25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿಯಲ್ಲಿ ಬೈಕ್ ಅಪಘಾತ, ಚಿಕಿತ್ಸೆ ಫಲಕಾರಿಯಾಗದೆ ಸವಾರ ಸಾವು

ಬೆಳ್ತಂಗಡಿ:ಅಳದಂಗಡಿಯಲ್ಲಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಮೃತಪಟ್ಟ ಘಟನೆ ಸಂಭವಿಸಿದ್ದು ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಅಪಘಾತದಲ್ಲಿ ಮೃತವ್ಯಕ್ತಿ ಮಾಳ ನಿವಾಸಿ, ಬಳಂಜದಲ್ಲಿ ವ್ಯಾಸ್ತವ್ಯವಿರುವ ಶಶಿಧರ ದೇವಾಡಿಗ(40ವ) ಎಂಬವರಾಗಿದ್ದಾರೆ.

ಇವರು ಚಲಾಯಿಸುತ್ತಿದ್ದ ಬೈಕ್ ನ7ರಂದು ಅಳದಂಗಡಿ ಸಮೀಪ ಸ್ಕಿಡ್ ಆಗಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಘಟನೆಯ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ನಾರಾವಿ ಸಂತ ಅಂತೋಣಿ ಪ.ಪೂ ಕಾಲೇಜು ಶೇ.98 ಫಲಿತಾಂಶ

Suddi Udaya

ವೇಣೂರು: ಬಜಿರೆ ಬಾಡಾರು ಕೊರಗಲ್ಲು ಕೊರಗಜ್ಜನ ಗುಡಿಗೆ ಕಿಡಿಗೇಡಿಗಳಿಂದ ಬೆಂಕಿ

Suddi Udaya

ಕಾವಳಮುಡೂರು ಧೂಮಳಿಕೆ ನಿರ್ಮಾಣ ಹಂತದ ಮನೆಯಲ್ಲಿ, ಜಾನುವಾರು ವಧೆ ಪೊಲೀಸ್ ದಾಳಿ ಆರೋಪಿಗಳು ಪರಾರಿ

Suddi Udaya

ಅರಸಿನಮಕ್ಕಿ: ಮಕ್ಕಳ ಸಂಸ್ಕಾರ ಶಿಬಿರದ ಮಾಹಿತಿ ಕರಪತ್ರ ಬಿಡುಗಡೆ

Suddi Udaya

ರಾಷ್ಟ್ರಮಟ್ಟದ ನೃತ್ಯೋತ್ಸವ: ಧರಿತ್ರಿ ಭಿಡೆ ದ್ವಿತೀಯ

Suddi Udaya

ಶತಾಯುಷಿ ಚೆಲುವಮ್ಮ ಇರ್ತಿಲಾಲ್ ನಿಧನ

Suddi Udaya
error: Content is protected !!