38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗುರುವಾಯನಕೆರೆ: ಎಕ್ಸೆಲ್ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಂದ ಶುಚಿತ್ವ ಅಭಿಯಾನ

ಗುರುವಾಯನಕೆರೆ: ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಹಾಯಕದೊಂದಿಗೆ ಹಾಗೂ ಬೆಳ್ತಂಗಡಿ ತಾಲೂಕಿನ ಮಾಜಿ ಸೈನಿಕರ ಸಂಘದ ಆಶ್ರಯದಲ್ಲಿ ಸ್ವಚ್ಛತಾ ಅಭಿಯಾನವು ನಡೆಯಿತು.

ಬೆಳ್ತಂಗಡಿ ಮುಖ್ಯ ಪೇಟೆಯ ರಾಜಮಾರ್ಗದ ಎರಡು ಇಕ್ಕೆಲಗಳಲ್ಲಿ ಸೈನಿಕರೊಡಗೂಡಿ ಎಕ್ಸೆಲ್ ವಿದ್ಯಾರ್ಥಿಗಳು ಸ್ವಚ್ಛತಾ ಕಾರ್ಯವನ್ನು ಆರಂಭಿಸಿದರು. ಇದೊಂದು ಕೇವಲ ಅಭಿಯಾನ ಮಾತ್ರವಲ್ಲದೆ ಜಾಗೃತಿ ಕಾರ್ಯಕ್ರಮವೂ ಆಗಿತ್ತು. ಅಯ್ಯಪ್ಪ ಭಜನಾ ಮಂದಿರದ ಎದುರುಗಡೆಯಿಂದ ಮೊದಲುಗೊಂಡು ತಾಲೂಕು ಆಸ್ಪತ್ರೆಯ ತನಕ ಸ್ವಚ್ಛತೆಯನ್ನು ನಡೆಸಿದರು. ಬಿರು ಬಿಸಿಲಿನಲ್ಲಿಯೂ ಎಕ್ಸೆಲ್ ವಿದ್ಯಾರ್ಥಿಗಳಲ್ಲಿನ ಸಾಮಾಜಿಕ ಕಾಳಜಿಯನ್ನು ಹಾಗೂ ಅಭಿಯಾನದಲ್ಲಿನ ಉತ್ಸಾಹದಾಯಕ ಪಾಲ್ಗೊಳ್ಳುವಿಕೆಯನ್ನು ಕಂಡು ಸಾರ್ವಜನಿಕರಿಂದ ಹೆಚ್ಚಿನ ಪ್ರಶಂಸೆಗೆ ಪಾತ್ರರಾದರು.

ಮಾಜಿ ಸೈನಿಕರು ಮಕ್ಕಳಿಗೆ ತಂಪು ಪಾನೀಯ ಮತ್ತು ಹಣ್ಣು ಹಂಪಲುಗಳನ್ನು ನೀಡಿದರು. ಬೆಳ್ತಂಗಡಿಯ ಪಟ್ಟಣ ಪಂಚಾಯತ್ ವತಿಯಿಂದ ಕಸ ವಿಲೇವಾರಿಗಾಗಿ ತ್ಯಾಜ್ಯ ಸಂಗ್ರಹ ವಾಹನದ ವ್ಯವಸ್ಥೆಯನ್ನು ಮಾಡಲಾಗಿತ್ತು.

Related posts

ತೆಲಂಗಾಣ ಚುನಾವಣಾ ವಾರ್ ರೂಮ್ ಸಂಯೋಜಕರಾಗಿ ರಕ್ಷಿತ್ ಶಿವರಾಂ ನೇಮಕ

Suddi Udaya

ಪುಂಜಾಲಕಟ್ಟೆ: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಭಾರತೀಯ ಯುವ ರೆಡ್ ಕ್ರಾಸ್ ಮತ್ತು ರೋವರ್ಸ್ ರೇಂಜರ್ಸ್ ಸಹಯೋಗದಿಂದ “70ನೇ ಅಖಿಲ ಭಾರತ ಸಹಕಾರ ಸಪ್ತಾಹ 2023” ಕಾರ್ಯಕ್ರಮ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಉಜಿರೆ ವಲಯ ಹಾಗೂ ಕೇಸರಿ ಗೆಳೆಯರ ಬಳಗ ಕುಂಜರ್ಪಇದರ ಆಶ್ರಯದಲ್ಲಿ ನಡೆಯುವ ” ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು” ಸೌಜನ್ಯ ಟ್ರೋಫಿ -2024 ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಜನಮಂಗಲ ಕಾರ್ಯಕ್ರಮದಡಿಯಲ್ಲಿ ವಿಲ್ ಚೇರ್ ವಿತರಣೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯ

Suddi Udaya

ಕೃಷಿ ಜಾಗದ ನೋಂದಣಿಯಲ್ಲಿ ಉಂಟಾಗಿರುವ ಸಮಸ್ಯೆಯ ಕುರಿತು ಮುಲ್ಲೈ ಮುಹಿಲನ್ ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ: ಶೀಘ್ರ ಪರಿಹರಿಸುವಂತೆ ಮನವಿ

Suddi Udaya
error: Content is protected !!