September 6, 2026
ಆರೋಗ್ಯಕರಾವಳಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ: ಬೆನಕ ಆಸ್ಪತ್ರೆಯಲ್ಲಿ ನೂತನ “ವೆಂಟಿಲೇಟರ್” ಉದ್ಘಾಟನೆ

ಬೆಳ್ತಂಗಡಿ ತಾಲೂಕಿನಲ್ಲಿಯೇ ಪ್ರಪ್ರಥಮವಾಗಿ NABH  ರಾಷ್ಟ್ರೀಯ ಮಾನ್ಯತೆ ಪಡೆದ ಉಜಿರೆಯ ಬೆನಕ ಹೆಲ್ತ್ ಸೆಂಟರ್ ನಲ್ಲಿ ಬಹುಜನರ ನಿರೀಕ್ಷೆಯನ್ನು ಪರಿಗಣಿಸಿ ನೂತನವಾಗಿ ಜರ್ಮನಿ ನಿರ್ಮಿತ ಅತ್ಯಂತ ನವೀನ ತಂತ್ರಜ್ಞಾನದಿಂದ ರಚಿಸಲ್ಪಟ್ಟ “ELISA 300” ಎಂಬ ಎರಡು ವೆಂಟಿಲೇಟರ್ ಗಳನ್ನು ಈ ದಿನ ದ.ಕ ಜಿಲ್ಲೆಯಲ್ಲಿ ಮನೆ ಮಾತಾಗಿರುವ ಕೆ. ಎಂ. ಸಿ ಆಸ್ಪತ್ರೆ, ಮಂಗಳೂರಿನ ಪ್ರಖ್ಯಾತ ಹೃದ್ರೋಗ ತಜ್ಞರಾದ ಡಾ.ಪದ್ಮನಾಭ ಕಾಮತ್ ರವರು ಉದ್ಘಾಟಿಸಿದರು.

ಡಾ. ಪದ್ಮನಾಭ ಕಾಮತ್ ಅವರು ಮಾತನಾಡುತ್ತಾ ಗ್ರಾಮೀಣ ಪ್ರದೇಶದಲ್ಲಿ ತಂತ್ರಜ್ಞಾನದ ಸೇವೆಯನ್ನು ಒದಗಿಸುತ್ತಿರುವುದು ಶ್ಲಾಘನೀಯ ಎಂದು ಅಭಿನಂದಿಸಿದರು. ಇದು ಕೇವಲ ಉಜಿರೆ, ಬೆಳ್ತಂಗಡಿ ತಾಲೂಕಿಗಲ್ಲದೆ ನೆರೆಯ ಚಿಕ್ಕಮಗಳೂರಿನ ಅನೇಕ ತಾಲೂಕುಗಳಿಗೆ ವರದಾನವಾಗಿಲಿದೆ.

ಡಾ.ಕಾಮತ್ ಮಾತನಾಡುತ್ತಾ ಈ ವಿಶೇಷ ಸೌಲಭ್ಯದೊಂದಿಗೆ ತುರ್ತು ಚಿಕಿತ್ಸಾ ವೈದ್ಯರಾದ ಡಾ. ಆದಿತ್ಯರಾವ್ ಅವರ ಸೇವೆಯು ಮಂಗಳೂರಿನಿಂದ 60 ಕಿಲೋಮೀಟರ್ ದೂರದಲ್ಲಿರುವ ಉಜಿರೆಯಲ್ಲಿ ಲಭ್ಯವಿರುವುದು, ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸುವ ಬೆನಕ ಆಸ್ಪತ್ರೆಯ ಬದ್ಧತೆಯನ್ನು ತೋರಿಸುತ್ತದೆ ಎಂದರು .


ಡಾ. ಪದ್ಮನಾಭ ಕಾಮತ್ ರವರಿಗೆ ಡಾ. ಗೋಪಾಲಕೃಷ್ಣ ಮತ್ತು ಡಾ. ಭಾರತಿ ದಂಪತಿಗಳು ಹೂ ಗುಚ್ಛ ನೀಡಿ ಸ್ವಾಗತಿಸಿದರು . ಈ ಸಂದರ್ಭದಲ್ಲಿ ಡಾ.ಅಂಕಿತ ಜಿ. ಭಟ್ , ಡಾ.ಶಶಾಂಕ್ , ಹಾಗೂ ಡಾ. ಕಾಮತ್ ರವರ ಸಹಾಯಕರು ಮತ್ತು ಬೆನಕ ಆಸ್ಪತ್ರೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಕುಕ್ಕೇಡಿ ಉಳ್ತೂರು ಬಳಿಯ ಕಡ್ತ್ಯಾರ್ ಎಂಬಲ್ಲಿ ಸುಡುಮದ್ದು ತಯಾರಿಕ ಘಟಕದಲ್ಲಿ ಭೀಕರ ಸ್ಪೋಟ ದುರಂತದಲ್ಲಿ ಚಿದ್ರಗೊಂಡು ದೂರಕ್ಕೆ ಎಸೆಯಲ್ಪಟ್ಟ ದೇಹಗಳು – ಮೂವರು ಸಾವು : ಹಲವರಿಗೆ ಗಂಭೀರ ಗಾಯ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ: ಡೊಂಕುಬೆಟ್ಟು ವೀರಮ್ಮ ಸಂಜೀವ ಸಾಲಿಯಾನ್ ಕುಟುಂಬಸ್ಥರಿಂದ ಶ್ರೀ ಕೊಡಮಣಿತ್ತಾಯ ದೈವಕ್ಕೆ ಮರದ ಮಂಚ ಸಮರ್ಪಣೆ

Suddi Udaya

ಐಸಮ್ಮರವರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ವೀಲ್ ಚೇರ್ ವಿತರಣೆ

Suddi Udaya

ಉಜಿರೆ : ಶ್ರೀ ಧ.ಮ. ಕಾಲೇಜು ವಾರ್ಷಿಕೋತ್ಸವದ ಸಭಾ ಕಾರ್ಯಕ್ರಮ – ವಿಶೇಷ ಸಾಧಕರಿಗೆ ಸನ್ಮಾನ – ಚಿಗುರು ಪತ್ರಿಕೆ ಅನಾವರಣ

Suddi Udaya

ಹತ್ಯಡ್ಕ ಪ್ರಾ.ಕೃ.ಪ. ಸಹಕಾರಿ ಸಂಘದ ಸಿಬ್ಬಂದಿವರ್ಗದವರಿಂದ ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಪಿ. ತ್ಯಾಂಪಣ್ಣ ಶೆಟ್ಟಿಗಾರ್ ರವರಿಗೆ ಗೌರವಾರ್ಪಣೆ

Suddi Udaya

ಶಿಬಾಜೆ : ಬೂಡುದಮಕ್ಕಿ ನಿವಾಸಿ ಯಶೋಧರ ಶೆಟ್ಟಿ ನಿಧನ

Suddi Udaya
error: Content is protected !!