24.7 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಐಟಿ ಪೆಸ್ಟ್ ನಲ್ಲಿ ಶ್ರೀ ಗುರುದೇವ ಕಾಲೇಜು ಸಮಗ್ರ ಚಾಂಪಿಯನ್

ಬೆಳ್ತಂಗಡಿ: ಮೂಡಬಿದ್ರೆಯ ಮಹಾವೀರ ಕಾಲೇಜಿನ ಇಂಟರ್ ಕಾಲೇಜ್ ಸೈನ್ಸ್ ಹಾಗೂ ಐಟಿ ಫೆಸ್ಟಿನಲ್ಲಿ ಮಾಜಿ ಶಾಸಕ ದಿ. ವಸಂತ ಬಂಗೇರರ ಸ್ಥಾಪಕತ್ವದ ಶ್ರೀ ಗುರುದೇವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಅನೇಕ ಬಹುಮಾನಗಳನ್ನು ಪಡೆಯುವುದರ ಜೊತೆಗೆ ಸಮಗ್ರ ಚಾಂಪಿಯನ್ ಶಿಪ್ ಗೆ ಭಾಜನರಾಗಿದ್ದಾರೆ.

ವರ್ಕಿಂಗ್ ಮಾಡೆಲ್ ನಲ್ಲಿ ಗಿರೀಶ ಪ್ರಥಮ ಸ್ಥಾನ, ಮೇಡ್ ಆಡ್ ನಲ್ಲಿ ದೀಪಕ್ ಮತ್ತು ತಂಡ ಪ್ರಥಮ, ರೀಲ್ ಮೇಕಿಂಗ್ ಕಾಂಪಿಟೇಶನ್ ನಲ್ಲಿ ವಿಷ್ಣು ಪ್ರಥಮ, ಕ್ವಿಜ್ ಕಾಂಪಿಟೇಶನ್ ನಲ್ಲಿ ಸಿದ್ದಾರ್ಥ ಹಾಗೂ ರಂಜಿತ್ ಪ್ರಥಮ, ಪೋಸ್ಟರ್ ಮೇಕಿಂಗ್ ಕಾಂಪಿಟೇಶನ್ ನಲ್ಲಿ ಶ್ರೀನಿತ್ಯಾ ದ್ವಿತೀಯ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

ಭಾಗವಹಿಸಿದ 7 ಸ್ಪರ್ಧೆಗಳಲ್ಲಿ 5 ರಲ್ಲಿ ಬಹುಮಾನಗಳಿಸಿ ಸಮಗ್ರ ಚಾಂಪಿಯನ್ ಆಗಿ ಗುರುದೇವ ಕಾಲೇಜ್ ಹೊರಹೊಮ್ಮಿದೆ. ವೇದಿಕೆಯಲ್ಲಿ ಗಣ್ಯರ ಸಮ್ಮುಖದಲ್ಲಿ ಕಾಲೇಜಿನ ಗಣಕವಿಜ್ಞಾನ ಉಪನ್ಯಾಸಕಿ ಶುಭಲಕ್ಷ್ಮೀ, ಜೀವಶಾಸ್ತ್ರ ಉಪನ್ಯಾಸಕಿ ಭಾಗ್ಯಶ್ರೀ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳ ಈ ಸಾಧನೆಯನ್ನು ಶ್ರೀ ಗುರುದೇವ ಕಾಲೇಜಿನ ಆಡಳಿತ ಸಮಿತಿ ಅಭಿನಂದಿಸಿದೆ.

Related posts

ಸವಣಾಲು ಅ. ಹಿ.ಪ್ರಾ. ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಸಮಾಗಮ ಮತ್ತು ಪ್ರತಿಭಾ ಪುರಸ್ಕಾರ

Suddi Udaya

ಬೆಳ್ತಂಗಡಿ ಎಸ್‌ಡಿಎಂ ಆಂ.ಮಾ. ಶಾಲಾ ವಿದ್ಯಾರ್ಥಿಗಳಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಪ್ರಶಸ್ತಿ

Suddi Udaya

ನೈನಾಡು ಗೆಳೆಯರ ಬಳಗ ಸೇವಾ ಸಂಸ್ಥೆ ವತಿಯಿಂದ ಪುಸ್ತಕ ವಿತರಣೆ, ಅನಾರೋಗ್ಯ ಪೀಡಿತರಿಗೆ ಸಹಾಯಧನ ಹಾಗೂ ಉನ್ನತ ಶಿಕ್ಷಣಕ್ಕೆ ಸಹಾಯಧನ ವಿತರಣೆ

Suddi Udaya

ಭಕ್ತರ ಭಕುತಿಯ ಭಾವದಲ್ಲಿ ಮುಂಡೂರು ಶ್ರೀ ದುರ್ಗಾಪರಮೇಶ್ವರೀ ದೇಗುಲದ ಜಾತ್ರೋತ್ಸವ ಸಂಪನ್ನ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ಕೊಯ್ಯೂರು, ಕಳಿಯ, ನ್ಯಾಯತರ್ಪು, ಮತ್ತು ನಾಳ ಭಕ್ತಾದಿಗಳಿಂದ ಹಸಿರು ವಾಣಿ ಸಮರ್ಪಣೆ

Suddi Udaya

ಬೆಳ್ತಂಗಡಿ : ಚೆಕ್ ಬೌನ್ಸ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಹಾಸನದಲ್ಲಿ ಬಂಧಿಸಿದ ವೇಣೂರು ಪೊಲೀಸರು

Suddi Udaya
error: Content is protected !!