July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗುರುವಾಯನಕೆರೆ: ಎಕ್ಸೆಲ್ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಂದ ಶುಚಿತ್ವ ಅಭಿಯಾನ

ಗುರುವಾಯನಕೆರೆ: ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಹಾಯಕದೊಂದಿಗೆ ಹಾಗೂ ಬೆಳ್ತಂಗಡಿ ತಾಲೂಕಿನ ಮಾಜಿ ಸೈನಿಕರ ಸಂಘದ ಆಶ್ರಯದಲ್ಲಿ ಸ್ವಚ್ಛತಾ ಅಭಿಯಾನವು ನಡೆಯಿತು.

ಬೆಳ್ತಂಗಡಿ ಮುಖ್ಯ ಪೇಟೆಯ ರಾಜಮಾರ್ಗದ ಎರಡು ಇಕ್ಕೆಲಗಳಲ್ಲಿ ಸೈನಿಕರೊಡಗೂಡಿ ಎಕ್ಸೆಲ್ ವಿದ್ಯಾರ್ಥಿಗಳು ಸ್ವಚ್ಛತಾ ಕಾರ್ಯವನ್ನು ಆರಂಭಿಸಿದರು. ಇದೊಂದು ಕೇವಲ ಅಭಿಯಾನ ಮಾತ್ರವಲ್ಲದೆ ಜಾಗೃತಿ ಕಾರ್ಯಕ್ರಮವೂ ಆಗಿತ್ತು. ಅಯ್ಯಪ್ಪ ಭಜನಾ ಮಂದಿರದ ಎದುರುಗಡೆಯಿಂದ ಮೊದಲುಗೊಂಡು ತಾಲೂಕು ಆಸ್ಪತ್ರೆಯ ತನಕ ಸ್ವಚ್ಛತೆಯನ್ನು ನಡೆಸಿದರು. ಬಿರು ಬಿಸಿಲಿನಲ್ಲಿಯೂ ಎಕ್ಸೆಲ್ ವಿದ್ಯಾರ್ಥಿಗಳಲ್ಲಿನ ಸಾಮಾಜಿಕ ಕಾಳಜಿಯನ್ನು ಹಾಗೂ ಅಭಿಯಾನದಲ್ಲಿನ ಉತ್ಸಾಹದಾಯಕ ಪಾಲ್ಗೊಳ್ಳುವಿಕೆಯನ್ನು ಕಂಡು ಸಾರ್ವಜನಿಕರಿಂದ ಹೆಚ್ಚಿನ ಪ್ರಶಂಸೆಗೆ ಪಾತ್ರರಾದರು.

ಮಾಜಿ ಸೈನಿಕರು ಮಕ್ಕಳಿಗೆ ತಂಪು ಪಾನೀಯ ಮತ್ತು ಹಣ್ಣು ಹಂಪಲುಗಳನ್ನು ನೀಡಿದರು. ಬೆಳ್ತಂಗಡಿಯ ಪಟ್ಟಣ ಪಂಚಾಯತ್ ವತಿಯಿಂದ ಕಸ ವಿಲೇವಾರಿಗಾಗಿ ತ್ಯಾಜ್ಯ ಸಂಗ್ರಹ ವಾಹನದ ವ್ಯವಸ್ಥೆಯನ್ನು ಮಾಡಲಾಗಿತ್ತು.

Related posts

ಬೆಳಾಲು ಪ್ರೌಢಶಾಲೆಯಲ್ಲಿ ಮತದಾನದ ಜಾಗೃತಿ

Suddi Udaya

ನಡ ಸರಕಾರಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಕೋಲ್ಕತ್ತಾದಲ್ಲಿ ಮೆಡಿಕಲ್ ವಿದ್ಯಾರ್ಥಿನಿಯ ಹತ್ಯೆ ಖಂಡಿಸಿ ಉಜಿರೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಮೌನ ಆಚರಣೆ ಹಾಗೂ ಶ್ರದ್ಧಾಂಜಲಿ ಸಭೆ

Suddi Udaya

ಬೆಳ್ತಂಗಡಿ ಅತಿಥಿ ಶಿಕ್ಷಕರ ವಿವಿಧ ಬೇಡಿಕೆಗಳು ಹಾಗೂ ಸಮಸ್ಯೆಗಳನ್ನು ಈಡೇರಿಸುವಂತೆ ತಹಶೀಲ್ದಾರರ ಮುಖಾಂತರ ಮುಖ್ಯಮಂತ್ರಿ ಮತ್ತು ಶಿಕ್ಷಣ ಸಚಿವರಿಗೆ ಮನವಿ

Suddi Udaya

ಕೊಕ್ಕಡ: ಕೆಲವೇ ಗಂಟೆಗಳ ಅಂತರದಲ್ಲಿ ಸಂಬಂಧಿಕರಿಬ್ಬರು ನಿಧನ

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನ ಸಮಾಜ ಕಾರ್ಯ ವಿಭಾಗ ಹಾಗೂ ಸುಲ್ಕೇರಿ ಒಕ್ಕೂಟದ ಸಹಯೋಗದಿಂದ ಜಲಸಂರಕ್ಷಣೆಯ ಅರಿವು ಕಾರ್ಯಕ್ರಮ

Suddi Udaya
error: Content is protected !!