25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳಾಲು ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಕೆಸರುಗದ್ದೆ ಕ್ರೀಡಾಕೂಟ

ಬೆಳಾಲು : ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ಬೆಳಾಲು ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ 14 ನೇ ವರ್ಷದ ಕೆಸರುಗದ್ದೆ ಕ್ರೀಡಾಕೂಟವು ನ.10 ರಂದು ಅನಂತೋಡಿಯ ಗದ್ದೆಯಲ್ಲಿ ಜರಗಿತು.

ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿ ಭಜನೆಯ ಮೆರವಣಿಗೆಯ ಮೂಲಕ ಸಾಗಿ ವೇದಿಕೆಯಲ್ಲಿ ದೀಪ ಪ್ರಜ್ವಲನೆ ಮೂಲಕ ಶ್ರೀ ಅನಂತಪದ್ಮನಾಭ ದೇವಸ್ಥಾನ ಅನಂತೋಡಿ ಇದರ ದೇವಳದ ಅರ್ಚಕರಾದ ಸಂಪತ್ ಕುಮಾರ್ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.

ವೇದಿಕೆಯಲ್ಲಿ ಅನಂತೇಶ್ವರ ಫ್ರೆಂಡ್ಸ್ ಇದರ ಗೌರವಾಧ್ಯಕ್ಷ ಸುಮಿತ್ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಲಿಂಗಪ್ಪ ಪೂಜಾರಿ ಮಾಗಣೆಗುತ್ತು ಬನಂದೂರು, ಹೇಮಾ ಮೋಹನ್ ಅನರ್ಘ್ಯ ವಚ್ಛ, ಸುಂದರ ನೀರಕಟ್ಟೆ, ಶ್ರೀ ಅನಂತಪದ್ಮನಾಭ ದೇವಸ್ಥಾನ ಅನಂತೋಡಿ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಶ್ರೀನಿವಾಸ್ ಗೌಡ , ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ , ಬೆಳಾಲು ಅನಂತೇಶ್ವರ ಫ್ರೆಂಡ್ಸ್ ಅಧ್ಯಕ್ಷ ವಿಶ್ವನಾಥ ಪೂಜಾರಿ ಬಾಯ್ತರಡ್ದ, ಕಾರ್ಯದರ್ಶಿ ಪದ್ಮನಾಭ ಅನಂತೋಡಿ, ವಿಘ್ನೇಶ್ ಅನಂತೋಡಿ ಉಪಸ್ಥಿತರಿದ್ದರು.

ಕಿರಣ್ ಸುವರ್ಣ ಸ್ವಾಗತಿಸಿ, ನವನೀತ್ ಏರ್ದೊಟ್ಟು ಧನ್ಯವಾದವಿತ್ತರು, ಗಿರೀಶ್ ಮಂಜೊತ್ತು ಇವರು ಕಾರ್ಯಕ್ರಮ ನಿರೂಪಿಸಿದರು.

Related posts

ಗಾಯತ್ರಿ ಮಂತ್ರವೇ ಸರ್ವಶ್ರೇಷ್ಠ

Suddi Udaya

ಚಾರ್ಮಾಡಿಯಲ್ಲಿ ಕಾಡಾನೆ ಹಾವಳಿ

Suddi Udaya

ಸಮಾಜ ಕಾರ್ಯ ವಿಭಾಗದಿಂದ ಆರ್ಥಿಕ ಶಿಸ್ತು ಕುರಿತು ಸಂವಾದ ಕಾರ್ಯಕ್ರಮ

Suddi Udaya

ಕುಂದಾಪುರ ಜೆಸಿಯ ಆತಿಥ್ಯದಲ್ಲಿ ನಡೆದ ಲಾಟ್ಸ್ ನಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ಪ್ರಶಸ್ತಿ

Suddi Udaya

ಎಸ್‌.ಡಿ.ಎಂ ಕಾಲೇಜು : ‘ ಕೆಮ್ಸಿನ್–2026’ ರಾಷ್ಟ್ರ ಮಟ್ಟದ ವಿಚಾರ ಸಂಕಿರಣ ಮಾಹಿತಿ ಕೈಪಿಡಿ ಬಿಡುಗಡೆ:

Suddi Udaya

ಮಚ್ಚಿನ ಗ್ರಾ.ಪಂ. ನಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ರಕ್ತದಾನ ಶಿಬಿರ

Suddi Udaya
error: Content is protected !!