23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬಳಂಜ ಶಾಲಾ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲಿಷ್ ತರಗತಿ ಉದ್ಘಾಟನೆ

ಬಳಂಜ: ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ (ರಿ), ಪುತ್ತೂರು, ಎಸ್ ಡಿ ಎಮ್ ಕಾಲೇಜ್ (Autonomous) ಮತ್ತು ಪಿಜಿ ಸೆಂಟರ್, ಡಿಪಾರ್ಟ್ಮೆಂಟ್ ಆಫ್ ಇಂಗ್ಲಿಷ್, ಉಜಿರೆ, ಬಳಂಜ ಶಿಕ್ಷಣ ಟ್ರಸ್ಟ್ (ರಿ) ಇವರ ನೇತೃತ್ವದಲ್ಲಿ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಮತ್ತು ಪ್ರೌಢಶಾಲೆ, ಬಳಂಜದ 6,7,8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ವಾರದಲ್ಲಿ ಎರಡು ದಿನದ ಸ್ಪೋಕನ್ ಇಂಗ್ಲಿಷ್ ತರಗತಿಯನ್ನು ಪಿಜಿ ವಿದ್ಯಾರ್ಥಿಗಳು ನಡೆಸಲಿದ್ದು, ಇದರ ಉದ್ಘಾಟನೆಯನ್ನು ಎಸ್‌ಡಿಎಂ ಕಾಲೇಜ್ ಉಜಿರೆಯ , ಹೆಡ್ ಆಫ್ ಡಿಪಾರ್ಟ್ಮೆಂಟ್ ಆಫ್ ಇಂಗ್ಲಿಷ್ ಡಾ. ಮಂಜುಶ್ರೀ.ಆರ್ ನೆರವೇರಿಸಿದರು.

ವೇದಿಕೆಯಲ್ಲಿ ಬಳಂಜ ಶಿಕ್ಷಣ ಟ್ರಸ್ಟ್ ನ ಕಾರ್ಯದರ್ಶಿ ರತ್ನರಾಜ್ ಜೈನ್, ಟ್ರಸ್ಟಿ ಬಿ ಪ್ರಮೋದ್ ಕುಮಾರ್ , ಆಕಾಂಕ್ಷ ಟ್ರಸ್ಟ್ ನ ಸದಸ್ಯರು ಶ್ರೀಮತಿ ಕವಿತಾ ಎನ್, ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುಲೋಚನ ಕೆ ಮತ್ತು ರೆನಿಲ್ಡಾ ಜೋಯ್ಸ್ ಮಥಾಯಸ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಶಿಕ್ಷಕ ಮಲ್ಲಿಕಾರ್ಜುನ.ಆರ್ ನಿರೂಪಿಸಿ, ಶಿಕ್ಷಕಿ ಶ್ರೀಮತಿ ಹೇಮಲತಾ ಸ್ವಾಗತಿಸಿ, ಪಿಜಿ ವಿದ್ಯಾರ್ಥಿನಿ ದೀಪಾ ರವರು ವಂದಿಸಿದರು.

Related posts

ಅಂಡಿಂಜೆ : ಮಕ್ಕಿಲ ನಿವಾಸಿ ಶ್ರೀಮತಿ ಚೆಲುವಮ್ಮ ಪೂಜಾರ್‍ತಿ ನಿಧನ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ರಾಜ್ಯ ಮಟ್ಟದ ವಿಚಾರ ಸಂಕಿರಣಕ್ಕೆ ಚಾಲನೆ

Suddi Udaya

ಮಿತ್ತಬಾಗಿಲು: ವಿಷಸೇವಿಸಿ ಆತ್ಯಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಶಬರಿಮಲೆ ಯಾತ್ರೆಗೆ ತೆರಳಿದ್ದ ತೆಕ್ಕಾರಿನ ಯುವಕ ಸುಧೀರ್ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ ಮಹಿಳಾ ಗ್ರಾಹಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಉಮಾ ಆರ್. ರಾವ್, ಉಪಾಧ್ಯಕ್ಷರಾಗಿ ರಶ್ಮಿ ಪಟವರ್ಧನ್ ಆಯ್ಕೆ

Suddi Udaya

ಭಜನಾ ಪರಿಷತ್ತಿಗೆ ನೂತನ ಕಾರ್ಯದರ್ಶಿಯಾಗಿ ಆಯ್ಕೆಯಾದ ಕೊಯ್ಯೂರು ಪಿ ಚಂದ್ರಶೇಖರ ಸಾಲ್ಯಾನ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!