September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಿಧಿವಿಜ್ಞಾನ ಕ್ಷೇತ್ರ ಉದ್ಯೋಗಕ್ಕಾಗಿ ನಡೆಸಿದ ಫೋರೆನ್ಸಿಕ್‌ ಸೈನ್ಸ್‌ ಅರ್ಹತಾ ಪರೀಕ್ಷೆಯಲ್ಲಿ ಎಕ್ಸೆಲ್ ವಿದ್ಯಾರ್ಥಿಗಳಿಂದ ಅತ್ಯುತ್ತಮ ಸಾಧನೆ

ಗುರುವಾಯನಕೆರೆ: ಸಾಧನೆಗಳ ಮೂಲಕ ರಾಜ್ಯದ ಶೈಕ್ಷಣಿಕ ಭೂಪಟದಲ್ಲೇ ಅನನ್ಯ ಸ್ಥಾನಗಳಿಸಿದ ಧರ್ಮಸ್ಥಳದ ಹತ್ತಿರವಿರುವ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ಇನ್ಫಿನಿಟಿ ಲರ್ನಿಂಗ್ ಫೌಂಡೇಶನ್ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಕ್ಸೆಲ್ ಪದವಿ ಪೂರ್ವ ವಿದ್ಯಾಸಂಸ್ಥೆಯು ನೀಟ್, ಜೆ.ಇ.ಇ, ಸಿಇಟಿ, ನಾಟ ಮುಂತಾದ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳನ್ನು ಸಾಧಕರಾಗುವಂತೆ ಮಾಡಿ ರಾಷ್ಟ್ರದಾದ್ಯಂತ ಪ್ರಸಿದ್ಧಿಯನ್ನು ಪಡೆದಿದೆ. ಇದರ ಜೊತೆಗೆ ವಿಜ್ಞಾನ ಕ್ಷೇತ್ರದ ವಿವಿಧ ವೃತ್ತಿಪರ, ಕೌಶಲ್ಯಯುತ ತರಬೇತಿಗಳನ್ನು ನೀಡುತ್ತಾ , ವಿದ್ಯಾರ್ಥಿಗಳ ಭವಿಷ್ಯಕ್ಕೆ ಆಶಾಕಿರಣವಾಗಿದೆ. ವಿಧಿ ವಿಜ್ಞಾನ ಕ್ಷೇತ್ರಕ್ಕಾಗಿ ಇನ್ಸ್ಟಿಟ್ಯೂಟ್ ಆಫ್ ಫೋರೆನ್ಸಿಕ್‌ ಸೈನ್ಸ್‌ ನಡೆಸಿದ ಅರ್ಹತಾ ಪರೀಕ್ಷೆಯಲ್ಲಿ ಭಾಗವಹಿಸಿದ ಎಕ್ಸೆಲ್ ನ ಎಲ್ಲಾ ವಿದ್ಯಾರ್ಥಿಗಳು ಅತ್ಯತ್ತಮ ಸಾಧನೆಯನ್ನು ಮಾಡಿರುತ್ತಾರೆ.


ವಿದ್ಯಾರ್ಥಿಗಳಾದ ಮನೋಜ್ಞಾ ಎಸ್. ಸಂಜನಾ ಎಲ್. ಐಶ್ವರ್ಯ ಗೋಪಿ, ಶಿಫ್ರಾ ಸರಿನಾ ಮಾಬೆನ್, ತುಶಿತಾ ಜಿ.ಸಿ. ಚಿಂತನ ಕೆ ಆರ್, ಕೀರ್ತನ್ ಜಿ, ಚಿರಾವಿ ಎಂ.ಆರ್. ಇವರು ಉತ್ತಮ ಫಲಿತಾಂಶವನ್ನು ಪಡೆದುಕೊಂಡು , ಸಾಧನೆ ಮೆರೆದಿದ್ದಾರೆ.


ರಾಷ್ಟ್ರಮಟ್ಟದಲ್ಲಿ ಅತಿ ಹೆಚ್ಚು ಸರಕಾರಿ ವೈದ್ಯಕೀಯ ಹಾಗೂ ಇಂಜಿನಿಯರಿಂಗ್ ಸೀಟುಗಳನ್ನು ಪಡೆದ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾದ ಎಕ್ಸೆಲ್ ಪದವಿ ಪೂರ್ವ ಕಾಲೇಜು ಗ್ರಾಮೀಣ ಭಾಗದ ಮತ್ತು ನಗರದ ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳ ವೈದ್ಯರಾಗುವ ಕನಸಿಗೆ ಸದಾ ಪ್ರೋತ್ಸಾಹವನ್ನು ನೀಡುತ್ತಾ ಬಂದಿದೆ.

Related posts

ಬೆಳ್ತಂಗಡಿ ಸಾಮಾಜಿಕ ಅರಣ್ಯ ವಲಯದಿಂದ ಪರಿಸರ ದಿನಾಚರಣೆ

Suddi Udaya

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ-ರಕ್ಷಕ ಸಂಘದ ಸಭೆ

Suddi Udaya

ಬಂದಾರು: ಬೊಳೋಡಿ ಸೇತುವೆ ಬಳಿ ಧರೆ ಕುಸಿತ

Suddi Udaya

ಎಸ್ ಎ ಫ್ರೆಂಡ್ಸ್ ವತಿಯಿಂದ ಶಬ್ಬೀರ್ ಮಾಲಾಡಿ ಮತ್ತು ಅಕ್ಷಯ್ ಕಲ್ಲೆಗ ಟೈಗರ್ಸ್ ಪುತ್ತೂರು ಇವರ ಸ್ಮಾರನಾರ್ಥಕ ಕಬಡ್ಡಿ ಪಂದ್ಯಾಟ

Suddi Udaya

ಸೋಣಂದೂರು ಸೇತುವೆ ಶಿಥಿಲಾವಸ್ಥೆಗೆ: ಘನ ವಾಹನಗಳ ಸಂಚಾರ ನಿಷೇಧ

Suddi Udaya

ಮಡಂತ್ಯಾರು ಹೈಸ್ಕೂಲ್ ರೀಯೂನಿಯನ್ ವತಿಯಿಂದ ಇತ್ತೀಚೆಗೆ ನಿಧನರಾದ ಡೇವಿಡ್ ಡಿಸೋಜಾರಿಗೆ ಶ್ರದ್ಧಾಂಜಲಿ

Suddi Udaya
error: Content is protected !!