September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳದಲ್ಲಿ ಕನ್ನಡ ಭುವನೇಶ್ವರಿ ರಥ


ಉಜಿರೆ: ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ ನಮ್ಮ ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಿ, ಬೆಳೆಸುವಲ್ಲಿ ಮಂಡ್ಯದಲ್ಲಿ ನಡೆಯಲಿರುವ 87ನೆ ಅಖಿಲ ಭಾರತ  ಕನ್ನಡ ಸಾಹಿತ್ಯ ಸಮ್ಮೇಳನ ಪ್ರೇರಕವಾಗಲಿ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹಾರೈಸಿದರು.


ನ.9 ರಂದು ಧರ್ಮಸ್ಥಳಕ್ಕೆ ಆಗಮಿಸಿದ ಕನ್ನಡ ಭುವನೇಶ್ವರಿ ರಥಕ್ಕೆ ಮಾಲಾರ್ಪಣೆ ಮಾಡಿ  ಗೌರವಿಸಿದ ಹೆಗ್ಗಡೆಯವರು ಗ್ರಾಮೀಣ ಪ್ರದೇಶವಾದ ಧರ್ಮಸ್ಥಳದಲ್ಲಿ ಅಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿದ್ದ ಡಾ. ಹಂಪನಾ ನೇತೃತ್ವದಲ್ಲಿ ೫೧ನೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಯಾಗಿ ಆಯೋಜಿಸಿರುವುದನ್ನು ಧನ್ಯತೆಯಿಂದ ಸ್ಮರಿಸಿದರು.


ಕನ್ನಡ ಭುವನೇಶ್ವರಿ ರಥಯಾತ್ರೆ ಸುಗಮವಾಗಲಿ ಎಂದು ಹಾರೈಸಿದ ಹೆಗ್ಗಡೆಯವರು, ಕನ್ನಡ ಸಾಹಿತ್ಯ ಸಮ್ಮೇಳನವು ನಾಡು, ನುಡಿ ಮತ್ತು ಸಂಸ್ಕೃತಿ ಬಗ್ಯೆ ಅಭಿಮಾನ, ಅರಿವು ಹಾಗೂ ಜಾಗೃತಿ ಮೂಡಿಸುವಲ್ಲಿ ಯಶಸ್ವಿಯಾಗಲಿ ಎಂದು ಹಾರೈಸಿದರು.
ಡಿ. ಹರ್ಷೇಂದ್ರ ಕುಮಾರ್, ದಕ್ಷಿಣಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಡಾ. ಎಂ.ಪಿ. ಶ್ರೀನಾಥ್ ಬೆಳ್ತಂಗಡಿ ತಾಲ್ಲೂಕು ಘಟಕದ ಅಧ್ಯಕ್ಷ ಯದುಪತಿ ಗೌಡ, ದೇವಳ ಪಾರುಪತ್ಯಗಾರರಾದ ಲಕ್ಷಿö್ಮÃನಾರಾಯಣ ರಾವ್, ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಎ.ವಿ. ಶೆಟ್ಟಿ ಉಪಸ್ಥಿತರಿದ್ದರು.

Related posts

ತುಳುನಾಡ ಪಕ್ಷದ ಅಭ್ಯರ್ಥಿ ಶೈಲೇಶ್ ಆರ್.ಜೆ ನಾಮಪತ್ರ ಸಲ್ಲಿಕೆ

Suddi Udaya

ಸೆ.19(ನಾಳೆ): ಬೆಳ್ತಂಗಡಿ ಉಪವಿಭಾಗದ ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್‌ ನಿಲುಗಡೆ

Suddi Udaya

ಎ 8-17: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ: ಕ್ಷೇತ್ರಕ್ಕೆ ಶ್ರೀಧಾಮ ಮಾಣಿಲ ಶ್ರೀ ಮೋಹನದಾಸ ಸ್ವಾಮೀಜಿ ಭೇಟಿ

Suddi Udaya

ನಾಳೆ(ಜು.8) ಧರ್ಮಸ್ಥಳದಿಂದ ಮೂರು ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya

ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನವರಾತ್ರಿ ಉತ್ಸವ: ಬಿರ್ವ ಸಂಜೀವ ಪೂಜಾರಿಯವರಿಂದ ನವರಾತ್ರಿ ಮಹೋತ್ಸವ ಉದ್ಘಾಟನೆ

Suddi Udaya

ಹುಣ್ಸೆಕಟ್ಟೆ ಪಲ್ಕೆ ನಿವಾಸಿ ನಾರಾಯಣ ಪೂಜಾರಿ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!