July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ: ಯಕ್ಷೋತ್ಸವ ಕಾರ್ಯಕ್ರಮ ಉದ್ಘಾಟನೆ

ಕಳಿಯ: ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು, ಯಕ್ಷಾರಾಧನ ಕಲಾ ಪ್ರತಿಷ್ಠಾನ, ನಾಳ -ಗೇರುಕಟ್ಟೆ ಇದರ ಸಹಯೋಗದೊಂದಿಗೆ ಯಕ್ಷೋತ್ಸವ ಕಾರ್ಯಕ್ರಮ ನ.9ರಂದು ಗೇರುಕಟ್ಟೆ ಮಂಜಲಡ್ಕ ಗಣೇಶೋತ್ಸವ ಸಭಾಭವನದಲ್ಲಿ ನಡೆಯಿತು.

ಶ್ರೀ ಕ್ಷೇತ್ರ ನಾಳದ ಪ್ರಧಾನ ಅರ್ಚಕ ವೇ.ಮೂ.ರಾಘವೇಂದ್ರ ಅಸ್ರಣ್ಣ ಉದ್ಘಾಟಿಸಿ ಶುಭಹಾರೈಸಿದರು.

ವೇದಿಕೆಯಲ್ಲಿ ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಎಂ‌., ಗೇರುಕಟ್ಟೆ ಜ್ಯೋತಿ ಕ್ಲಿನಿಕ್ ನ ವೈದ್ಯ ಅನಂತ್ ಭಟ್, ನಿವೃತ್ತ ರೈಲ್ವೇ ಅಧಿಕಾರಿ ಬೆಂಗಳೂರು ಕೃಷ್ಣ ಕೆ, ಕರ್ನಾಟಕ ಗೇರು ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಮತ್ತು ಮಂಗಳೂರು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ತಾರಾನಾಥ ಗಟ್ಟಿ ಕಾಪಿಕಾಡು ಉಪಸ್ಥಿತರಿದ್ದರು.

ಪ್ರಮುಖರಾದ ಮಹಾವೀರ್ ಮತ್ತು ವಿಜಯ್ ಕುಮಾರ್ ಇವರನ್ನು ಗೌರವಿಸಲಾಯಿತು. ಕರ್ನಾಟಕ ಯಕ್ಷಗಾನ ಅಕಾಡೆಮಿಯ ರಿಜಿಸ್ಟ್ರಾರ್ ನಮ್ರತಾ ಎನ್. ಸ್ವಾಗತಿಸಿದರು. ನಿವೃತ್ತ ಪ್ರಾಂಶುಪಾಲ ದಿವಾಕರ ಆಚಾರ್ಯ ಗೇರುಕಟ್ಟೆ ನಿರೂಪಿಸಿದರು. ಕರ್ನಾಟಕ ಯಕ್ಷಗಾನ ಅಕಾಡೆಮಿ ಸದಸ್ಯ ಸಂಚಾಲಕ ರಾಘವ ಹೆಚ್ ಸಹಕರಿಸಿದರು.

ಯಕ್ಷ ಭಜನೆ:
ಪುಂಜಾಲಕಟ್ಟೆ ಗಣೇಶ್ ಮತ್ತು ತಂಡದಿಂದ ಯಕ್ಷಭಜನೆ ನಡೆಯಿತು. ಭಾಗತರಾಗಿ ಗಣೇಶ್ ಪುಂಜಾಲಕಟ್ಟೆ, ಜಗದೀಶ್ ಚಾರ್ಮಾಡಿ, ಚೆಂಡೆ ಮದ್ದಳೆ ವಿಶ್ವನಾಥ್ ಆಚಾರ್ಯ ವಾಮದಪದವು ಹಾಗೂ ಚಂದ್ರಶೇಖರ್ ಗೇರುಕಟ್ಟೆ ಮುನ್ನಡೆಸಿದರು.

Related posts

ಬಜಿರೆ : ಹೊಸಪಟ್ಣ ನಿವಾಸಿ ಶ್ರೀಧರ ಪೂಜಾರಿ ನಿಧನ

Suddi Udaya

ಎಸ್.ವೈ.ಎಸ್ ಬೆಳ್ತಂಗಡಿ ಝೋನ್ ಕೌನ್ಸಿಲರ್ಸ್ ಕಾoಕ್ಲೇವ್

Suddi Udaya

ನಡ ಗ್ರಾ.ಪಂ. ವ್ಯಾಪ್ತಿಯಲ್ಲಿ ಉಚಿತ ರೇಬಿಸ್ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಕಕ್ಯಪದವು; ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಿಳ್ಕೋಡುಗೆ ಸಮಾರಂಭ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ: ಸಮಾಜ ಸೇವಕ ಚಾರ್ಮಾಡಿ ಹಸನಬ್ಬರವರ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ಸೇವೆಯ ಅಂಬುಲೆನ್ಸ್ ಜಿಲ್ಲಾ ಉಸ್ತುವಾರಿ ಸಚಿವರಿಂದ ಲೋಕಾರ್ಪಣೆ

Suddi Udaya
error: Content is protected !!