25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜಿಲ್ಲಾ ಮಹಿಳಾ ಮೋರ್ಚಾದ ತಂಡವು ಬೆಳ್ತಂಗಡಿ ಬಿಜೆಪಿ ಕಚೇರಿಗೆ ಭೇಟಿ

ಬೆಳ್ತಂಗಡಿ: ಮಂಡಲಗಳ ಪ್ರವಾಸ ನಿಮಿತ್ತ ಜಿಲ್ಲಾ ಮಹಿಳಾ ಮೋರ್ಚಾದ ತಂಡವು ನ.11 ರಂದು ಬೆಳ್ತಂಗಡಿ ಮಂಡಲದ ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾ ಭೇಟಿಯನ್ನು ಬಿಜೆಪಿ ಕಚೇರಿಯಲ್ಲಿ ಹಮ್ಮಿಕೊಳ್ಳಲಾಯಿತು.

ಜಿಲ್ಲಾ ಮಹಿಳಾಮೋರ್ಚಾದ ಅಧ್ಯಕ್ಷೆ ಶ್ರೀಮತಿ ಮಂಜುಳಾ ರಾವ್, ಪ್ರಧಾನ ಕಾರ್ಯದರ್ಶಿ ಶ್ರೀಮತಿ ಲಿಖಿತಾ ಶೆಟ್ಟಿ , ಜಿಲ್ಲಾ ಮಹಿಳಾ ಮೋರ್ಚಾದ ಉಪಾಧ್ಯಕ್ಷೆ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾ ಪ್ರಭಾರಿ ಶ್ರೀಮತಿ ಬಬಿತ, ಜಿಲ್ಲಾ ಮಹಿಳಾ ಮೋರ್ಚಾ ಕಾರ್ಯದರ್ಶಿ ಯಶಸ್ವಿನಿ ಮತ್ತು ಶ್ರೀಮತಿ ಅಮಿತಾ ಉಪಸ್ಥಿತರಿದ್ದರು.

ಸಭೆಯಲ್ಲಿ ಮಾತನಾಡಿದ ಮಂಜುಳಾ ರಾವ್ ರವರು ಬೆಳ್ತಂಗಡಿ ಮಹಿಳಾ ಮೋರ್ಚಾದ ಕಾರ್ಯವೈಖರಿಯನ್ನು ಶ್ಲಾಘಿಸಿದರು. ಎಲ್ಲಾ ಪದಾಧಿಕಾರಿಗಳು ಸಕ್ರಿಯ ಸದಸ್ಯರಾಗಲೇಬೇಕು. ಈ ನಿಟ್ಟಿನಲ್ಲಿ ಜಾಗೃತರಾಗಿ ಮಹಿಳಾ ಸದಸ್ಯರು ಇನ್ನುಳಿದ ಎರಡು ದಿನಗಳನ್ನು ಸರಿಯಾಗಿ ಉಪಯೋಗಿಸಿಕೊಂಡು ಕೆಲಸ ಮಾಡಿ ಎಂದರು.

ಮಂಡಲ ಮೋರ್ಚಾ ಅಧ್ಯಕ್ಷೆ ಶ್ರೀಮತಿ ವಿದ್ಯಾ ಶ್ರೀನಿವಾಸರವರು ಮಾತನಾಡಿ ಎಲ್ಲಾ ಸದಸ್ಯರು ಸದಸ್ಯತ್ವ ಕಾರ್ಯದಲ್ಲಿ ತೊಡಗಿಸಿಕೊಂಡು ಯಾವುದೇ ಜವಾಬ್ದಾರಿಯನ್ನು ಒಗ್ಗಟ್ಟಿನಿಂದ ನಿರ್ವಹಿಸುವ ಎಂದು ಹೇಳಿದರು. ಬೆಳ್ತಂಗಡಿ ಮಹಿಳಾ ಮೋರ್ಚಾದ ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿದರು.

ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶ್ರೀಮತಿ ತುಳಸಿ ಸ್ವಾಗತಿಸಿ, ಶ್ರೀಮತಿ ಪೂರ್ಣಿಮಾ ಜಯಂತ್ ಧನ್ಯವಾದ ಸಮರ್ಪಿಸಿದರು.

Related posts

ದ.ಕ. ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನ: ಶಿಬಾಜೆಯ ಸಂಪ್ರೀತಾ ಎಸ್. ಶೆಟ್ಟಿಗಾರ್‌ ರವರ “ಅಂತರಾಳದ ಧ್ವನಿ” ಕವನ ಸಂಕಲನ ಬಿಡುಗಡೆ

Suddi Udaya

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಅರ್ಚಕ ಚಂದ್ರಶೇಖರ್ ಭಟ್ ನಿಧನ

Suddi Udaya

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎಕ್ಸಲೆ೦ಟ್ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿರಶ್ಮಿತಾ ಜೈನ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಉಜಿರೆ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಕೆಸರ್ದ ಕಂಡೊಂಡು ಕುಸಲ್ದ ಗೊಬ್ಬುಲು ಕಾರ್ಯಕ್ರಮದ ಉದ್ಘಾಟನೆ

Suddi Udaya

ಗುರುವಾಯನಕೆರೆ: ಎಕ್ಸೆಲ್ ಕಾಲೇಜಿನಲ್ಲಿ ಅಕ್ಷರೋತ್ಸವ

Suddi Udaya

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಸಂಸ್ಕೃತೋತ್ಸವ ಕಾರ್ಯಕ್ರಮ

Suddi Udaya
error: Content is protected !!