July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿಯಲ್ಲಿ ಬೈಕ್ ಅಪಘಾತ, ಚಿಕಿತ್ಸೆ ಫಲಕಾರಿಯಾಗದೆ ಸವಾರ ಸಾವು

ಬೆಳ್ತಂಗಡಿ:ಅಳದಂಗಡಿಯಲ್ಲಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಮೃತಪಟ್ಟ ಘಟನೆ ಸಂಭವಿಸಿದ್ದು ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಅಪಘಾತದಲ್ಲಿ ಮೃತವ್ಯಕ್ತಿ ಮಾಳ ನಿವಾಸಿ, ಬಳಂಜದಲ್ಲಿ ವ್ಯಾಸ್ತವ್ಯವಿರುವ ಶಶಿಧರ ದೇವಾಡಿಗ(40ವ) ಎಂಬವರಾಗಿದ್ದಾರೆ.

ಇವರು ಚಲಾಯಿಸುತ್ತಿದ್ದ ಬೈಕ್ ನ7ರಂದು ಅಳದಂಗಡಿ ಸಮೀಪ ಸ್ಕಿಡ್ ಆಗಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಘಟನೆಯ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಉಜಿರೆ ಭಾರತ್ ಆಟೋ ಕಾರ್‍ಸ್ ಮಾರುತಿ ಸುಝುಕಿ ಶೋರೂಮ್ ನಲ್ಲಿ ಡಾಜ್ಲಿಂಗ್ ನ್ಯೂ ಡಿಝೈರ್ ಕಾರು ಮಾರುಕಟ್ಟೆಗೆ

Suddi Udaya

ಸೇಕ್ರೆಡ್ ಹಾರ್ಟ್ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಶಾಲಾ ಸಂಸತ್ತು ಚುನಾವಣೆ

Suddi Udaya

ಪಿಯು ಫಲಿತಾಂಶ: ಮುಂಡಾಜೆ ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗಕ್ಕೆ ಶೇ.100 ಫಲಿತಾಂಶ

Suddi Udaya

ಎಸ್‌.ಡಿ.ಎಂ ಶಿಕ್ಷಣ ಸಂಸ್ಥೆಗಳ ಕೇಂದ್ರ ಕಛೇರಿಗೆ ಅಂತಾರಾಷ್ಟ್ರೀಯ ಕಬ್ಬಡ್ಡಿ ತರಬೇತುದಾರ ರವೀಂದ್ರ ಶೆಟ್ಟಿ ಭೇಟಿ

Suddi Udaya

ಬೆಳ್ತಂಗಡಿ ಪ್ರೇರಣಾ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ.13 ಡಿವಿಡೆಂಡ್

Suddi Udaya

ಚಿಬಿದ್ರೆ: ಶತಾಯುಷಿ ಸೇಸು ನಿಧನ

Suddi Udaya
error: Content is protected !!