25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗುರುವಾಯನಕೆರೆ: ಎಕ್ಸೆಲ್ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಂದ ಶುಚಿತ್ವ ಅಭಿಯಾನ

ಗುರುವಾಯನಕೆರೆ: ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಹಾಯಕದೊಂದಿಗೆ ಹಾಗೂ ಬೆಳ್ತಂಗಡಿ ತಾಲೂಕಿನ ಮಾಜಿ ಸೈನಿಕರ ಸಂಘದ ಆಶ್ರಯದಲ್ಲಿ ಸ್ವಚ್ಛತಾ ಅಭಿಯಾನವು ನಡೆಯಿತು.

ಬೆಳ್ತಂಗಡಿ ಮುಖ್ಯ ಪೇಟೆಯ ರಾಜಮಾರ್ಗದ ಎರಡು ಇಕ್ಕೆಲಗಳಲ್ಲಿ ಸೈನಿಕರೊಡಗೂಡಿ ಎಕ್ಸೆಲ್ ವಿದ್ಯಾರ್ಥಿಗಳು ಸ್ವಚ್ಛತಾ ಕಾರ್ಯವನ್ನು ಆರಂಭಿಸಿದರು. ಇದೊಂದು ಕೇವಲ ಅಭಿಯಾನ ಮಾತ್ರವಲ್ಲದೆ ಜಾಗೃತಿ ಕಾರ್ಯಕ್ರಮವೂ ಆಗಿತ್ತು. ಅಯ್ಯಪ್ಪ ಭಜನಾ ಮಂದಿರದ ಎದುರುಗಡೆಯಿಂದ ಮೊದಲುಗೊಂಡು ತಾಲೂಕು ಆಸ್ಪತ್ರೆಯ ತನಕ ಸ್ವಚ್ಛತೆಯನ್ನು ನಡೆಸಿದರು. ಬಿರು ಬಿಸಿಲಿನಲ್ಲಿಯೂ ಎಕ್ಸೆಲ್ ವಿದ್ಯಾರ್ಥಿಗಳಲ್ಲಿನ ಸಾಮಾಜಿಕ ಕಾಳಜಿಯನ್ನು ಹಾಗೂ ಅಭಿಯಾನದಲ್ಲಿನ ಉತ್ಸಾಹದಾಯಕ ಪಾಲ್ಗೊಳ್ಳುವಿಕೆಯನ್ನು ಕಂಡು ಸಾರ್ವಜನಿಕರಿಂದ ಹೆಚ್ಚಿನ ಪ್ರಶಂಸೆಗೆ ಪಾತ್ರರಾದರು.

ಮಾಜಿ ಸೈನಿಕರು ಮಕ್ಕಳಿಗೆ ತಂಪು ಪಾನೀಯ ಮತ್ತು ಹಣ್ಣು ಹಂಪಲುಗಳನ್ನು ನೀಡಿದರು. ಬೆಳ್ತಂಗಡಿಯ ಪಟ್ಟಣ ಪಂಚಾಯತ್ ವತಿಯಿಂದ ಕಸ ವಿಲೇವಾರಿಗಾಗಿ ತ್ಯಾಜ್ಯ ಸಂಗ್ರಹ ವಾಹನದ ವ್ಯವಸ್ಥೆಯನ್ನು ಮಾಡಲಾಗಿತ್ತು.

Related posts

ಮೈಟ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಂದ ಬಳಂಜ ಶಾಲೆಯಲ್ಲಿ ಕಾರ್ಯಾಗಾರ

Suddi Udaya

ಬಂಟರ ಮಹಿಳಾ ವಿಭಾಗದಿಂದ “ಸ್ಪರ್ಶ” ಹೆಣ್ಣು ಮಕ್ಕಳ ಜಾಗೃತಿ ವಿಶೇಷ ಕಾರ್ಯಕ್ರಮ

Suddi Udaya

ಉಜಿರೆ: ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಮಹತ್ವದ ಸಭೆ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಪೋಷಕ ಮತ್ತು ಶಿಕ್ಷಕ ಸಭೆ

Suddi Udaya

ಕೊಕ್ಕಡ: ಅಲ್ಲಲ್ಲಿ ಮರ ಬಿದ್ದು, ವಿದ್ಯುತ್, ಮನೆಗಳಿಗೆ ಹಾನಿ: ತಕ್ಷಣ ಸ್ಪಂದಿಸಿದ ಹರೀಶ್ ಪೂಂಜ

Suddi Udaya

ಬಜಿರೆ‌ ಕೊರಗಲ್ಲು ಸ್ವಾಮಿ ಕೊರಗಜ್ಜ ಚಪ್ಪರಕ್ಕೆ ಬೆಂಕಿ ಕೊಟ್ಟು ಆರಾಧನಾ ಕೇಂದ್ರಕ್ಕೆ ಹಾನಿ ಮಾಡಿದ ಆರೋಪ: ಐವರ ಮೇಲೆ ಪ್ರಕರಣ: ಓವ೯ರ ಬಂಧನ

Suddi Udaya
error: Content is protected !!