September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ: ಯಕ್ಷೋತ್ಸವ ಕಾರ್ಯಕ್ರಮ ಉದ್ಘಾಟನೆ

ಕಳಿಯ: ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು, ಯಕ್ಷಾರಾಧನ ಕಲಾ ಪ್ರತಿಷ್ಠಾನ, ನಾಳ -ಗೇರುಕಟ್ಟೆ ಇದರ ಸಹಯೋಗದೊಂದಿಗೆ ಯಕ್ಷೋತ್ಸವ ಕಾರ್ಯಕ್ರಮ ನ.9ರಂದು ಗೇರುಕಟ್ಟೆ ಮಂಜಲಡ್ಕ ಗಣೇಶೋತ್ಸವ ಸಭಾಭವನದಲ್ಲಿ ನಡೆಯಿತು.

ಶ್ರೀ ಕ್ಷೇತ್ರ ನಾಳದ ಪ್ರಧಾನ ಅರ್ಚಕ ವೇ.ಮೂ.ರಾಘವೇಂದ್ರ ಅಸ್ರಣ್ಣ ಉದ್ಘಾಟಿಸಿ ಶುಭಹಾರೈಸಿದರು.

ವೇದಿಕೆಯಲ್ಲಿ ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಎಂ‌., ಗೇರುಕಟ್ಟೆ ಜ್ಯೋತಿ ಕ್ಲಿನಿಕ್ ನ ವೈದ್ಯ ಅನಂತ್ ಭಟ್, ನಿವೃತ್ತ ರೈಲ್ವೇ ಅಧಿಕಾರಿ ಬೆಂಗಳೂರು ಕೃಷ್ಣ ಕೆ, ಕರ್ನಾಟಕ ಗೇರು ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಮತ್ತು ಮಂಗಳೂರು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ತಾರಾನಾಥ ಗಟ್ಟಿ ಕಾಪಿಕಾಡು ಉಪಸ್ಥಿತರಿದ್ದರು.

ಪ್ರಮುಖರಾದ ಮಹಾವೀರ್ ಮತ್ತು ವಿಜಯ್ ಕುಮಾರ್ ಇವರನ್ನು ಗೌರವಿಸಲಾಯಿತು. ಕರ್ನಾಟಕ ಯಕ್ಷಗಾನ ಅಕಾಡೆಮಿಯ ರಿಜಿಸ್ಟ್ರಾರ್ ನಮ್ರತಾ ಎನ್. ಸ್ವಾಗತಿಸಿದರು. ನಿವೃತ್ತ ಪ್ರಾಂಶುಪಾಲ ದಿವಾಕರ ಆಚಾರ್ಯ ಗೇರುಕಟ್ಟೆ ನಿರೂಪಿಸಿದರು. ಕರ್ನಾಟಕ ಯಕ್ಷಗಾನ ಅಕಾಡೆಮಿ ಸದಸ್ಯ ಸಂಚಾಲಕ ರಾಘವ ಹೆಚ್ ಸಹಕರಿಸಿದರು.

ಯಕ್ಷ ಭಜನೆ:
ಪುಂಜಾಲಕಟ್ಟೆ ಗಣೇಶ್ ಮತ್ತು ತಂಡದಿಂದ ಯಕ್ಷಭಜನೆ ನಡೆಯಿತು. ಭಾಗತರಾಗಿ ಗಣೇಶ್ ಪುಂಜಾಲಕಟ್ಟೆ, ಜಗದೀಶ್ ಚಾರ್ಮಾಡಿ, ಚೆಂಡೆ ಮದ್ದಳೆ ವಿಶ್ವನಾಥ್ ಆಚಾರ್ಯ ವಾಮದಪದವು ಹಾಗೂ ಚಂದ್ರಶೇಖರ್ ಗೇರುಕಟ್ಟೆ ಮುನ್ನಡೆಸಿದರು.

Related posts

ಗರ್ಡಾಡಿ: ಕುಂಡದಬೆಟ್ಟು ನಿವಾಸಿ ವೆಂಕಪ್ಪ ಮೂಲ್ಯ ನಿಧನ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: 24 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ

Suddi Udaya

ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ಅಲೋಶಿಯಸ್ ಎಸ್ ಲೋಬೋ ರವರಿಗೆ ಮಂಗಳೂರು ಹೈಕೋರ್ಟ್ ಪೀಠ ಹೋರಾಟದ ಪೂರ್ವಭಾವಿ ಸಭೆಯಲ್ಲಿ ಅಭಿನಂದನೆ

Suddi Udaya

ಮೈಟ್ ಇಂಜಿನಿಯರಿಂಗ್ ಕಾಲೇಜಿನಿಂದ ಬಳಂಜ ಶಾಲೆಗೆ ಕಂಪ್ಯೂಟರ್ ಕೊಡುಗೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಎನ್‌ಡಿಎ ದಿಗ್ದರ್ಶನ ಕಾರ್ಯಕ್ರಮ: ಜವಾಬ್ದಾರಿಯುತ ಪ್ರಜೆಯಾಗಿ ದೇಶಸೇವೆ ಮಾಡಲು ಲೆ.ಕ. ರೋಹಿತ್ ಪ್ರಕಾಶ್ ರೈ ಕರೆ

Suddi Udaya

ನಾರಾವಿ ಸಂತ ಅಂತೋನಿ ಕಾಲೇಜು ನೂತನ ಪ್ರಾಂಶುಪಾಲರಾಗಿ ಸಂತೋಷ್ ಸಲ್ಡಾನ ಅಧಿಕಾರ ಸ್ವೀಕಾರ

Suddi Udaya
error: Content is protected !!