24.5 C
ಪುತ್ತೂರು, ಬೆಳ್ತಂಗಡಿ
May 26, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಧರ್ಮಸ್ಥಳ ಲಕ್ಷ ದೀಪೋತ್ಸವದ ಪ್ರಯುಕ್ತ 12ನೇ ವರ್ಷದ ಪಾದಯಾತ್ರೆಯ ಪೂರ್ವಭಾವಿ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷ ದೀಪೋತ್ಸವದ ಪ್ರಯುಕ್ತ 12ನೇ ವರ್ಷದ ಪಾದಯಾತ್ರೆ ಕುರಿತು ಪಾದಯಾತ್ರೆ ಸಮಿತಿಯ ಪೂರ್ವಭಾವಿ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನ.10 ರಂದು ಉಜಿರೆಯ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಠಾರದಲ್ಲಿ ನಡೆಯಿತು.

ಉಜಿರೆ ಜನಾರ್ದನ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡ್ವೆಟ್ನಾಯ ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ ಪಾದಯಾತ್ರೆಯು ಬೆರಳೆಣಿಕೆಯಿಂದ ಪ್ರಾರಂಭವಾಗಿ ಇಂದು ಐತಿಹಾಸಿಕ ಕಾರ್ಯಕ್ರಮವಾಗಿ ಮೂಡಿದೆ. ಸಮಾಜದ ಸಾತ್ವಿಕ ಶಕ್ತಿ ಎದ್ದು ನಿಲ್ಲದಿದ್ದರೆ ಅದು ಆ ಸಮಾಜ ನಶಿಸಿ ಹೋಗುವ ಸೂಚನೆ. ಹಾಗಾಗಿ ನಮ್ಮ ಧಾರ್ಮಿಕ ಪರಂಪರೆ, ಶ್ರದ್ದಾ ಕೇಂದ್ರವನ್ನು ರಕ್ಷಣೆ ಮಾಡುವ ಪಣವನ್ನು ನಾವೆಲ್ಲರೂ ಪಡಬೇಕು ಎನ್ನುವ ದೃಷ್ಠಿಯಿಂದ ಈ ಪಾದಯಾತ್ರೆಯನ್ನು ಮಾಡುವುದಕ್ಕೆ ದೇವರು ಅವಕಾಶ ಮಾಡಿ ಕೊಟ್ಟಿದ್ದಾರೆ ಎಂದು ಪಾದಯಾತ್ರೆಯ ಯಶಸ್ವಿಗೆ ಶುಭಹಾರೈಸಿದರು.

ಶ್ರೀ ಕ್ಷೇತ್ರ.ಧ.ಗ್ರಾ.ಯೋ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅನಿಲ್ ಕುಮಾರ್ ಎಸ್.ಎಸ್ ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ ಪಾದಯಾತ್ರೆಯು ಸಣ್ಣ ಚಿಂತನೆಯಿಂದ ದೊಡ್ಡ ಸಂಸ್ಕೃತಿಯಾಗಿ ಬೆಳೆದು ನಿಂತಿದೆ. ಉಜಿರೆಯ ಜನತೆಗೆ ಕ್ಷೇತ್ರದೊಂದಿಗೆ ಜೋಡಣೆ ಮಾಡುವ ಅವಕಾಶ ಪಾದಯಾತ್ರೆ ಮಾಡಿದೆ. ಪಾದಯಾತ್ರೆಯಲ್ಲಿ ಹಲವು ಭಜನಾ ತಂಡಗಳು ಭಾಗಿಯಾಗಳಿದ್ದು, ಶಿಸ್ತು ಹಾಗೂ ಸ್ವಚ್ಛತೆಗೆ ಆದ್ಯತೆಯನ್ನು ನೀಡಬೇಕು ಎಂದರು.

ಪಾದಯಾತ್ರೆಯ ಮಾರ್ಗದರ್ಶಕ ಪೂರನ್ ವರ್ಮ ಮಾತನಾಡಿ “ಭಕ್ತಿ ,ಶ್ರದ್ಧೆ ,ಗೌರವ, ಪ್ರೀತಿಯ ಹೆಜ್ಜೆಯೊಂದಿಗೆ ಆರಂಭವಾದ ಪಾದಯಾತ್ರೆ ಯಶಸ್ವಿಯಾಗಿ ನಡೆದಿದೆ. ಪಾದಯಾತ್ರೆಯಿಂದ ಶ್ರೀಕ್ಷೇತ್ರಕ್ಕೆ ಭಕ್ತರು ಇನ್ನಷ್ಟು ಹತ್ತಿರವಾಗಿದ್ದಾರೆ. ಈ ಬಾರಿಯ ಪಾದಯಾತ್ರೆಗೆ ಬಿಳಿಯ ವಸ್ತ್ರ ಧರಿಸಿ ಬಂದರೆ ಉತ್ತಮ. ಪಾದಯಾತ್ರೆಯು ದೇವರ ನಾಮಸ್ಮರಣೆಯೊಂದಿಗೆ ನಿಧಾನವಾಗಿ ಸಾಗಬೇಕು. ಈ ಸಂದರ್ಭ ಅಲ್ಲಲ್ಲಿ ನೀರು ಮತ್ತು ಬೆಲ್ಲದ ವ್ಯವಸ್ಥೆ ಇರಲಿದೆ” ಎಂದು ಹೇಳಿದರು.

