24.6 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಐಟಿ ಪೆಸ್ಟ್ ನಲ್ಲಿ ಶ್ರೀ ಗುರುದೇವ ಕಾಲೇಜು ಸಮಗ್ರ ಚಾಂಪಿಯನ್

ಬೆಳ್ತಂಗಡಿ: ಮೂಡಬಿದ್ರೆಯ ಮಹಾವೀರ ಕಾಲೇಜಿನ ಇಂಟರ್ ಕಾಲೇಜ್ ಸೈನ್ಸ್ ಹಾಗೂ ಐಟಿ ಫೆಸ್ಟಿನಲ್ಲಿ ಮಾಜಿ ಶಾಸಕ ದಿ. ವಸಂತ ಬಂಗೇರರ ಸ್ಥಾಪಕತ್ವದ ಶ್ರೀ ಗುರುದೇವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಅನೇಕ ಬಹುಮಾನಗಳನ್ನು ಪಡೆಯುವುದರ ಜೊತೆಗೆ ಸಮಗ್ರ ಚಾಂಪಿಯನ್ ಶಿಪ್ ಗೆ ಭಾಜನರಾಗಿದ್ದಾರೆ.

ವರ್ಕಿಂಗ್ ಮಾಡೆಲ್ ನಲ್ಲಿ ಗಿರೀಶ ಪ್ರಥಮ ಸ್ಥಾನ, ಮೇಡ್ ಆಡ್ ನಲ್ಲಿ ದೀಪಕ್ ಮತ್ತು ತಂಡ ಪ್ರಥಮ, ರೀಲ್ ಮೇಕಿಂಗ್ ಕಾಂಪಿಟೇಶನ್ ನಲ್ಲಿ ವಿಷ್ಣು ಪ್ರಥಮ, ಕ್ವಿಜ್ ಕಾಂಪಿಟೇಶನ್ ನಲ್ಲಿ ಸಿದ್ದಾರ್ಥ ಹಾಗೂ ರಂಜಿತ್ ಪ್ರಥಮ, ಪೋಸ್ಟರ್ ಮೇಕಿಂಗ್ ಕಾಂಪಿಟೇಶನ್ ನಲ್ಲಿ ಶ್ರೀನಿತ್ಯಾ ದ್ವಿತೀಯ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

ಭಾಗವಹಿಸಿದ 7 ಸ್ಪರ್ಧೆಗಳಲ್ಲಿ 5 ರಲ್ಲಿ ಬಹುಮಾನಗಳಿಸಿ ಸಮಗ್ರ ಚಾಂಪಿಯನ್ ಆಗಿ ಗುರುದೇವ ಕಾಲೇಜ್ ಹೊರಹೊಮ್ಮಿದೆ. ವೇದಿಕೆಯಲ್ಲಿ ಗಣ್ಯರ ಸಮ್ಮುಖದಲ್ಲಿ ಕಾಲೇಜಿನ ಗಣಕವಿಜ್ಞಾನ ಉಪನ್ಯಾಸಕಿ ಶುಭಲಕ್ಷ್ಮೀ, ಜೀವಶಾಸ್ತ್ರ ಉಪನ್ಯಾಸಕಿ ಭಾಗ್ಯಶ್ರೀ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳ ಈ ಸಾಧನೆಯನ್ನು ಶ್ರೀ ಗುರುದೇವ ಕಾಲೇಜಿನ ಆಡಳಿತ ಸಮಿತಿ ಅಭಿನಂದಿಸಿದೆ.

Related posts

ಧರ್ಮಸ್ಥಳ: ದೊಂಡೋಲೆ ನಿವಾಸಿ ಪುಂಡಲೀಕ ಪ್ರಭು ನೇಣು ಬಿಗಿದುಕೊಂಡು ಆತ್ಮಹತ್ಯೆ

Suddi Udaya

ಗುರುವಾಯನಕೆರೆ ಶ್ರೀ ಕ್ಷೇತ್ರಮಂಚಕಲ್ಲಿನಲ್ಲಿ ದೈವಗಳಿಗೆ ಪರ್ವ ಸೇವೆ

Suddi Udaya

ರಾಜ್ಯಮಟ್ಟದ ಜನಪದ ಗೀತಗಾಯನದಲ್ಲಿ ವಾಣಿ ಕಾಲೇಜಿನ ರೇಂಜರ್ಸ್ ತಂಡ ಪ್ರಥಮ

Suddi Udaya

ತಾಲೂಕು ಮಟ್ಟದ ಬಾಲಕರ ಮತ್ತು ಬಾಲಕಿಯರ ಖೋ ಖೋ ಪಂದ್ಯಾಟ: ಬಂದಾರು ಪ್ರಾಥಮಿಕ ಶಾಲೆಗೆ ಪ್ರಶಸ್ತಿ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಉರೂಸ್ ಕಾರ್ಯಕ್ರಮದ ಉದ್ಘಾಟನೆ

Suddi Udaya

ಸೇವಾಭಾರತಿಯಿಂದ ಈ ವರ್ಷದ “ಸೇವಾ ಶ್ರೇಷ್ಠ -2024” ಪುರಸ್ಕಾರ:

Suddi Udaya
error: Content is protected !!