25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಧರ್ಮಸ್ಥಳ ಲಕ್ಷ ದೀಪೋತ್ಸವದ ಪ್ರಯುಕ್ತ 12ನೇ ವರ್ಷದ ಪಾದಯಾತ್ರೆಯ ಪೂರ್ವಭಾವಿ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷ ದೀಪೋತ್ಸವದ ಪ್ರಯುಕ್ತ 12ನೇ ವರ್ಷದ ಪಾದಯಾತ್ರೆ ಕುರಿತು ಪಾದಯಾತ್ರೆ ಸಮಿತಿಯ ಪೂರ್ವಭಾವಿ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನ.10 ರಂದು ಉಜಿರೆಯ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಠಾರದಲ್ಲಿ ನಡೆಯಿತು.

ಉಜಿರೆ ಜನಾರ್ದನ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡ್ವೆಟ್ನಾಯ ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ ಪಾದಯಾತ್ರೆಯು ಬೆರಳೆಣಿಕೆಯಿಂದ ಪ್ರಾರಂಭವಾಗಿ ಇಂದು ಐತಿಹಾಸಿಕ ಕಾರ್ಯಕ್ರಮವಾಗಿ ಮೂಡಿದೆ. ಸಮಾಜದ ಸಾತ್ವಿಕ ಶಕ್ತಿ ಎದ್ದು ನಿಲ್ಲದಿದ್ದರೆ ಅದು ಆ ಸಮಾಜ ನಶಿಸಿ ಹೋಗುವ ಸೂಚನೆ. ಹಾಗಾಗಿ ನಮ್ಮ ಧಾರ್ಮಿಕ ಪರಂಪರೆ, ಶ್ರದ್ದಾ ಕೇಂದ್ರವನ್ನು ರಕ್ಷಣೆ ಮಾಡುವ ಪಣವನ್ನು ನಾವೆಲ್ಲರೂ ಪಡಬೇಕು ಎನ್ನುವ ದೃಷ್ಠಿಯಿಂದ ಈ ಪಾದಯಾತ್ರೆಯನ್ನು ಮಾಡುವುದಕ್ಕೆ ದೇವರು ಅವಕಾಶ ಮಾಡಿ ಕೊಟ್ಟಿದ್ದಾರೆ ಎಂದು ಪಾದಯಾತ್ರೆಯ ಯಶಸ್ವಿಗೆ ಶುಭಹಾರೈಸಿದರು.

ಶ್ರೀ ಕ್ಷೇತ್ರ.ಧ.ಗ್ರಾ.ಯೋ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅನಿಲ್ ಕುಮಾರ್ ಎಸ್.ಎಸ್ ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ ಪಾದಯಾತ್ರೆಯು ಸಣ್ಣ ಚಿಂತನೆಯಿಂದ ದೊಡ್ಡ ಸಂಸ್ಕೃತಿಯಾಗಿ ಬೆಳೆದು ನಿಂತಿದೆ. ಉಜಿರೆಯ ಜನತೆಗೆ ಕ್ಷೇತ್ರದೊಂದಿಗೆ ಜೋಡಣೆ ಮಾಡುವ ಅವಕಾಶ ಪಾದಯಾತ್ರೆ ಮಾಡಿದೆ. ಪಾದಯಾತ್ರೆಯಲ್ಲಿ ಹಲವು ಭಜನಾ ತಂಡಗಳು ಭಾಗಿಯಾಗಳಿದ್ದು, ಶಿಸ್ತು ಹಾಗೂ ಸ್ವಚ್ಛತೆಗೆ ಆದ್ಯತೆಯನ್ನು ನೀಡಬೇಕು ಎಂದರು.

ಪಾದಯಾತ್ರೆಯ ಮಾರ್ಗದರ್ಶಕ ಪೂರನ್ ವರ್ಮ ಮಾತನಾಡಿ “ಭಕ್ತಿ ,ಶ್ರದ್ಧೆ ,ಗೌರವ, ಪ್ರೀತಿಯ ಹೆಜ್ಜೆಯೊಂದಿಗೆ ಆರಂಭವಾದ ಪಾದಯಾತ್ರೆ ಯಶಸ್ವಿಯಾಗಿ ನಡೆದಿದೆ. ಪಾದಯಾತ್ರೆಯಿಂದ ಶ್ರೀಕ್ಷೇತ್ರಕ್ಕೆ ಭಕ್ತರು ಇನ್ನಷ್ಟು ಹತ್ತಿರವಾಗಿದ್ದಾರೆ. ಈ ಬಾರಿಯ ಪಾದಯಾತ್ರೆಗೆ ಬಿಳಿಯ ವಸ್ತ್ರ ಧರಿಸಿ ಬಂದರೆ ಉತ್ತಮ. ಪಾದಯಾತ್ರೆಯು ದೇವರ ನಾಮಸ್ಮರಣೆಯೊಂದಿಗೆ ನಿಧಾನವಾಗಿ ಸಾಗಬೇಕು. ಈ ಸಂದರ್ಭ ಅಲ್ಲಲ್ಲಿ ನೀರು ಮತ್ತು ಬೆಲ್ಲದ ವ್ಯವಸ್ಥೆ ಇರಲಿದೆ” ಎಂದು ಹೇಳಿದರು.

