23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮುಂಡಾಜೆ ಸೀಟು ಬಳಿ ಕಾರು ಮತ್ತು ಆಟೋ ರಿಕ್ಷಾ ಮುಖಾಮುಖಿ ಡಿಕ್ಕಿ

ಮುಂಡಾಜೆ: ಮಂಗಳೂರು – ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಸೀಟು ಎಂಬಲ್ಲಿ ಕಾರು ಮತ್ತು ಆಟೋ ರಿಕ್ಷಾ ಮುಖಾಮುಖಿ ಡಿಕ್ಕಿಯಾದ ಘಟನೆ ನ.8ರಂದು ತಡರಾತ್ರಿ ನಡೆದಿದೆ.

ಚಾರ್ಮಾಡಿ ಕಡೆಯಿಂದ ಉಜಿರೆಯತ್ತ ತೆರಳುತ್ತಿದ್ದ ದಾವಣಗೆರೆ ಮೂಲದ ಕಾರು ಹಾಗೂ ಉಜಿರೆಯಿಂದ ಮುಂಡಾಜೆ ಕಡೆ ತೆರಳುತ್ತಿದ್ದ ರಿಕ್ಷಾ ಪರಸ್ಪರ ಡಿಕ್ಕಿ ಹೊಡೆದು ಎರಡು ವಾಹನಗಳು ರಸ್ತೆ ಬದಿಯ ಚರಂಡಿಗೆ ಉರುಳಿ ಬಿದ್ದಿವೆ.

ಘಟನೆಯಲ್ಲಿ ರಿಕ್ಷಾ ಚಾಲಕ ದಿಡುಪೆಯ ಸತೀಶ್ ಗಾಯಗೊಂಡಿದ್ದು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯ ಬಗ್ಗೆ ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Related posts

ಬೆಳ್ತಂಗಡಿಯಲ್ಲಿ ಪೇಪರ್ ಲೇಸ್ ರಿಜಿಸ್ಟ್ರೇಷನ್ ತರಬೇತಿ

Suddi Udaya

ದ.ಕ ಜಿಲ್ಲಾ ವೈನ್ ಮರ್ಚೆಂಟ್ ಅಸೋಸಿಯೇಷನ್ ಉಪಾಧ್ಯಕ್ಷರಾಗಿ ಬೆಳ್ತಂಗಡಿಯ ಯುವ ಉದ್ಯಮಿ ಅಭಿನಂದನ್ ಹರೀಶ್ ಕುಮಾರ್ ಆಯ್ಕೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ 79 ನೇ ಸ್ವಾತಂತ್ರೋತ್ಸವ ಆಚರಣೆ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ : ಶಾಸಕ ಹರೀಶ್ ಪೂಂಜರಿಂದ ರಾಜ್ಯ ಮಟ್ಟದ ವಸ್ತು ಪ್ರದರ್ಶನ ಉದ್ಘಾಟನೆ

Suddi Udaya

ಜ.10: ಜನಸ್ಪಂದನ ಸಭೆಯ ಫಲಶ್ರುತಿ:ತಾಲೂಕು ಆಡಳಿತ ಸೌಧದಲ್ಲಿ ಅರ್ಹ ಫಲಾನುಭವಿಗಳಿಗೆ 94ಸಿ, 94ಸಿಸಿ ಹಕ್ಕುಪತ್ರಗಳನ್ನು ವಿತರಣೆ

Suddi Udaya

ಬೆಳಾಲು: ವ್ಯಕ್ತಿಯೋರ್ವರಿಗೆ ದ್ವಿಚಕ್ರ ವಾಹನ ಡಿಕ್ಕಿ

Suddi Udaya
error: Content is protected !!