23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳದಲ್ಲಿ ಕನ್ನಡ ಭುವನೇಶ್ವರಿ ರಥ


ಉಜಿರೆ: ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ ನಮ್ಮ ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಿ, ಬೆಳೆಸುವಲ್ಲಿ ಮಂಡ್ಯದಲ್ಲಿ ನಡೆಯಲಿರುವ 87ನೆ ಅಖಿಲ ಭಾರತ  ಕನ್ನಡ ಸಾಹಿತ್ಯ ಸಮ್ಮೇಳನ ಪ್ರೇರಕವಾಗಲಿ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹಾರೈಸಿದರು.


ನ.9 ರಂದು ಧರ್ಮಸ್ಥಳಕ್ಕೆ ಆಗಮಿಸಿದ ಕನ್ನಡ ಭುವನೇಶ್ವರಿ ರಥಕ್ಕೆ ಮಾಲಾರ್ಪಣೆ ಮಾಡಿ  ಗೌರವಿಸಿದ ಹೆಗ್ಗಡೆಯವರು ಗ್ರಾಮೀಣ ಪ್ರದೇಶವಾದ ಧರ್ಮಸ್ಥಳದಲ್ಲಿ ಅಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿದ್ದ ಡಾ. ಹಂಪನಾ ನೇತೃತ್ವದಲ್ಲಿ ೫೧ನೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಯಾಗಿ ಆಯೋಜಿಸಿರುವುದನ್ನು ಧನ್ಯತೆಯಿಂದ ಸ್ಮರಿಸಿದರು.


ಕನ್ನಡ ಭುವನೇಶ್ವರಿ ರಥಯಾತ್ರೆ ಸುಗಮವಾಗಲಿ ಎಂದು ಹಾರೈಸಿದ ಹೆಗ್ಗಡೆಯವರು, ಕನ್ನಡ ಸಾಹಿತ್ಯ ಸಮ್ಮೇಳನವು ನಾಡು, ನುಡಿ ಮತ್ತು ಸಂಸ್ಕೃತಿ ಬಗ್ಯೆ ಅಭಿಮಾನ, ಅರಿವು ಹಾಗೂ ಜಾಗೃತಿ ಮೂಡಿಸುವಲ್ಲಿ ಯಶಸ್ವಿಯಾಗಲಿ ಎಂದು ಹಾರೈಸಿದರು.
ಡಿ. ಹರ್ಷೇಂದ್ರ ಕುಮಾರ್, ದಕ್ಷಿಣಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಡಾ. ಎಂ.ಪಿ. ಶ್ರೀನಾಥ್ ಬೆಳ್ತಂಗಡಿ ತಾಲ್ಲೂಕು ಘಟಕದ ಅಧ್ಯಕ್ಷ ಯದುಪತಿ ಗೌಡ, ದೇವಳ ಪಾರುಪತ್ಯಗಾರರಾದ ಲಕ್ಷಿö್ಮÃನಾರಾಯಣ ರಾವ್, ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಎ.ವಿ. ಶೆಟ್ಟಿ ಉಪಸ್ಥಿತರಿದ್ದರು.

Related posts

ಜೇಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ

Suddi Udaya

ಬೆಳ್ತಂಗಡಿ ವಲಯದ ಮಟ್ಟದ ಪ್ರಗತಿ ಬಂಧು ಒಕ್ಕೂಟಗಳ ಪದಗ್ರಹಣ ಸಮಾರಂಭ ಹಾಗೂ ಸಾಧನಾ ಸಮಾವೇಶ

Suddi Udaya

ದೊಂಪದಪಲ್ಕೆ ಸ.ಹಿ.ಪ್ರಾ. ಶಾಲೆಯಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ

Suddi Udaya

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆ ಪದವಿ/ ಪದವಿ ಪೂರ್ವ ವಿಭಾಗದ ಬಾಲಕಿಯರ ಸ್ಥಳೀಯ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ಶಿಕ್ಷಕರ ದಿನಾಚರಣೆ

Suddi Udaya

ನಾರಾವಿ: ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿಯಿಂದ ಸಂಘದ ಸದಸ್ಯ ಮೇಲ್ವಿನ್ ಡಿಸೋಜ ನಂದಿಲ ರವರಿಗೆ ಚಿಕಿತ್ಸಾ ನೆರವು

Suddi Udaya
error: Content is protected !!