April 2, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಪ್ಪಿನಂಗಡಿ ವಲಯ ಅರಣ್ಯ ವ್ಯಾಪ್ತಿಯ ಹತ್ಯಡ್ಕ ಪರಿಸರದಲ್ಲಿ ಮರಗಳ ಮಾರಣ ಹೋಮ-ಸಚಿವರಿಗೆ ದೂರು

ಕೊಕ್ಕಡ: ಉಪ್ಪಿನಂಗಡಿ ವಲಯ ಅರಣ್ಯ ವ್ಯಾಪ್ತಿಗೆ ಒಳಪಟ್ಟ, ಹತ್ಯಡ್ಕ ಗ್ರಾಮದ ಪಲಸ್ತಡ್ಕ ಪರಿಸರದಲ್ಲಿ ಸರ್ಕಾರಿ ರಕ್ಷಿತಾರಣ್ಯದಿಂದ ವ್ಯಾಪಕವಾಗಿ ಮರಗಳ ಮಾರಣಹೋಮ ನಡೆಯುತ್ತಿದೆ ಎಂದು ಸ್ಥಳೀಯ ಗ್ರಾಮಸ್ಥರು ಕರ್ನಾಟಕ ಸರ್ಕಾರದ ಅರಣ್ಯ ಸಚಿವರ ಸಹಿತ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ.

ಉಪ್ಪಿನಂಗಡಿ ವಲಯ ಅರಣ್ಯ ವ್ಯಾಪ್ತಿಗೆ ಒಳಪಟ್ಟ ಹತ್ಯಡ್ಕ ಗ್ರಾಮದ ಪಲಸ್ತಡ್ಕ ಪರಿಸರದಲ್ಲಿ ರಕ್ಷಿತಾರಣ್ಯದಿಂದ ಉತ್ತಮ ಜಾತಿಯ ನೂರಾರು ಮರಗಳನ್ನು ಕಡಿದು ಅಲ್ಲೇ ಸಿಗಿದು ಸೈಜುಗಳನ್ನಾಗಿ ಮಾಡಿ ಸಾಗಾಟ ಮಾಡಿರುವುದು ಕಂಡು ಬರುತ್ತಿದ್ದು, ಅರಣ್ಯ ಇಲಾಖೆ ಅಧಿಕಾರಿಗಳಿಗೆ ಈ ಕೃತ್ಯದ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದೆ ಗಾಢ ಮೌನ ತಾಳಿದ್ದಾರೆ. ಅರಣ್ಯ ಸಂಪತ್ತು ಲೂಟಿ ಮಾಡುವ ಮರಕಳ್ಳರ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳುವಂತೆ ಗ್ರಾಮಸ್ಥರು ಸಚಿವರನ್ನು ಆಗ್ರಹಿಸಿದ್ದಾರೆ.
ರಕ್ಷಿತಾರಣ್ಯಕ್ಕೆ ತಾಗಿಕೊಂಡಂತೆ ಇರುವ ಮನೆಯವರು ಇದರಲ್ಲಿ ನೇರ ಭಾಗಿಗಳಾಗಿದ್ದು, ಕೊಕ್ಕಡ-ಅರಸಿನಮಕ್ಕಿ ರಸ್ತೆ ಬದಿಯಲ್ಲಿ, ಬೃಹದಾಕಾರವಾಗಿ ಬೆಳೆದು ನಿಂತಿದ್ದ ಮರಗಳನ್ನು ಯಂತ್ರದ ಮೂಲಕ ತುಂಡರಿಸಿ, ಸಿಗಿದು ಸೈಜುಗಳನ್ನಾಗಿ ಮಾಡಿ ಟಿಪ್ಪರ್ ಮತ್ತು ಪಿಕ್‍ಅಪ್ ಮೂಲಕ ಬಂಟ್ವಾಳ, ಮಂಗಳೂರು ಕಡೆಗೆ ರಾಜಾರೋಷವಾಗಿ ಸಾಗಾಟ ಮಾಡಲಾಗುತ್ತದೆ. ಅದಾಗ್ಯೂ ಸೈಜು ಮಾಡಲಾಗಿ ಉಳಿದ ಕಟ್ಟಿಗೆಗಳನ್ನು ಪಿಕ್‍ಅಪ್ ಲೋಡು ಒಂದಕ್ಕೆ 7 ಸಾವಿರ ರೂಪಾಯಿಯಂತೆ ಹೊಟೇಲ್‍ಗಳಿಗೆ ಸಾಗಾಟ ನಡೆಯುತ್ತಿದೆ ಎಂದು ದೂರಿನಲ್ಲಿ ಆಪಾದಿಸಲಾಗಿದೆ.

