July 23, 2026
ಆರೋಗ್ಯಕರಾವಳಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ: ಬೆನಕ ಆಸ್ಪತ್ರೆಯಲ್ಲಿ ನೂತನ “ವೆಂಟಿಲೇಟರ್” ಉದ್ಘಾಟನೆ

ಬೆಳ್ತಂಗಡಿ ತಾಲೂಕಿನಲ್ಲಿಯೇ ಪ್ರಪ್ರಥಮವಾಗಿ NABH  ರಾಷ್ಟ್ರೀಯ ಮಾನ್ಯತೆ ಪಡೆದ ಉಜಿರೆಯ ಬೆನಕ ಹೆಲ್ತ್ ಸೆಂಟರ್ ನಲ್ಲಿ ಬಹುಜನರ ನಿರೀಕ್ಷೆಯನ್ನು ಪರಿಗಣಿಸಿ ನೂತನವಾಗಿ ಜರ್ಮನಿ ನಿರ್ಮಿತ ಅತ್ಯಂತ ನವೀನ ತಂತ್ರಜ್ಞಾನದಿಂದ ರಚಿಸಲ್ಪಟ್ಟ “ELISA 300” ಎಂಬ ಎರಡು ವೆಂಟಿಲೇಟರ್ ಗಳನ್ನು ಈ ದಿನ ದ.ಕ ಜಿಲ್ಲೆಯಲ್ಲಿ ಮನೆ ಮಾತಾಗಿರುವ ಕೆ. ಎಂ. ಸಿ ಆಸ್ಪತ್ರೆ, ಮಂಗಳೂರಿನ ಪ್ರಖ್ಯಾತ ಹೃದ್ರೋಗ ತಜ್ಞರಾದ ಡಾ.ಪದ್ಮನಾಭ ಕಾಮತ್ ರವರು ಉದ್ಘಾಟಿಸಿದರು.

ಡಾ. ಪದ್ಮನಾಭ ಕಾಮತ್ ಅವರು ಮಾತನಾಡುತ್ತಾ ಗ್ರಾಮೀಣ ಪ್ರದೇಶದಲ್ಲಿ ತಂತ್ರಜ್ಞಾನದ ಸೇವೆಯನ್ನು ಒದಗಿಸುತ್ತಿರುವುದು ಶ್ಲಾಘನೀಯ ಎಂದು ಅಭಿನಂದಿಸಿದರು. ಇದು ಕೇವಲ ಉಜಿರೆ, ಬೆಳ್ತಂಗಡಿ ತಾಲೂಕಿಗಲ್ಲದೆ ನೆರೆಯ ಚಿಕ್ಕಮಗಳೂರಿನ ಅನೇಕ ತಾಲೂಕುಗಳಿಗೆ ವರದಾನವಾಗಿಲಿದೆ.

ಡಾ.ಕಾಮತ್ ಮಾತನಾಡುತ್ತಾ ಈ ವಿಶೇಷ ಸೌಲಭ್ಯದೊಂದಿಗೆ ತುರ್ತು ಚಿಕಿತ್ಸಾ ವೈದ್ಯರಾದ ಡಾ. ಆದಿತ್ಯರಾವ್ ಅವರ ಸೇವೆಯು ಮಂಗಳೂರಿನಿಂದ 60 ಕಿಲೋಮೀಟರ್ ದೂರದಲ್ಲಿರುವ ಉಜಿರೆಯಲ್ಲಿ ಲಭ್ಯವಿರುವುದು, ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸುವ ಬೆನಕ ಆಸ್ಪತ್ರೆಯ ಬದ್ಧತೆಯನ್ನು ತೋರಿಸುತ್ತದೆ ಎಂದರು .


ಡಾ. ಪದ್ಮನಾಭ ಕಾಮತ್ ರವರಿಗೆ ಡಾ. ಗೋಪಾಲಕೃಷ್ಣ ಮತ್ತು ಡಾ. ಭಾರತಿ ದಂಪತಿಗಳು ಹೂ ಗುಚ್ಛ ನೀಡಿ ಸ್ವಾಗತಿಸಿದರು . ಈ ಸಂದರ್ಭದಲ್ಲಿ ಡಾ.ಅಂಕಿತ ಜಿ. ಭಟ್ , ಡಾ.ಶಶಾಂಕ್ , ಹಾಗೂ ಡಾ. ಕಾಮತ್ ರವರ ಸಹಾಯಕರು ಮತ್ತು ಬೆನಕ ಆಸ್ಪತ್ರೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ ಯಕ್ಷಗಾನ ನಾಟ್ಯ ತರಗತಿಗೆ ಚಾಲನೆ

Suddi Udaya

ಮಾ.27 ಧರ್ಮಸ್ಥಳ ಪೊಲೀಸ್ ಠಾಣೆಯ ನೂತನ ಕಟ್ಟಡದ ಉದ್ಘಾಟನೆ

Suddi Udaya

ಮದ್ದಡ್ಕ ಕಿನ್ನಿಗೋಳಿ ವರಕಬೆಯ ಬಳಿ ಹೂತು ಹೋದ ರಾಜ್ಯ ಹೆದ್ದಾರಿ ರಸ್ತೆ

Suddi Udaya

ಶಕ್ತಿ ಯೋಜನೆಯ ಯಶಸ್ವಿಗಾಗಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ವತಿಯಿಂದ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಸಂಭ್ರಮಾಚರಣೆ

Suddi Udaya

ಸಿಎ ಪರೀಕ್ಷೆಯಲ್ಲಿ ಉಜಿರೆಯ ಹರಿದಾಸ್ ರಾವ್ ಕೆ.ಜಿ. ಉತ್ತೀರ್ಣ     

Suddi Udaya

ಅಂಡಿಂಜೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ ಜ್ವರ ಮತ್ತು ಮಲೇರಿಯಾ ಜ್ವರದ ಬಗ್ಗೆ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!