25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಿಧಿವಿಜ್ಞಾನ ಕ್ಷೇತ್ರ ಉದ್ಯೋಗಕ್ಕಾಗಿ ನಡೆಸಿದ ಫೋರೆನ್ಸಿಕ್‌ ಸೈನ್ಸ್‌ ಅರ್ಹತಾ ಪರೀಕ್ಷೆಯಲ್ಲಿ ಎಕ್ಸೆಲ್ ವಿದ್ಯಾರ್ಥಿಗಳಿಂದ ಅತ್ಯುತ್ತಮ ಸಾಧನೆ

ಗುರುವಾಯನಕೆರೆ: ಸಾಧನೆಗಳ ಮೂಲಕ ರಾಜ್ಯದ ಶೈಕ್ಷಣಿಕ ಭೂಪಟದಲ್ಲೇ ಅನನ್ಯ ಸ್ಥಾನಗಳಿಸಿದ ಧರ್ಮಸ್ಥಳದ ಹತ್ತಿರವಿರುವ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ಇನ್ಫಿನಿಟಿ ಲರ್ನಿಂಗ್ ಫೌಂಡೇಶನ್ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಕ್ಸೆಲ್ ಪದವಿ ಪೂರ್ವ ವಿದ್ಯಾಸಂಸ್ಥೆಯು ನೀಟ್, ಜೆ.ಇ.ಇ, ಸಿಇಟಿ, ನಾಟ ಮುಂತಾದ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳನ್ನು ಸಾಧಕರಾಗುವಂತೆ ಮಾಡಿ ರಾಷ್ಟ್ರದಾದ್ಯಂತ ಪ್ರಸಿದ್ಧಿಯನ್ನು ಪಡೆದಿದೆ. ಇದರ ಜೊತೆಗೆ ವಿಜ್ಞಾನ ಕ್ಷೇತ್ರದ ವಿವಿಧ ವೃತ್ತಿಪರ, ಕೌಶಲ್ಯಯುತ ತರಬೇತಿಗಳನ್ನು ನೀಡುತ್ತಾ , ವಿದ್ಯಾರ್ಥಿಗಳ ಭವಿಷ್ಯಕ್ಕೆ ಆಶಾಕಿರಣವಾಗಿದೆ. ವಿಧಿ ವಿಜ್ಞಾನ ಕ್ಷೇತ್ರಕ್ಕಾಗಿ ಇನ್ಸ್ಟಿಟ್ಯೂಟ್ ಆಫ್ ಫೋರೆನ್ಸಿಕ್‌ ಸೈನ್ಸ್‌ ನಡೆಸಿದ ಅರ್ಹತಾ ಪರೀಕ್ಷೆಯಲ್ಲಿ ಭಾಗವಹಿಸಿದ ಎಕ್ಸೆಲ್ ನ ಎಲ್ಲಾ ವಿದ್ಯಾರ್ಥಿಗಳು ಅತ್ಯತ್ತಮ ಸಾಧನೆಯನ್ನು ಮಾಡಿರುತ್ತಾರೆ.


ವಿದ್ಯಾರ್ಥಿಗಳಾದ ಮನೋಜ್ಞಾ ಎಸ್. ಸಂಜನಾ ಎಲ್. ಐಶ್ವರ್ಯ ಗೋಪಿ, ಶಿಫ್ರಾ ಸರಿನಾ ಮಾಬೆನ್, ತುಶಿತಾ ಜಿ.ಸಿ. ಚಿಂತನ ಕೆ ಆರ್, ಕೀರ್ತನ್ ಜಿ, ಚಿರಾವಿ ಎಂ.ಆರ್. ಇವರು ಉತ್ತಮ ಫಲಿತಾಂಶವನ್ನು ಪಡೆದುಕೊಂಡು , ಸಾಧನೆ ಮೆರೆದಿದ್ದಾರೆ.


ರಾಷ್ಟ್ರಮಟ್ಟದಲ್ಲಿ ಅತಿ ಹೆಚ್ಚು ಸರಕಾರಿ ವೈದ್ಯಕೀಯ ಹಾಗೂ ಇಂಜಿನಿಯರಿಂಗ್ ಸೀಟುಗಳನ್ನು ಪಡೆದ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾದ ಎಕ್ಸೆಲ್ ಪದವಿ ಪೂರ್ವ ಕಾಲೇಜು ಗ್ರಾಮೀಣ ಭಾಗದ ಮತ್ತು ನಗರದ ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳ ವೈದ್ಯರಾಗುವ ಕನಸಿಗೆ ಸದಾ ಪ್ರೋತ್ಸಾಹವನ್ನು ನೀಡುತ್ತಾ ಬಂದಿದೆ.

Related posts

ರಾಜ್ಯಮಟ್ಟದ ಕರಾಟೆ ಸ್ಪರ್ಧೆ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಸತ್ಯರ್ಥ ಎಸ್. ಜೈನ್ ಪ್ರಥಮ ಸ್ಥಾನ

Suddi Udaya

ಡಾ. ಯಶೋವರ್ಮರ ಸ್ಮರಣಾರ್ಥ ಪರಿಸರ ನಿರ್ವಹಣಾ ಕಾರ್ಯಾಗಾರ

Suddi Udaya

ಮಚ್ಚಿನ : ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ವಾರ್ಷಿಕ ಮಹಾಸಭೆ, ಪದಾಧಿಕಾರಿಗಳ ಆಯ್ಕೆ

Suddi Udaya

ಜು.10 ರಿಂದ ಆ.20ರವರೆಗೆ ಕುಮಟಾದಲ್ಲಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಬ್ರಹ್ಮಾನಂದ ಸರಸ್ವತಿ ಜೀ ಮಹಾರಾಜ ಅವರ ಚಾತುರ್ಮಾಸ್ಯ ವ್ರತಾಚರಣೆ

Suddi Udaya

ಅಟೋ ರಿಕ್ಷಾ ಮತ್ತು ಬೈಕ್ ಢಿಕ್ಕಿ: ಪ್ರಯಾಣಿಕರಿಗೆ ಗಂಭೀರ ಗಾಯ

Suddi Udaya

ಶಾಸಕ ಹರೀಶ್ ಪೂಂಜರ ಹುಟ್ಟುಹಬ್ಬ: ಕನ್ನಾಜೆಯ ಸುರಕ್ಷಾ ಆಚಾರ್ಯ ರಿಂದ ನೂಲಿನಲ್ಲಿ ತಯಾರಿಸಿದ ಹರೀಶ್ ಪೂಂಜರ ಚಿತ್ರ ಉಡುಗೊರೆ

Suddi Udaya
error: Content is protected !!