25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿಯಲ್ಲಿ ಬೈಕ್ ಅಪಘಾತ, ಚಿಕಿತ್ಸೆ ಫಲಕಾರಿಯಾಗದೆ ಸವಾರ ಸಾವು

ಬೆಳ್ತಂಗಡಿ:ಅಳದಂಗಡಿಯಲ್ಲಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಮೃತಪಟ್ಟ ಘಟನೆ ಸಂಭವಿಸಿದ್ದು ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಅಪಘಾತದಲ್ಲಿ ಮೃತವ್ಯಕ್ತಿ ಮಾಳ ನಿವಾಸಿ, ಬಳಂಜದಲ್ಲಿ ವ್ಯಾಸ್ತವ್ಯವಿರುವ ಶಶಿಧರ ದೇವಾಡಿಗ(40ವ) ಎಂಬವರಾಗಿದ್ದಾರೆ.

ಇವರು ಚಲಾಯಿಸುತ್ತಿದ್ದ ಬೈಕ್ ನ7ರಂದು ಅಳದಂಗಡಿ ಸಮೀಪ ಸ್ಕಿಡ್ ಆಗಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಘಟನೆಯ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅಶ್ವಥಕಟ್ಟೆ ನಿರ್ಮಾಣದ ಶಿಲಾನ್ಯಾಸ

Suddi Udaya

ಲಾಯಿಲ ಗ್ರಾಮೀಣ ಶ್ರೇಷ್ಠತಾ ಕೇಂದ್ರದಲ್ಲಿ ಕೂಸಿನ ಮನೆಯ ನಿರ್ವಾಹಕರಿಗೆ 7 ದಿನಗಳ ತರಬೇತಿ ಕಾರ್ಯಾಗಾರ ಆರಂಭ

Suddi Udaya

ಕಾಲೇಜಿಗೆ ಬರುತ್ತಿದ್ದ ವಿದ್ಯಾರ್ಥಿನಿಯ ಅಪಹರಣಕ್ಕೆ ಯತ್ನ ಪ್ರಕರಣಕ್ಕೆ ಹೊಸ ತಿರುವು

Suddi Udaya

ಪ್ರತಿಷ್ಠಿತ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಮಂಗಳೂರು ಘಟಕದ ಪದಪ್ರದಾನ ಸಮಾರಂಭ: ಎಕ್ಸೆಲ್ ಶಿಕ್ಷಣ ಸಂಸ್ಥೆಗಳ‌ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಸನ್ಮಾನ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ

Suddi Udaya

ಉಜಿರೆ: ಎಸ್.ಡಿ.ಎಂ ಯಕ್ಷಗಾನ ಕಲಾಕೇಂದ್ರದ ವಿದ್ಯಾರ್ಥಿಗಳಿಂದ ಸೈಂಧವ ವಧೆ ತಾಳಮದ್ದಳೆ

Suddi Udaya
error: Content is protected !!