September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ: ಯಕ್ಷೋತ್ಸವ ಕಾರ್ಯಕ್ರಮ ಉದ್ಘಾಟನೆ

ಕಳಿಯ: ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು, ಯಕ್ಷಾರಾಧನ ಕಲಾ ಪ್ರತಿಷ್ಠಾನ, ನಾಳ -ಗೇರುಕಟ್ಟೆ ಇದರ ಸಹಯೋಗದೊಂದಿಗೆ ಯಕ್ಷೋತ್ಸವ ಕಾರ್ಯಕ್ರಮ ನ.9ರಂದು ಗೇರುಕಟ್ಟೆ ಮಂಜಲಡ್ಕ ಗಣೇಶೋತ್ಸವ ಸಭಾಭವನದಲ್ಲಿ ನಡೆಯಿತು.

ಶ್ರೀ ಕ್ಷೇತ್ರ ನಾಳದ ಪ್ರಧಾನ ಅರ್ಚಕ ವೇ.ಮೂ.ರಾಘವೇಂದ್ರ ಅಸ್ರಣ್ಣ ಉದ್ಘಾಟಿಸಿ ಶುಭಹಾರೈಸಿದರು.

ವೇದಿಕೆಯಲ್ಲಿ ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಎಂ‌., ಗೇರುಕಟ್ಟೆ ಜ್ಯೋತಿ ಕ್ಲಿನಿಕ್ ನ ವೈದ್ಯ ಅನಂತ್ ಭಟ್, ನಿವೃತ್ತ ರೈಲ್ವೇ ಅಧಿಕಾರಿ ಬೆಂಗಳೂರು ಕೃಷ್ಣ ಕೆ, ಕರ್ನಾಟಕ ಗೇರು ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಮತ್ತು ಮಂಗಳೂರು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ತಾರಾನಾಥ ಗಟ್ಟಿ ಕಾಪಿಕಾಡು ಉಪಸ್ಥಿತರಿದ್ದರು.

ಪ್ರಮುಖರಾದ ಮಹಾವೀರ್ ಮತ್ತು ವಿಜಯ್ ಕುಮಾರ್ ಇವರನ್ನು ಗೌರವಿಸಲಾಯಿತು. ಕರ್ನಾಟಕ ಯಕ್ಷಗಾನ ಅಕಾಡೆಮಿಯ ರಿಜಿಸ್ಟ್ರಾರ್ ನಮ್ರತಾ ಎನ್. ಸ್ವಾಗತಿಸಿದರು. ನಿವೃತ್ತ ಪ್ರಾಂಶುಪಾಲ ದಿವಾಕರ ಆಚಾರ್ಯ ಗೇರುಕಟ್ಟೆ ನಿರೂಪಿಸಿದರು. ಕರ್ನಾಟಕ ಯಕ್ಷಗಾನ ಅಕಾಡೆಮಿ ಸದಸ್ಯ ಸಂಚಾಲಕ ರಾಘವ ಹೆಚ್ ಸಹಕರಿಸಿದರು.

ಯಕ್ಷ ಭಜನೆ:
ಪುಂಜಾಲಕಟ್ಟೆ ಗಣೇಶ್ ಮತ್ತು ತಂಡದಿಂದ ಯಕ್ಷಭಜನೆ ನಡೆಯಿತು. ಭಾಗತರಾಗಿ ಗಣೇಶ್ ಪುಂಜಾಲಕಟ್ಟೆ, ಜಗದೀಶ್ ಚಾರ್ಮಾಡಿ, ಚೆಂಡೆ ಮದ್ದಳೆ ವಿಶ್ವನಾಥ್ ಆಚಾರ್ಯ ವಾಮದಪದವು ಹಾಗೂ ಚಂದ್ರಶೇಖರ್ ಗೇರುಕಟ್ಟೆ ಮುನ್ನಡೆಸಿದರು.

Related posts

ಉರುವಾಲು ಶ್ರೀ ಭಾರತೀ ವಿದ್ಯಾಸಂಸ್ಥೆಯಲ್ಲಿ ಶಾಲಾ ವಾರ್ಷಿಕೋತ್ಸವ

Suddi Udaya

ಸುಲ್ಕೇರಿಮೊಗ್ರು ಬ್ರಹ್ಮ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದಿಂದ ಸುಲ್ಕೇರಿಮೊಗ್ರುನಿಂದ ಅಳದಂಗಡಿಯವರೆಗೆ ಶ್ರಮದಾನ

Suddi Udaya

ಕಾಸರಗೋಡು ಬೆಳ್ಳೂರ್ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಉಜಿರೆ ಶ್ರೀ ಲಕ್ಷ್ಮೀ ಮಹಿಳಾ ಭಜನಾ ಸಂಘದ ಸದಸ್ಯರಿಂದ ಭಜನಾ ಸೇವೆ

Suddi Udaya

ಪಾದಾಯಾತ್ರಿಗಳಿಗೆ ಕಲ್ಮಂಜದ ಮದಿಮಾಲಕಟ್ಟೆಯ ಜಾನಕಿ ಮತ್ತು ಮಕ್ಕಳಿಂದ ಅನ್ನದಾನ ಸೇವೆ

Suddi Udaya

ಎಸ್.ಡಿ.ಎಂ ಪ.ಪೂರ್ವ ಕಾಲೇಜಿನಲ್ಲಿ ‘ಆರೋಹಣಂ – 2025’ ವಾರ್ಷಿಕೋತ್ಸವ ಸಮಾರಂಭ

Suddi Udaya

ವೇಣೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಪ.ಜಾತಿ/ಪ.ಪಂಗಡದ ಫಲಾನುಭವಿಗಳಿಗೆ ಫ್ಯಾನ್ ಹಾಗೂ ವಿಕಲಚೇತನ ಫಲಾನುಭವಿಗಳಿಗೆ ಚಯರ್ ವಿತರಣೆ

Suddi Udaya
error: Content is protected !!