25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಐಟಿ ಪೆಸ್ಟ್ ನಲ್ಲಿ ಶ್ರೀ ಗುರುದೇವ ಕಾಲೇಜು ಸಮಗ್ರ ಚಾಂಪಿಯನ್

ಬೆಳ್ತಂಗಡಿ: ಮೂಡಬಿದ್ರೆಯ ಮಹಾವೀರ ಕಾಲೇಜಿನ ಇಂಟರ್ ಕಾಲೇಜ್ ಸೈನ್ಸ್ ಹಾಗೂ ಐಟಿ ಫೆಸ್ಟಿನಲ್ಲಿ ಮಾಜಿ ಶಾಸಕ ದಿ. ವಸಂತ ಬಂಗೇರರ ಸ್ಥಾಪಕತ್ವದ ಶ್ರೀ ಗುರುದೇವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಅನೇಕ ಬಹುಮಾನಗಳನ್ನು ಪಡೆಯುವುದರ ಜೊತೆಗೆ ಸಮಗ್ರ ಚಾಂಪಿಯನ್ ಶಿಪ್ ಗೆ ಭಾಜನರಾಗಿದ್ದಾರೆ.

ವರ್ಕಿಂಗ್ ಮಾಡೆಲ್ ನಲ್ಲಿ ಗಿರೀಶ ಪ್ರಥಮ ಸ್ಥಾನ, ಮೇಡ್ ಆಡ್ ನಲ್ಲಿ ದೀಪಕ್ ಮತ್ತು ತಂಡ ಪ್ರಥಮ, ರೀಲ್ ಮೇಕಿಂಗ್ ಕಾಂಪಿಟೇಶನ್ ನಲ್ಲಿ ವಿಷ್ಣು ಪ್ರಥಮ, ಕ್ವಿಜ್ ಕಾಂಪಿಟೇಶನ್ ನಲ್ಲಿ ಸಿದ್ದಾರ್ಥ ಹಾಗೂ ರಂಜಿತ್ ಪ್ರಥಮ, ಪೋಸ್ಟರ್ ಮೇಕಿಂಗ್ ಕಾಂಪಿಟೇಶನ್ ನಲ್ಲಿ ಶ್ರೀನಿತ್ಯಾ ದ್ವಿತೀಯ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

ಭಾಗವಹಿಸಿದ 7 ಸ್ಪರ್ಧೆಗಳಲ್ಲಿ 5 ರಲ್ಲಿ ಬಹುಮಾನಗಳಿಸಿ ಸಮಗ್ರ ಚಾಂಪಿಯನ್ ಆಗಿ ಗುರುದೇವ ಕಾಲೇಜ್ ಹೊರಹೊಮ್ಮಿದೆ. ವೇದಿಕೆಯಲ್ಲಿ ಗಣ್ಯರ ಸಮ್ಮುಖದಲ್ಲಿ ಕಾಲೇಜಿನ ಗಣಕವಿಜ್ಞಾನ ಉಪನ್ಯಾಸಕಿ ಶುಭಲಕ್ಷ್ಮೀ, ಜೀವಶಾಸ್ತ್ರ ಉಪನ್ಯಾಸಕಿ ಭಾಗ್ಯಶ್ರೀ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳ ಈ ಸಾಧನೆಯನ್ನು ಶ್ರೀ ಗುರುದೇವ ಕಾಲೇಜಿನ ಆಡಳಿತ ಸಮಿತಿ ಅಭಿನಂದಿಸಿದೆ.

Related posts

ಮಡಂತ್ಯಾರು: ಪೆದ್ಯಾರ್ ರಸ್ತೆಯಲ್ಲಿ ಗುಂಡಿ ಮುಚ್ಚುವ ಕಾರ್ಯ: ಸುದ್ದಿ ಉದಯ ಜನಧ್ವನಿ Effect

Suddi Udaya

ಸುಲ್ಕೇರಿ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ ಆರಂಭ: ತೋರಣ ಮುಹೂರ್ತ, ಧ್ವಜಾರೋಹಣ

Suddi Udaya

ತನ್ನ ತಾಯಿಯನ್ನು ಎತ್ತಿಕೊಂಡು ಬಂದು ಮತಚಲಾಯಿಸಿದ ಮಗ: ಅನಾರೋಗ್ಯದ ನಡುವೆಯೂ ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಿದ ರೋಹಿಣಿ

Suddi Udaya

ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಶನ್‌ಗೆ ರಾಜ್ಯಪಾಲರು ಅನುಮತಿ ಕೊಟ್ಟಿದ್ದನ್ನೇ ಅಪರಾಧ ಎಂದು ಬಿಂಬಿಸಿ: ಸರಕಾರವೇ ನೇತೃತ್ವ ವಹಿಸಿ ದಂಗೆ ಎಬ್ಬಿಸುವುದು ಸರಿಯೇ ಪತ್ರಿಕಾ ಗೋಷ್ಠಿಯಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಪ್ರಶ್ನೆ

Suddi Udaya

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಡಾ. ಡಿ. ಹೆಗ್ಗಡೆಯವರಿಂದ ರೂ.25 ಲಕ್ಷ ಅನುದಾನ

Suddi Udaya
error: Content is protected !!