25.7 C
ಪುತ್ತೂರು, ಬೆಳ್ತಂಗಡಿ
May 17, 2025
ಆರೋಗ್ಯಕರಾವಳಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ: ಬೆನಕ ಆಸ್ಪತ್ರೆಯಲ್ಲಿ ನೂತನ “ವೆಂಟಿಲೇಟರ್” ಉದ್ಘಾಟನೆ

ಬೆಳ್ತಂಗಡಿ ತಾಲೂಕಿನಲ್ಲಿಯೇ ಪ್ರಪ್ರಥಮವಾಗಿ NABH  ರಾಷ್ಟ್ರೀಯ ಮಾನ್ಯತೆ ಪಡೆದ ಉಜಿರೆಯ ಬೆನಕ ಹೆಲ್ತ್ ಸೆಂಟರ್ ನಲ್ಲಿ ಬಹುಜನರ ನಿರೀಕ್ಷೆಯನ್ನು ಪರಿಗಣಿಸಿ ನೂತನವಾಗಿ ಜರ್ಮನಿ ನಿರ್ಮಿತ ಅತ್ಯಂತ ನವೀನ ತಂತ್ರಜ್ಞಾನದಿಂದ ರಚಿಸಲ್ಪಟ್ಟ “ELISA 300” ಎಂಬ ಎರಡು ವೆಂಟಿಲೇಟರ್ ಗಳನ್ನು ಈ ದಿನ ದ.ಕ ಜಿಲ್ಲೆಯಲ್ಲಿ ಮನೆ ಮಾತಾಗಿರುವ ಕೆ. ಎಂ. ಸಿ ಆಸ್ಪತ್ರೆ, ಮಂಗಳೂರಿನ ಪ್ರಖ್ಯಾತ ಹೃದ್ರೋಗ ತಜ್ಞರಾದ ಡಾ.ಪದ್ಮನಾಭ ಕಾಮತ್ ರವರು ಉದ್ಘಾಟಿಸಿದರು.

ಡಾ. ಪದ್ಮನಾಭ ಕಾಮತ್ ಅವರು ಮಾತನಾಡುತ್ತಾ ಗ್ರಾಮೀಣ ಪ್ರದೇಶದಲ್ಲಿ ತಂತ್ರಜ್ಞಾನದ ಸೇವೆಯನ್ನು ಒದಗಿಸುತ್ತಿರುವುದು ಶ್ಲಾಘನೀಯ ಎಂದು ಅಭಿನಂದಿಸಿದರು. ಇದು ಕೇವಲ ಉಜಿರೆ, ಬೆಳ್ತಂಗಡಿ ತಾಲೂಕಿಗಲ್ಲದೆ ನೆರೆಯ ಚಿಕ್ಕಮಗಳೂರಿನ ಅನೇಕ ತಾಲೂಕುಗಳಿಗೆ ವರದಾನವಾಗಿಲಿದೆ.

ಡಾ.ಕಾಮತ್ ಮಾತನಾಡುತ್ತಾ ಈ ವಿಶೇಷ ಸೌಲಭ್ಯದೊಂದಿಗೆ ತುರ್ತು ಚಿಕಿತ್ಸಾ ವೈದ್ಯರಾದ ಡಾ. ಆದಿತ್ಯರಾವ್ ಅವರ ಸೇವೆಯು ಮಂಗಳೂರಿನಿಂದ 60 ಕಿಲೋಮೀಟರ್ ದೂರದಲ್ಲಿರುವ ಉಜಿರೆಯಲ್ಲಿ ಲಭ್ಯವಿರುವುದು, ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸುವ ಬೆನಕ ಆಸ್ಪತ್ರೆಯ ಬದ್ಧತೆಯನ್ನು ತೋರಿಸುತ್ತದೆ ಎಂದರು .


ಡಾ. ಪದ್ಮನಾಭ ಕಾಮತ್ ರವರಿಗೆ ಡಾ. ಗೋಪಾಲಕೃಷ್ಣ ಮತ್ತು ಡಾ. ಭಾರತಿ ದಂಪತಿಗಳು ಹೂ ಗುಚ್ಛ ನೀಡಿ ಸ್ವಾಗತಿಸಿದರು . ಈ ಸಂದರ್ಭದಲ್ಲಿ ಡಾ.ಅಂಕಿತ ಜಿ. ಭಟ್ , ಡಾ.ಶಶಾಂಕ್ , ಹಾಗೂ ಡಾ. ಕಾಮತ್ ರವರ ಸಹಾಯಕರು ಮತ್ತು ಬೆನಕ ಆಸ್ಪತ್ರೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾ. ಪಂ ಕಾರ್ಯನಿರ್ವಾಹಕ ಅಧಿಕಾರಿ ಕುಸುಮಾಧರ್ ಹೊಳೆನರಸೀಪುರಕ್ಕೆ ವಗಾ೯ವಣೆ: ಕಡಬ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಭವಾನಿಶಂಕರ್ ರವರಿಗೆ ಅಧಿಕಾರ ಹಸ್ತಾoತರ

Suddi Udaya

ಕೊಯ್ಯೂರು ಸ .ಹಿ ಪ್ರಾ. ಶಾಲೆ ಮತ್ತು ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮ

Suddi Udaya

ಕೊಕ್ಕಡದ ಶ್ರೀರಾಮ ಸೇವಾ ಮಂದಿರದಲ್ಲಿ ಮಕ್ಕಳ ಬೇಸಿಗೆ ಶಿಬಿರ

Suddi Udaya

ಅಪಘಾತದಲ್ಲಿ ಗಂಭೀರ ಗಾಯಗೊಂಡ ಕರಾಯದ ಬಾಲಕೃಷ್ಣ ನಾಯ್ಕ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಬೆಳ್ತಂಗಡಿಯಲ್ಲಿ ಎಸ್.ಡಿ.ಪಿ.ಐ ಪಕ್ಷದ ವತಿಯಿಂದ ಲೀಡರ್ಸ್ ಮೀಟ್ ಕಾರ್ಯಕ್ರಮ

Suddi Udaya

ಮೊಗ್ರು: ಸ.ಕಿ.ಪ್ರಾ. ಶಾಲಾ ಮಟ್ಟದ ಪ್ರತಿಭಾ ಕಾರಂಜಿ ಛದ್ಮವೇಷ ಸ್ಪರ್ಧೆ

Suddi Udaya
error: Content is protected !!