ಪಲಸ್ತಡ್ಕ ಪರಿಸರದಲ್ಲಿ ನೂರಾರು ಮರಗಳ ತುದಿ ಕತ್ತರಿಸಿ ಮುಂದಿನ ಕಾರ್ಯಾಚರಣೆಗೆ ಸಿದ್ಧಪಡಿಸಿ ಇಡಲಾಗಿದೆ. ಹಾಗೂ ರಕ್ಷಿತಾರಣ್ಯದೊಳಗೆ ಇಷ್ಟೊಂದು ದೊಡ್ಡ ಮಟ್ಟದಲ್ಲಿ ಕೃತ್ಯಗಳು ನಡೆಯುತ್ತಿದ್ದರೂ ಉಪ್ಪಿನಂಗಡಿ ವಲಯ ಅರಣ್ಯ ಇಲಾಖೆಯ ಅಧಿಕಾರಿಗಳು ಮೌನ ವಹಿಸಿರುವುದು ಸಾರ್ವಜನಿಕ ವಲಯದಲ್ಲಿ ಹಲವು ಸಂಶಯಗಳಿಗೆ ಕಾರಣವಾಗುತ್ತಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಅರಣ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷತದಿಂದಾಗಿ ಪಶ್ಚಿಮ ಘಟ್ಟದ ತಪ್ಪಲು ಪ್ರದೇಶ ಕಾಡು ಪ್ರಾಣಿಗಳ ಬೇಟೆಗಾರರಿಗೆ ಮತ್ತು ಮರಗಳ್ಳರಿಗೆ ವರದಾನವಾಗಿ ಪರಿಣಮಿಸಿದೆ. ಹಾಡುಹಗಲಿನಲ್ಲಿ ಕಾಡು ಕೋಣ ಬೇಟಿಯಾಡಿದ ಕೃತ್ಯ ಮತ್ತು ಮಗನ ಹುಟ್ಟುಹಬ್ಬದ ಔತಣ ಕೂಟಕ್ಕೆ ಕಡವೆ ಬೇಟೆಯಾಡಿದ ಪ್ರಕರಣ ದಾಖಲಾಗಿ ತಿಂಗಳು ಆಗುತ್ತಾ ಬಂದಿದ್ದರೂ ಇನ್ನೂ ಕೂಡಾ ಆರೋಪಿಗಳನ್ನು ಬಂಧಿಸುವಲ್ಲಿ ಅರಣ್ಯ ಇಲಾಖೆ ವಿಫಲವಾಗಿದೆ. ಒಟ್ಟಿನಲ್ಲಿ ಅರಣ್ಯ ಸಂಪತ್ತು ಸಂಪೂರ್ಣ ಲೂಟಿಯಾಗಿ ಕಾಡು ಬೋರು ಗುಡ್ಡೆಯಾಗುವ ಮುನ್ನ ಇಲಾಖೆಯ ಅಧಿಕಾರಿಗಳು ಇತ್ತ ಗಮನ ಹರಿಸಿ ಕೃತ್ಯ ಎಸಗುವವರಿಗೆ ಕಡಿವಾಣ ಹಾಕುವಂತೆ ಪರಿಸರ ಪ್ರೇಮಿ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಸ್ಥಳ ಪರಿಶೀಲನೆ ನಡೆಸಿ ಸೂಕ್ತ ಕ್ರಮಕೈಗೊಳ್ಳುತ್ತೇನೆ: ರಾಘವೇಂದ್ರ, ವಲಯ ಅರಣ್ಯಾಧಿಕಾರಿ ಉಪ್ಪಿನಂಗಡಿ

ರಕ್ಷಿತಾರಣ್ಯ ವ್ಯಾಪ್ತಿಯ ಒಳಗೆ ಮರ ಕಡಿದಿದ್ದಲ್ಲಿ ಅದರ ಹೊರತಾಗಿ ಪಟ್ಟಾ ಜಾಗದಲ್ಲಿ ಇದ್ದರೂ ಅನುಮತಿ ಪಡೆಯದೆ ಮರ ಕಡಿದಿದ್ದರೂ ಅಪರಾಧ ಆಗುತ್ತದೆ. ಆದ ಕಾರಣ ಮರ ಕಡಿದಿರುವ ಜಾಗದ ಪರಿಶೀಲನೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುತ್ತೇನೆ ಎಂದರು.

Related posts

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಹೃದಯ ಸಮಸ್ಯೆ ಮತ್ತು ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಧರ್ಮಸ್ಥಳ ಜೋಡುಸ್ಥಾನ ನಿವಾಸಿ ಶೀನ ಗೌಡ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಮಚ್ಚಿನ: ಕುತ್ತಿನ ಶಾಲೆಯಲ್ಲಿ ಬೀಳ್ಕೊಡುಗೆ ಮತ್ತು ಮಕ್ಕಳ ಹಬ್ಬ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪುದುವೆಟ್ಟು ಶಾಂತ್ಯಾಯ ಶ್ರೀ ಮಹಾಗಣಪತಿ ಭಜನಾಮಂದಿರದ ಅನ್ನಛತ್ರ ಕಟ್ಟಡದ ಕಾಮಗಾರಿಗೆ ರೂ. 1ಲಕ್ಷ ಮಂಜೂರು

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ನೇತ್ರ ತಜ್ಞರಾಗಿ ಡಾ| ರಮೇಶ್ ನೇಮಕ

Suddi Udaya

ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಭಾರತೀಯ ಮಜ್ದೂರ್ ಸಂಘದಿಂದ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಹಿರಿಯ ಅಧಿಕಾರಿಯವರಿಗೆ ಮನವಿ

Suddi Udaya
error: Content is protected !!