ಯೋಜನೆಯ ಪ್ರಾದೇಶಿಕ ನಿರ್ದೇಶಕ ದುಗ್ಗೇಗೌಡ ಮಾತನಾಡಿದರು.

ಜನಜಾಗೃತಿ ವೇದಿಕೆ ಅಧ್ಯಕ್ಷ ಕಾಸಿಂ ಮಲ್ಲಿಗೆ ಮನೆ, ತಾಲೂಕು ಒಕ್ಕೂಟದ ಅಧ್ಯಕ್ಷ ಸೀತಾರಾಮ್ ಆರ್. ಬೆಳ್ತಂಗಡಿ, ಉಜಿರೆ ಎಸ್‌ ಡಿಎಂ ಕಾಲೇಜಿನ ಪ್ರಿನ್ಸಿಪಾಲ್ ಡಾ. ಬಿ.ಎ. ಕುಮಾರ್ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.

ಯೋಜನೆಯ ಕೃಷಿ ನಿರ್ದೇಶಕ ರಾಮ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್ ಸ್ವಾಗತಿಸಿದರು. ಯೋಜನಾಧಿಕಾರಿ ಸುರೇಂದ್ರ ವಂದಿಸಿದರು.

ಕಳೆದ ವರ್ಷದ ಪಾದಯಾತ್ರೆ ಆಯ-ವ್ಯಯ ಮಂಡಿಸಲಾಯಿತು. ಹಾಗೂ ಈ ಬಾರಿಯ ಪಾದಯಾತ್ರೆಯ ಆಹ್ವಾನ ಪತ್ರಿಕೆ ಬಿಡುಗಡೆಗೊಳಿಸಲಾಯಿತು.

ನ.26ರಂದು ಪಾದಯಾತ್ರೆ:- ಈ ಬಾರಿಯ ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ಪಾದಯಾತ್ರೆ ನ. 26ರಂದು ಮಧ್ಯಾಹ್ನ 3 ಗಂಟೆಗೆ ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದಿಂದ ಶ್ರೀ ಕ್ಷೇತ್ರ ಧರ್ಮಸ್ಥಳದವರೆಗೆ ನಡೆಯಲಿದೆ. ಇದು 12ನೇ ವರ್ಷದ ಪಾದಯಾತ್ರೆಯಾಗಿದ್ದು ಇದರಲ್ಲಿ ಗಣ್ಯರ ಸಹಿತ ಅನೇಕ ಭಜನಾ ತಂಡಗಳು, ಭಕ್ತ ಬಾಂಧವರು ಭಾಗವಹಿಸಲಿದ್ದಾರೆ. ಶಿಸ್ತು, ಸ್ವಚ್ಛತೆಗೆ ಆದ್ಯತೆ ನೀಡುವ ಈ ಪಾದಯಾತ್ರೆ ಲಕ್ಷದೀಪೋತ್ಸವದ ಪ್ರಾರಂಭದ ದಿನ ನಡೆಯುತ್ತಾ ಬಂದಿದೆ.

Related posts

ವಿ.ಹಿ.ಪ ಬಜರಂಗದಳ ಚಾರ್ಮಾಡಿ ಘಟಕದ ವತಿಯಿಂದ ದತ್ತಮಾಲಧಾರಣೆಗೆ ಚಾಲನೆ

Suddi Udaya

ನಕ್ಸಲ್ ನಾಯಕ ವಿಕ್ರಮ್ ಗೌಡ ನಕ್ಸಲ್ ನಿಗ್ರಹ ದಳದ ಎನ್ ಕೌಂಟರ್ ನಲ್ಲಿ ಹತ್ಯೆ: ರಾಜ್ಯ ಸರ್ಕಾರ ತಕ್ಷಣ ಎನ್ ಕೌಂಟರ್ ನ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು: ಶೇಖರ್ ಲಾಯಿಲ

Suddi Udaya

ಉಜಿರೆ ಎಸ್.ಡಿ.ಎಮ್ ಸಮೂಹ ಶಿಕ್ಷಣ ಸಂಸ್ಥೆಗಳಿಂದ ಶಿಕ್ಷಕರಿಗೆ ‘ಅನುಭವ ಕಲಿಕೆ’ ಕಾರ್ಯಾಗಾರ

Suddi Udaya

ಶಿಶಿಲ ಶೌರ್ಯ ವಿಪತ್ತು ತಂಡದ ಕೆಲಸ ಕಾರ್ಯಗಳನ್ನು ಮೆಚ್ಚಿ ಜೀವರಕ್ಷಕ ಪರಿಕರಗಳನ್ನು ಕೊಡುಗೆಯಾಗಿ ನೀಡಿದ ಎಸ್ ಎಂ ಶಿವಪ್ರಕಾಶ್

Suddi Udaya

ಲಾಯಿಲ: 35ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ :ಝೆoಕಾರ ರಾಷ್ಟ್ರೀಯ ಶಿಕ್ಷಣ ಮತ್ತು ಸಾಂಸ್ಕೃತಿಕ ಫೆಸ್ಟ್ : ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ವಿದ್ಯಾರ್ಥಿ ವನಿಶ್ ಗೆ ಫೋಟೋಗ್ರಫಿ ಸ್ಪರ್ಧೆಯಲ್ಲಿ ಪ್ರಥಮ

Suddi Udaya
error: Content is protected !!