26 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿಯಲ್ಲಿ ಬೈಕ್ ಅಪಘಾತ, ಚಿಕಿತ್ಸೆ ಫಲಕಾರಿಯಾಗದೆ ಸವಾರ ಸಾವು

ಬೆಳ್ತಂಗಡಿ:ಅಳದಂಗಡಿಯಲ್ಲಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಮೃತಪಟ್ಟ ಘಟನೆ ಸಂಭವಿಸಿದ್ದು ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಅಪಘಾತದಲ್ಲಿ ಮೃತವ್ಯಕ್ತಿ ಮಾಳ ನಿವಾಸಿ, ಬಳಂಜದಲ್ಲಿ ವ್ಯಾಸ್ತವ್ಯವಿರುವ ಶಶಿಧರ ದೇವಾಡಿಗ(40ವ) ಎಂಬವರಾಗಿದ್ದಾರೆ.

ಇವರು ಚಲಾಯಿಸುತ್ತಿದ್ದ ಬೈಕ್ ನ7ರಂದು ಅಳದಂಗಡಿ ಸಮೀಪ ಸ್ಕಿಡ್ ಆಗಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಘಟನೆಯ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ: ದ.ಕ ಜಿಲ್ಲಾ ನಾಯಕರ ಉಪಸ್ಥಿತಿಯಲ್ಲಿ ಎಸ್‌ಡಿಪಿಐ ಕುವೆಟ್ಟು ಬ್ಲಾಕ್ ಸಮಾಗಮ

Suddi Udaya

ಮುಂಡಾಜೆ: ಮಂಜುಶ್ರೀ ಭಜನಾ ಮಂದಿರದ ಜೀರ್ಣೋದ್ಧಾರ ಹಾಗೂ ನವರಾತ್ರಿ ಪೂಜೆ ಭಜನಾ ಕಾರ್ಯಕ್ರಮ

Suddi Udaya

ಗುರುವಾಯನಕೆರೆಯ ಸುಬೇದಾರ್ ಏಕನಾಥ ಶೆಟ್ಟಿಯವರಿಗೆ ಕೆದಂಬಾಡಿ ರಾಮಯ್ಯ ಗೌಡ ರಾಜ್ಯ ಶೌರ್ಯ ಪ್ರಶಸ್ತಿ ಪ್ರದಾನ

Suddi Udaya

ಜೂನಿಯರ್ ಅಥ್ಲೆಟಿಕ್ಸ್ ರಿಲೇ ರೇಸ್: ಕಲ್ಲೇರಿಯ ಯತಿನ್ ನಾಯ್ಕ್ ರಿಗೆ ಚಿನ್ನದ ಪದಕ

Suddi Udaya

ಗುರುವಾಯನಕೆರೆ ಗೆಳೆಯರ ಬಳಗದಿಂದ 78ನೇ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ: ಸಂಸದ ನಳಿನ್ ಕುಮಾರ್ ಕಟೀಲ್ ಗೆ ಆಮಂತ್ರಣ

Suddi Udaya
error: Content is protected !!