22.6 C
ಪುತ್ತೂರು, ಬೆಳ್ತಂಗಡಿ
July 23, 2026
ಆರೋಗ್ಯಕರಾವಳಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ: ಬೆನಕ ಆಸ್ಪತ್ರೆಯಲ್ಲಿ ನೂತನ “ವೆಂಟಿಲೇಟರ್” ಉದ್ಘಾಟನೆ

ಬೆಳ್ತಂಗಡಿ ತಾಲೂಕಿನಲ್ಲಿಯೇ ಪ್ರಪ್ರಥಮವಾಗಿ NABH  ರಾಷ್ಟ್ರೀಯ ಮಾನ್ಯತೆ ಪಡೆದ ಉಜಿರೆಯ ಬೆನಕ ಹೆಲ್ತ್ ಸೆಂಟರ್ ನಲ್ಲಿ ಬಹುಜನರ ನಿರೀಕ್ಷೆಯನ್ನು ಪರಿಗಣಿಸಿ ನೂತನವಾಗಿ ಜರ್ಮನಿ ನಿರ್ಮಿತ ಅತ್ಯಂತ ನವೀನ ತಂತ್ರಜ್ಞಾನದಿಂದ ರಚಿಸಲ್ಪಟ್ಟ “ELISA 300” ಎಂಬ ಎರಡು ವೆಂಟಿಲೇಟರ್ ಗಳನ್ನು ಈ ದಿನ ದ.ಕ ಜಿಲ್ಲೆಯಲ್ಲಿ ಮನೆ ಮಾತಾಗಿರುವ ಕೆ. ಎಂ. ಸಿ ಆಸ್ಪತ್ರೆ, ಮಂಗಳೂರಿನ ಪ್ರಖ್ಯಾತ ಹೃದ್ರೋಗ ತಜ್ಞರಾದ ಡಾ.ಪದ್ಮನಾಭ ಕಾಮತ್ ರವರು ಉದ್ಘಾಟಿಸಿದರು.

ಡಾ. ಪದ್ಮನಾಭ ಕಾಮತ್ ಅವರು ಮಾತನಾಡುತ್ತಾ ಗ್ರಾಮೀಣ ಪ್ರದೇಶದಲ್ಲಿ ತಂತ್ರಜ್ಞಾನದ ಸೇವೆಯನ್ನು ಒದಗಿಸುತ್ತಿರುವುದು ಶ್ಲಾಘನೀಯ ಎಂದು ಅಭಿನಂದಿಸಿದರು. ಇದು ಕೇವಲ ಉಜಿರೆ, ಬೆಳ್ತಂಗಡಿ ತಾಲೂಕಿಗಲ್ಲದೆ ನೆರೆಯ ಚಿಕ್ಕಮಗಳೂರಿನ ಅನೇಕ ತಾಲೂಕುಗಳಿಗೆ ವರದಾನವಾಗಿಲಿದೆ.

ಡಾ.ಕಾಮತ್ ಮಾತನಾಡುತ್ತಾ ಈ ವಿಶೇಷ ಸೌಲಭ್ಯದೊಂದಿಗೆ ತುರ್ತು ಚಿಕಿತ್ಸಾ ವೈದ್ಯರಾದ ಡಾ. ಆದಿತ್ಯರಾವ್ ಅವರ ಸೇವೆಯು ಮಂಗಳೂರಿನಿಂದ 60 ಕಿಲೋಮೀಟರ್ ದೂರದಲ್ಲಿರುವ ಉಜಿರೆಯಲ್ಲಿ ಲಭ್ಯವಿರುವುದು, ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸುವ ಬೆನಕ ಆಸ್ಪತ್ರೆಯ ಬದ್ಧತೆಯನ್ನು ತೋರಿಸುತ್ತದೆ ಎಂದರು .


ಡಾ. ಪದ್ಮನಾಭ ಕಾಮತ್ ರವರಿಗೆ ಡಾ. ಗೋಪಾಲಕೃಷ್ಣ ಮತ್ತು ಡಾ. ಭಾರತಿ ದಂಪತಿಗಳು ಹೂ ಗುಚ್ಛ ನೀಡಿ ಸ್ವಾಗತಿಸಿದರು . ಈ ಸಂದರ್ಭದಲ್ಲಿ ಡಾ.ಅಂಕಿತ ಜಿ. ಭಟ್ , ಡಾ.ಶಶಾಂಕ್ , ಹಾಗೂ ಡಾ. ಕಾಮತ್ ರವರ ಸಹಾಯಕರು ಮತ್ತು ಬೆನಕ ಆಸ್ಪತ್ರೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಲಾಯಿಲದ ಗ್ಯಾಸ್ ಕಚೇರಿಯೊಂದರಲ್ಲಿ ಮ್ಯಾನೇಜರ್ – ಗ್ರಾಹಕರ ನಡುವೆ ಗಲಾಟೆ

Suddi Udaya

ಪುದುವೆಟ್ಟು ಶ್ರೀ ಧರ್ಮಸ್ಥಳ ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ‘ಉತ್ತಮ ಆಹಾರ ಅಭ್ಯಾಸ ಮತ್ತು ಸಾಂಕ್ರಾಮಿಕ ರೋಗಗಳ ತಡೆಗಟ್ಟುವಿಕೆ ಮಾಹಿತಿ ಕಾರ್ಯಕ್ರಮ

Suddi Udaya

ಶ್ರೀ ವಿಶ್ವಕರ್ಮ ಸೇವಾ ಸಂಘದ ಮಹಾಸಭೆ ಹಾಗೂ ವಿಶ್ವಕರ್ಮ ಪೂಜೆ

Suddi Udaya

ಉಜಿರೆ ಎಸ್‌ಡಿಎಂ ನ್ಯಾಚುರಪತಿ ಕಾಲೇಜಿಗೆ ವಿಶೇಷ ಶಾಶ್ವತ ದೀಪಾಲಂಕಾರ

Suddi Udaya

ಅಥ್ಲೆಟಿಕ್ಸ್ ಕ್ರೀಡಾಕೂಟ : ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯ 15 ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಿವಿ, ಮೂಗು, ಗಂಟಲು ತಪಾಸಣಾ ಶಿಬಿರ

Suddi Udaya
error: Content is protected !!