25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗುರುವಾಯನಕೆರೆ: ಎಕ್ಸೆಲ್ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಂದ ಶುಚಿತ್ವ ಅಭಿಯಾನ

ಗುರುವಾಯನಕೆರೆ: ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಹಾಯಕದೊಂದಿಗೆ ಹಾಗೂ ಬೆಳ್ತಂಗಡಿ ತಾಲೂಕಿನ ಮಾಜಿ ಸೈನಿಕರ ಸಂಘದ ಆಶ್ರಯದಲ್ಲಿ ಸ್ವಚ್ಛತಾ ಅಭಿಯಾನವು ನಡೆಯಿತು.

ಬೆಳ್ತಂಗಡಿ ಮುಖ್ಯ ಪೇಟೆಯ ರಾಜಮಾರ್ಗದ ಎರಡು ಇಕ್ಕೆಲಗಳಲ್ಲಿ ಸೈನಿಕರೊಡಗೂಡಿ ಎಕ್ಸೆಲ್ ವಿದ್ಯಾರ್ಥಿಗಳು ಸ್ವಚ್ಛತಾ ಕಾರ್ಯವನ್ನು ಆರಂಭಿಸಿದರು. ಇದೊಂದು ಕೇವಲ ಅಭಿಯಾನ ಮಾತ್ರವಲ್ಲದೆ ಜಾಗೃತಿ ಕಾರ್ಯಕ್ರಮವೂ ಆಗಿತ್ತು. ಅಯ್ಯಪ್ಪ ಭಜನಾ ಮಂದಿರದ ಎದುರುಗಡೆಯಿಂದ ಮೊದಲುಗೊಂಡು ತಾಲೂಕು ಆಸ್ಪತ್ರೆಯ ತನಕ ಸ್ವಚ್ಛತೆಯನ್ನು ನಡೆಸಿದರು. ಬಿರು ಬಿಸಿಲಿನಲ್ಲಿಯೂ ಎಕ್ಸೆಲ್ ವಿದ್ಯಾರ್ಥಿಗಳಲ್ಲಿನ ಸಾಮಾಜಿಕ ಕಾಳಜಿಯನ್ನು ಹಾಗೂ ಅಭಿಯಾನದಲ್ಲಿನ ಉತ್ಸಾಹದಾಯಕ ಪಾಲ್ಗೊಳ್ಳುವಿಕೆಯನ್ನು ಕಂಡು ಸಾರ್ವಜನಿಕರಿಂದ ಹೆಚ್ಚಿನ ಪ್ರಶಂಸೆಗೆ ಪಾತ್ರರಾದರು.

ಮಾಜಿ ಸೈನಿಕರು ಮಕ್ಕಳಿಗೆ ತಂಪು ಪಾನೀಯ ಮತ್ತು ಹಣ್ಣು ಹಂಪಲುಗಳನ್ನು ನೀಡಿದರು. ಬೆಳ್ತಂಗಡಿಯ ಪಟ್ಟಣ ಪಂಚಾಯತ್ ವತಿಯಿಂದ ಕಸ ವಿಲೇವಾರಿಗಾಗಿ ತ್ಯಾಜ್ಯ ಸಂಗ್ರಹ ವಾಹನದ ವ್ಯವಸ್ಥೆಯನ್ನು ಮಾಡಲಾಗಿತ್ತು.

Related posts

ಬೆಳ್ತಂಗಡಿ ಮತ್ತು ಗುರುವಾಯನಕೆರೆ ವಿಪತ್ತು ನಿರ್ವಹಣಾ ಸಮಿತಿಯ ವಾರ್ಷಿಕ ವಿಶೇಷ ಸಭೆ

Suddi Udaya

ರಾಜ್ಯ ಮಟ್ಟದ ಮಹಿಳೆಯರ ನೆಟ್ ಬಾಲ್ ಪಂದ್ಯಾಟ : ಎಸ್.ಡಿ.ಎಂ ತಂಡ ಪ್ರಥಮ

Suddi Udaya

ಬಳಂಜ ಶ್ರೀ ಗಣೇಶೋತ್ಸವ ಪೂರ್ವಭಾವಿ ಸಭೆ, ವಿವಿಧ ಸಮಿತಿಗಳ‌ ರಚನೆ

Suddi Udaya

ಗುರುವಾಯನಕೆರೆ: ಉಚಿತ ನೇತ್ರಾ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ

Suddi Udaya

ಕಜಕೆ ಶಾಲೆಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಕಲ್ಲೇರಿ: ನಿಸರ್ಗ ರಿಕ್ಷಾ ಚಾಲಕ – ಮಾಲಕರ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!