24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಿಧಿವಿಜ್ಞಾನ ಕ್ಷೇತ್ರ ಉದ್ಯೋಗಕ್ಕಾಗಿ ನಡೆಸಿದ ಫೋರೆನ್ಸಿಕ್‌ ಸೈನ್ಸ್‌ ಅರ್ಹತಾ ಪರೀಕ್ಷೆಯಲ್ಲಿ ಎಕ್ಸೆಲ್ ವಿದ್ಯಾರ್ಥಿಗಳಿಂದ ಅತ್ಯುತ್ತಮ ಸಾಧನೆ

ಗುರುವಾಯನಕೆರೆ: ಸಾಧನೆಗಳ ಮೂಲಕ ರಾಜ್ಯದ ಶೈಕ್ಷಣಿಕ ಭೂಪಟದಲ್ಲೇ ಅನನ್ಯ ಸ್ಥಾನಗಳಿಸಿದ ಧರ್ಮಸ್ಥಳದ ಹತ್ತಿರವಿರುವ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ಇನ್ಫಿನಿಟಿ ಲರ್ನಿಂಗ್ ಫೌಂಡೇಶನ್ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಕ್ಸೆಲ್ ಪದವಿ ಪೂರ್ವ ವಿದ್ಯಾಸಂಸ್ಥೆಯು ನೀಟ್, ಜೆ.ಇ.ಇ, ಸಿಇಟಿ, ನಾಟ ಮುಂತಾದ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳನ್ನು ಸಾಧಕರಾಗುವಂತೆ ಮಾಡಿ ರಾಷ್ಟ್ರದಾದ್ಯಂತ ಪ್ರಸಿದ್ಧಿಯನ್ನು ಪಡೆದಿದೆ. ಇದರ ಜೊತೆಗೆ ವಿಜ್ಞಾನ ಕ್ಷೇತ್ರದ ವಿವಿಧ ವೃತ್ತಿಪರ, ಕೌಶಲ್ಯಯುತ ತರಬೇತಿಗಳನ್ನು ನೀಡುತ್ತಾ , ವಿದ್ಯಾರ್ಥಿಗಳ ಭವಿಷ್ಯಕ್ಕೆ ಆಶಾಕಿರಣವಾಗಿದೆ. ವಿಧಿ ವಿಜ್ಞಾನ ಕ್ಷೇತ್ರಕ್ಕಾಗಿ ಇನ್ಸ್ಟಿಟ್ಯೂಟ್ ಆಫ್ ಫೋರೆನ್ಸಿಕ್‌ ಸೈನ್ಸ್‌ ನಡೆಸಿದ ಅರ್ಹತಾ ಪರೀಕ್ಷೆಯಲ್ಲಿ ಭಾಗವಹಿಸಿದ ಎಕ್ಸೆಲ್ ನ ಎಲ್ಲಾ ವಿದ್ಯಾರ್ಥಿಗಳು ಅತ್ಯತ್ತಮ ಸಾಧನೆಯನ್ನು ಮಾಡಿರುತ್ತಾರೆ.


ವಿದ್ಯಾರ್ಥಿಗಳಾದ ಮನೋಜ್ಞಾ ಎಸ್. ಸಂಜನಾ ಎಲ್. ಐಶ್ವರ್ಯ ಗೋಪಿ, ಶಿಫ್ರಾ ಸರಿನಾ ಮಾಬೆನ್, ತುಶಿತಾ ಜಿ.ಸಿ. ಚಿಂತನ ಕೆ ಆರ್, ಕೀರ್ತನ್ ಜಿ, ಚಿರಾವಿ ಎಂ.ಆರ್. ಇವರು ಉತ್ತಮ ಫಲಿತಾಂಶವನ್ನು ಪಡೆದುಕೊಂಡು , ಸಾಧನೆ ಮೆರೆದಿದ್ದಾರೆ.


ರಾಷ್ಟ್ರಮಟ್ಟದಲ್ಲಿ ಅತಿ ಹೆಚ್ಚು ಸರಕಾರಿ ವೈದ್ಯಕೀಯ ಹಾಗೂ ಇಂಜಿನಿಯರಿಂಗ್ ಸೀಟುಗಳನ್ನು ಪಡೆದ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾದ ಎಕ್ಸೆಲ್ ಪದವಿ ಪೂರ್ವ ಕಾಲೇಜು ಗ್ರಾಮೀಣ ಭಾಗದ ಮತ್ತು ನಗರದ ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳ ವೈದ್ಯರಾಗುವ ಕನಸಿಗೆ ಸದಾ ಪ್ರೋತ್ಸಾಹವನ್ನು ನೀಡುತ್ತಾ ಬಂದಿದೆ.

Related posts

ಬೆಳ್ತಂಗಡಿ ಮೊಬೈಲ್ ರಿಟೇಲರ್ ಅಸೋಸಿಯೇಷನ್ ಮಹಾಸಭೆ ಹಾಗೂ ನೂತನ ಸಮಿತಿ ರಚನೆ

Suddi Udaya

ನಾರಾವಿ: ಸಂತ ಅಂತೋನಿ ಪ.ಪೂ. ಕಾಲೇಜಿನ ಪ್ರಥಮ ಪ.ಪೂ. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮತ್ತು ಸ್ವಾಗತ ಕಾರ್ಯಕ್ರಮ

Suddi Udaya

ನಡ: ಸ್ಟಾರ್ ಲೈನ್ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ ” ಫಿಟ್ ಫೆಸ್ಟ್ 2024 “

Suddi Udaya

ಗುರುವಾಯನಕೆರೆ ಎಕ್ಸೆಲ್ ವಿದ್ಯಾರ್ಥಿಗಳ ಪಾಲಕರ 301 ಶಿಕ್ಷಕರಿಗೆ ಗೌರವಾರ್ಪಣೆ : ಸಂಸ್ಕಾರಯುತ,ಗುಣಮಟ್ಟದ ಶಿಕ್ಷಣಕ್ಕೆ ಎಕ್ಸೆಲ್ ಕಾಲೇಜು ರಾಜ್ಯ ಮಟ್ಟದಲ್ಲಿ ಗುರುತಿಸಿದೆ: ಮೂಡುಬಿದಿರೆ ಭಟ್ಟಾರಕ ಶ್ರಿಗಳು

Suddi Udaya

ಉಜಿರೆಯ ಎಸ್ ಎಲ್ ವಿ ಕನ್ಸ್ಟ್ರಕ್ಷನ್ ನ ಸಿವಿಲ್ ಇಂಜಿನಿಯರ್ ಸಂಪತ್ ರತ್ನ ರಾವ್ ಎಮಿನೆಂಟ್ ಇಂಜಿನಿಯರ್ ಪ್ರಶಸ್ತಿಗೆ ಆಯ್ಕೆ

Suddi Udaya

ಹೊಸಂಗಡಿ ಗ್ರಾ.ಪಂ. ಮತ್ತು ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ

Suddi Udaya
error: Content is protected !!