ಯೋಜನೆಯ ಪ್ರಾದೇಶಿಕ ನಿರ್ದೇಶಕ ದುಗ್ಗೇಗೌಡ ಮಾತನಾಡಿದರು.

ಜನಜಾಗೃತಿ ವೇದಿಕೆ ಅಧ್ಯಕ್ಷ ಕಾಸಿಂ ಮಲ್ಲಿಗೆ ಮನೆ, ತಾಲೂಕು ಒಕ್ಕೂಟದ ಅಧ್ಯಕ್ಷ ಸೀತಾರಾಮ್ ಆರ್. ಬೆಳ್ತಂಗಡಿ, ಉಜಿರೆ ಎಸ್‌ ಡಿಎಂ ಕಾಲೇಜಿನ ಪ್ರಿನ್ಸಿಪಾಲ್ ಡಾ. ಬಿ.ಎ. ಕುಮಾರ್ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.

ಯೋಜನೆಯ ಕೃಷಿ ನಿರ್ದೇಶಕ ರಾಮ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್ ಸ್ವಾಗತಿಸಿದರು. ಯೋಜನಾಧಿಕಾರಿ ಸುರೇಂದ್ರ ವಂದಿಸಿದರು.

ಕಳೆದ ವರ್ಷದ ಪಾದಯಾತ್ರೆ ಆಯ-ವ್ಯಯ ಮಂಡಿಸಲಾಯಿತು. ಹಾಗೂ ಈ ಬಾರಿಯ ಪಾದಯಾತ್ರೆಯ ಆಹ್ವಾನ ಪತ್ರಿಕೆ ಬಿಡುಗಡೆಗೊಳಿಸಲಾಯಿತು.

ನ.26ರಂದು ಪಾದಯಾತ್ರೆ:- ಈ ಬಾರಿಯ ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ಪಾದಯಾತ್ರೆ ನ. 26ರಂದು ಮಧ್ಯಾಹ್ನ 3 ಗಂಟೆಗೆ ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದಿಂದ ಶ್ರೀ ಕ್ಷೇತ್ರ ಧರ್ಮಸ್ಥಳದವರೆಗೆ ನಡೆಯಲಿದೆ. ಇದು 12ನೇ ವರ್ಷದ ಪಾದಯಾತ್ರೆಯಾಗಿದ್ದು ಇದರಲ್ಲಿ ಗಣ್ಯರ ಸಹಿತ ಅನೇಕ ಭಜನಾ ತಂಡಗಳು, ಭಕ್ತ ಬಾಂಧವರು ಭಾಗವಹಿಸಲಿದ್ದಾರೆ. ಶಿಸ್ತು, ಸ್ವಚ್ಛತೆಗೆ ಆದ್ಯತೆ ನೀಡುವ ಈ ಪಾದಯಾತ್ರೆ ಲಕ್ಷದೀಪೋತ್ಸವದ ಪ್ರಾರಂಭದ ದಿನ ನಡೆಯುತ್ತಾ ಬಂದಿದೆ.

Related posts

ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಕೇಂದ್ರ ಕಮಿಟಿಯ ನೂತನ ಸಮಿತಿ ರಚನೆ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಬೆಳೆ ಸಮೀಕ್ಷೆ ಮಾಹಿತಿ ಕಾರ್ಯಾಗಾರ

Suddi Udaya

ಕೊಲ್ಲಿ: ರತನ್ ಶೆಟ್ಟಿಯವರ ಮನೆಯೊಳಗಿದ್ದ ಸೌಂಡ್ ಬಾಕ್ಸ್ ನಲ್ಲಿ ಅವಿತಿದ್ದ ಕಾಳಿಂಗ ಸರ್ಪ

Suddi Udaya

ವಿದ್ಯಾಮಾತಾದ ಮುಕುಟಕ್ಕೆ ಮತ್ತೊಂದು ಗರಿಮೆ: SSC-GD(ಸಶಸ್ತ್ರ ಪಡೆ) ಲಿಖಿತ ಪರೀಕ್ಷೆ ಉತ್ತೀರ್ಣಗೊಂಡ ಇಂಜಿನಿಯರಿಂಗ್ ವಿದ್ಯಾರ್ಥಿನಿ ಲಹರಿ ಕೆ.

Suddi Udaya

ಅಲ್ಯೂಮಿನಿಯಂ ಏಣಿ ವಿದ್ಯುತ್ ತಂತಿಗೆ ತಾಗಿ ವಿದ್ಯುತ್ ಶಾಕ್: ತೋಟದಲ್ಲಿ ಸೊಪ್ಪು ಕಡಿಯಲು ಹೋಗಿದ್ದ ಬಾಲಕೃಷ್ಣ ಶೆಟ್ಟಿ ಮೃತ್ಯು

Suddi Udaya

ಬಳಂಜ: ರಾಜ್ಯ ಮಡಿವಾಳರ ಸಂಘದ ವತಿಯಿಂದ ಸನ್ಮಾನ ಹಾಗೂ ವಿದ್ಯಾರ್ಥಿ ವೇತನ ವಿತರಣೆ

Suddi Udaya
error: Content is protected !!