25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಶ್ರೀ ಧ.ಮಂ. ಪಿಯು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಶೈಕ್ಷಣಿಕ ಕಾರ್ಯಕ್ರಮ

ಉಜಿರೆ ಶ್ರೀ ಧ.ಮಂ. ಪಿಯು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಶೈಕ್ಷಣಿಕ ಕಾರ್ಯಕ್ರಮವು ನ. 08 ರಂದು ಕಿಲ್ಲೂರು ಶಾಲೆಯಲ್ಲಿ ನಡೆಯಿತು.

ಗ್ರಾಮೀಣ ಆಟಗಳು ಗ್ರಾಮೀಣ ಕ್ರೀಡೆಗಳ ಬಗ್ಗೆ ಒಂದಷ್ಟು ಮಹತ್ವದ ಮಾಹಿತಿಯನ್ನು ನೀಡಿ ಗ್ರಾಮೀಣ ಕ್ರೀಡೆಗಳನ್ನು ನೆನಪು ಮಾಡುವ ಮೂಲಕ ಒಂದಷ್ಟು ಕ್ರೀಡೆಗಳನ್ನು ನಡೆಸಿ, ಇಂದಿನ ಆಟಗಳ ಬಗ್ಗೆ ನೆನಪು ಮಾಡಲಾಯಿತು, ಗ್ರಾಮೀಣ ಕ್ರೀಡೆಗೆ ಆಸಕ್ತಿ ನೀಡುವಂತೆ, ಸಂಪನ್ಮೂಲ ವ್ಯಕ್ತಿಗಳಾದ ಮಹಾವೀರ ಜೈನ್ ಕನ್ನಡ ಭಾಷಾ ಉಪನ್ಯಾಸಕರು ಶ್ರೀ. ಧ.ಮo ಪ.ಪೂ ಕಾಲೇಜು ಉಜಿರೆ ಇವರು ಶಿಬಿರಾರ್ಥಿಗಳಿಗೆ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತೀಕ್ಷಿತ್ ಕೆ ಕಲ್ಬೆಟ್ಟು ತಾಲೂಕು ಸಂಯೋಜಕರು, ನೆಹರು ಯುವ ಕೇಂದ್ರ ಮಂಗಳೂರು.
ರಾಷ್ಟ್ರೀಯ ಸೇವಾ ಯೋಜನೆಯ ಕೆಲಸ ಕಾರ್ಯಗಳಲ್ಲಿ ಒಳ್ಳೆಯ ಅಂಶಗಳನ್ನು ತೆಗೆದುಕೊಂಡು ತನ್ನನ್ನು ತಾನು ತೊಡಗಿಸಿಕೊಂಡು ಸಮಯ ಪಾಲನೆ ಹಾಗೂ ಶಿಸ್ತು ವೈಯಕ್ತಿಕ ವೃತ್ತಿ ಜೀವನ ಜೊತೆಗೆ ಸ್ವಲ್ಪ ಸಮಯವನ್ನು ರಾಷ್ಟ್ರೀಯ ಕಾರ್ಯದಲ್ಲಿ ಕೂಡ ಕೈಜೋಡಿಸುವoತೆ ಶಿಬಿರಾರ್ಥಿಗಳಿಗೆ ತಿಳಿಸಿದರು.

ಗ್ರಾಮೀಣ ಕ್ರೀಡಾಕೂಟದ ಭಿತ್ತಿಪತ್ರಿಕೆ ಅನಾವರಣ ಮೋಹನ ಕಿಲ್ಲೂರು ಇವರು ನೆರವೇರಿಸಿದರು. ಕಿಲ್ಲೂರು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಜಯಶ್ರೀ , ಕಿಲ್ಲೂರು ಎಸ್ ಡಿ ಎಂ ಸಿ ಸದಸ್ಯರಾದ ಗಿರೀಶ್ ಗೌಡ ಜಾರಿಗೆ, ಚಂದ್ರಶೇಖರ ಮಾಲೂರು,
ಯೋಜನಾಧಿಕಾರಿಗಳಾದ ಡಾ. ಪ್ರಸನ್ನಕುಮಾರ್ ಐತಾಲ್ ಮತ್ತು ಸಹಯೋಜನಾಧಿಕಾರಿಗಳಾದ ಶ್ರೀಮತಿ ಪದ್ಮಶ್ರೀ ರಕ್ಷಿತ್ ಉಪಸ್ಥಿತರಿದ್ದರು.

Related posts

ಮುಂಡಾಜೆ: ವಿಶ್ವ ಸ್ಕಾರ್ಫ್ ದಿನಾಚರಣೆ

Suddi Udaya

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ರಾಜ್ಯಾಧ್ಯಕ್ಷರಾಗಿ ಡಾ. ರವಿ ಮಂಡ್ಯ ಆಯ್ಕೆ

Suddi Udaya

ನಡ ನಿವಾಸಿ ಧೈರ್ಯ ಸಮಾಹಿತ ನವೀನ್ UIPM ವರ್ಲ್ಡ್ ಚಾಂಪಿಯನ್‌ಷಿಪ್‌ ಗೆ ಆಯ್ಕೆ

Suddi Udaya

ಗೇರುಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ. 94.11 ಫಲಿತಾಂಶ

Suddi Udaya

ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ನಲ್ಲಿ “ಆಧುನಿಕ ಉದ್ಯೋಗ ಮಾರುಕಟ್ಟೆಯಲ್ಲಿ ಉದ್ಯೋಗಾರ್ಹತಾ ಕೌಶಲ್ಯ ಮತ್ತು ಅವಕಾಶಗಳ ವಾಸ್ತವತೆ” ವಿಚಾರದ ಕುರಿತು ಉಪನ್ಯಾಸ ಕಾರ್ಯಕ್ರಮ

Suddi Udaya
error: Content is protected !!