28 C
ಪುತ್ತೂರು, ಬೆಳ್ತಂಗಡಿ
August 5, 2026
Uncategorized

ಸಂಡೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಚಾರ

ಸಂಡೂರು : ಸಂಡೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಚಾರದಲ್ಲಿ ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಮಾತನಾಡಿ
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬಿಜೆಪಿ ರಾಜ್ಯಧ್ಯಕ್ಷ ಬಿ.ವೈ ವಿಜಯೇಂದ್ರ ಅವರನ್ನು ಅಂಬೆಗಾಲಿಡುವ ಕೂಸು ಎನ್ನುವ ಹೇಳಿಕೆಗೆ ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಶ್ರೀ ಕೃಷ್ಣ ಪರಮಾತ್ಮ ಅಂಬೆಗಾಲಿಡುವಾಗಲೇ ಅಸುರೀ ಶಕ್ತಿಗಳನ್ನು ನಾಶ ಪಡಿಸಿರುವುದು ಎಂದು ತಿರುಗೇಟು ನೀಡಿದ್ದಾರೆ.

ಹಗರಣ, ಮತಾಂಧ ಶಕ್ತಿಗಳ ಓಲೈಕೆಯ ಮೂಲಕ ರಾಜ್ಯದ ಜನತೆಯ ರಕ್ತ ಹೀರುತ್ತಿರುವ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರಕಾರದ ರಾಕ್ಷಸಿ ಮನೋಭಾವವನ್ನು ನಿಯಂತ್ರಿಸಲು ಶ್ರೀ ಕೃಷ್ಣನ ಚಿಂತನೆಗಳ ಅಗತ್ಯವಿದೆ. ಬಿಜೆಪಿ ರಾಜ್ಯಾದ್ಯಕ್ಷರನ್ನು ಅಂಬೆಗಾಲಿಡುವ ಕೂಸು ಎಂದಿರುವ ಸಿದ್ಧರಾಮಯ್ಯ ಅವರು ಶ್ರೀ ಕೃಷ್ಣನ ಬಾಲ್ಯದಲ್ಲಿ ಪೂತನಿ, ಶಕಟಾಸುರ,ತೃಣಾವರ್ತರಂತಹ ಅಸುರೀ ಶಕ್ತಿಗಳನ್ನು ಅಂಬೆಗಾಲಿಡುತ್ತಲೇ ಧಮನಿಸಿರುವುದು ಎನ್ನುವುದನ್ನು ಮರಿಯಬಾರದು‌. ರಾಜ್ಯದಲ್ಲಿ ಕಾಂಗ್ರೆಸ್ ನಡೆಸುವ ದುಷ್ಕೃತ್ಯಗಳನ್ನು ನಿಯಂತ್ರಿಸಲು ಅಂಬೆಗಾಡುವ ಬಿಜೆಪಿ ರಾಜ್ಯಾದ್ಯಕ್ಷ ಬಿ.ವೈ ವಿಜಯೇಂದ್ರ ಸೂಕ್ತ ವ್ಯಕ್ತಿ ಎಂದು ಹೇಳಿದ್ದಾರೆ.

ಮತಾಂಧರ ಮತ ಬ್ಯಾಂಕ್ ರಾಜಕೀಯಕ್ಕೆ ಹಿಂದೂ ಸಮಾಜದ ಮೇಲೆ ರಾಕ್ಷಸರಂತೆ ಎರಗುವ ಕಾಂಗ್ರೆಸಿನ ವಿರುದ್ಧ ಇಡೀ ಸಮಾಜ ಒಗ್ಗಟ್ಟಿನಿಂದ ನಿಲ್ಲಲಿದೆ.ಹಿಂದೂ ಸಮಾಜದ ಭೂಮಿಯನ್ನು ವಕ್ಫ್ ಬೋರ್ಡಿಗೆ ಹಂಚುತ್ತಿರುವ ಸರಕಾರದ ಅವನತಿಗೆ ಬಿಜೆಪಿ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ನಾವೆಲ್ಲರೂ ಯಾವುದೇ ರೀತಿಯ ಹೋರಾಟಕ್ಕೂ ಸಿದ್ಧ ಎಂದು ಗುಡುಗಿದ್ದಾರೆ.

Related posts

ಬಳಂಜ: ರಾಜ್ಯ ಮಡಿವಾಳರ ಸಂಘದ ವತಿಯಿಂದ ಸನ್ಮಾನ ಹಾಗೂ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಹಲವರನ್ನು ಗಡಿಪಾರು ಮಾಡಲು ಪೊಲೀಸ್‌ ಇಲಾಖೆ ಸಿದ್ದತೆ

Suddi Udaya

ಕನ್ನಡ ಸೇನೆ- ಕರ್ನಾಟಕ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಬೆಳ್ತಂಗಡಿ ತಾಲೂಕು ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಬೆಳ್ತಂಗಡಿ: ದೀಪಾವಳಿ ಹಬ್ಬದ ಪ್ರಯುಕ್ತ ಪ್ರಕಾಶ್ ಎಲೆಕ್ಟ್ರಾನಿಕ್ಸ್ ನಲ್ಲಿ ವಿಶೇಷ ಆಫರ್ ಹಾಗೂ ಆಕರ್ಷಕ ಉಡುಗೊರೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌ ತಾಲೂಕು ಮಟ್ಟದ ಸಭೆ

Suddi Udaya

ಎಸ್‌ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!