿಗೆ ಮಾನಸಿಕ ಒತ್ತಡ ಕೊಡುವಂತ ಈ ಸಮಸ್ಯೆಗಳಿಗೆ ತಾರ್ಕಿಕವಾದ ಅಂತ್ಯ ಕಾಣುವ ತನಕ ಹೋರಾಟ ಮುಂದುವರಿಸಬೇಕಾಗಿದೆ. ಈ ಹೋರಾಟಕ್ಕೆ ಸಂಪೂರ್ಣ ಬೆಂಬಲವನ್ನು ಕೊಡಬೇಕಾಗಿ ಸಾರ್ವಜನಿಕರಲ್ಲಿ ಮನವಿ ಮಾಡುತ್ತೇನೆ ಎಂದು ತಿಳಿಸಿದರು.

,

Related posts

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ: ಮುಂಡೂರು ಶಾಲೆಯ ಮುಖ್ಯ ಶಿಕ್ಷಕ ಕಲ್ಲೇಶಪ್ಪ ಕೆ.ಬಿ. ಆಯ್ಕೆ

Suddi Udaya

ಬೆಳ್ತಂಗಡಿ ಧರ್ಮಾಧ್ಯಕ್ಷರ ಪೀಠಾರೋಹಣ ವರ್ದಂತಿ: ನೆಲ್ಯಾಡಿ ಅಲ್ಫೋನ್ಸ ಚರ್ಚ್ ವತಿಯಿಂದ ಶುಭಾಶಯ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಬಿಷಪ್ ಜೇಮ್ಸ್ ಪಟ್ಟೇರಿಲ್ ರವರನ್ನು ಅಭಿನಂದಿಸಿದ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

Suddi Udaya

ಗೇರುಕಟ್ಟೆ : ಶ್ರೀನಿಧಿ ಮೆಡಿಕಲ್ ಶುಭಾರಂಭ

Suddi Udaya

ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ: ತೋರಣ ಮೂಹೂರ್ತ, ಹೊರೆಕಾಣಿಕೆ ಸಮರ್ಪಣೆ

Suddi Udaya

ಕಳಿಯ ಗ್ರಾ.ಪಂ. ನಲ್ಲಿ ಹುಚ್ಚು ನಾಯಿ ಉಚಿತ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya
error: Content is protected !!