September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳದಲ್ಲಿ ಕನ್ನಡ ಭುವನೇಶ್ವರಿ ರಥ


ಉಜಿರೆ: ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ ನಮ್ಮ ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಿ, ಬೆಳೆಸುವಲ್ಲಿ ಮಂಡ್ಯದಲ್ಲಿ ನಡೆಯಲಿರುವ 87ನೆ ಅಖಿಲ ಭಾರತ  ಕನ್ನಡ ಸಾಹಿತ್ಯ ಸಮ್ಮೇಳನ ಪ್ರೇರಕವಾಗಲಿ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹಾರೈಸಿದರು.


ನ.9 ರಂದು ಧರ್ಮಸ್ಥಳಕ್ಕೆ ಆಗಮಿಸಿದ ಕನ್ನಡ ಭುವನೇಶ್ವರಿ ರಥಕ್ಕೆ ಮಾಲಾರ್ಪಣೆ ಮಾಡಿ  ಗೌರವಿಸಿದ ಹೆಗ್ಗಡೆಯವರು ಗ್ರಾಮೀಣ ಪ್ರದೇಶವಾದ ಧರ್ಮಸ್ಥಳದಲ್ಲಿ ಅಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿದ್ದ ಡಾ. ಹಂಪನಾ ನೇತೃತ್ವದಲ್ಲಿ ೫೧ನೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಯಾಗಿ ಆಯೋಜಿಸಿರುವುದನ್ನು ಧನ್ಯತೆಯಿಂದ ಸ್ಮರಿಸಿದರು.


ಕನ್ನಡ ಭುವನೇಶ್ವರಿ ರಥಯಾತ್ರೆ ಸುಗಮವಾಗಲಿ ಎಂದು ಹಾರೈಸಿದ ಹೆಗ್ಗಡೆಯವರು, ಕನ್ನಡ ಸಾಹಿತ್ಯ ಸಮ್ಮೇಳನವು ನಾಡು, ನುಡಿ ಮತ್ತು ಸಂಸ್ಕೃತಿ ಬಗ್ಯೆ ಅಭಿಮಾನ, ಅರಿವು ಹಾಗೂ ಜಾಗೃತಿ ಮೂಡಿಸುವಲ್ಲಿ ಯಶಸ್ವಿಯಾಗಲಿ ಎಂದು ಹಾರೈಸಿದರು.
ಡಿ. ಹರ್ಷೇಂದ್ರ ಕುಮಾರ್, ದಕ್ಷಿಣಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಡಾ. ಎಂ.ಪಿ. ಶ್ರೀನಾಥ್ ಬೆಳ್ತಂಗಡಿ ತಾಲ್ಲೂಕು ಘಟಕದ ಅಧ್ಯಕ್ಷ ಯದುಪತಿ ಗೌಡ, ದೇವಳ ಪಾರುಪತ್ಯಗಾರರಾದ ಲಕ್ಷಿö್ಮÃನಾರಾಯಣ ರಾವ್, ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಎ.ವಿ. ಶೆಟ್ಟಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಬಿಜೆಪಿ ಯುವಮೋರ್ಚಾದ ಕಾರ್ಯಕಾರಣಿ ಸಭೆ

Suddi Udaya

ಜ.3: ಬೆಳ್ತಂಗಡಿ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವ

Suddi Udaya

ವೇಣೂರು ಯುವ ಸೇವಾ ಸಂಗಮ ವತಿಯಿಂದ ಸುಲ್ಕೇರಿ ಶ್ರೀರಾಮ ಶಾಲೆಗೆ ರೂ. 1ಲಕ್ಷ ದೇಣಿಗೆ

Suddi Udaya

ಬಿಜೆಪಿಯಿಂದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ 6 ವರ್ಷಗಳ ಕಾಲ ಉಚ್ಚಾಟನೆ

Suddi Udaya

ಚಾಮುಂಡೇಶ್ವರಿ ಯುವಕ ಮಂಡಲ, ಶ್ರೀ ಕ್ಷೇತ್ರ ಮುಂಡೂರು ಪ್ರಾಯೋಜಕತ್ವದಲ್ಲಿ ಮೈರೊಳ್ತಡ್ಕ ವಿವೇಕಾನಂದನಗರದಲ್ಲಿ ನೂತನ ಬಸ್ ತಂಗುದಾಣ ಲೋಕಾರ್ಪಣೆ

Suddi Udaya

ಬೆಳ್ತಂಗಡಿ ವಕೀಲರ ನಿಯೋಗದಿಂದ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳ ಭೇಟಿ: ಶಂಕುಸ್ಥಾಪನೆ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya
error: Content is protected !!