23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗುರುವಾಯನಕೆರೆ: ಎಕ್ಸೆಲ್ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಂದ ಶುಚಿತ್ವ ಅಭಿಯಾನ

ಗುರುವಾಯನಕೆರೆ: ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಹಾಯಕದೊಂದಿಗೆ ಹಾಗೂ ಬೆಳ್ತಂಗಡಿ ತಾಲೂಕಿನ ಮಾಜಿ ಸೈನಿಕರ ಸಂಘದ ಆಶ್ರಯದಲ್ಲಿ ಸ್ವಚ್ಛತಾ ಅಭಿಯಾನವು ನಡೆಯಿತು.

ಬೆಳ್ತಂಗಡಿ ಮುಖ್ಯ ಪೇಟೆಯ ರಾಜಮಾರ್ಗದ ಎರಡು ಇಕ್ಕೆಲಗಳಲ್ಲಿ ಸೈನಿಕರೊಡಗೂಡಿ ಎಕ್ಸೆಲ್ ವಿದ್ಯಾರ್ಥಿಗಳು ಸ್ವಚ್ಛತಾ ಕಾರ್ಯವನ್ನು ಆರಂಭಿಸಿದರು. ಇದೊಂದು ಕೇವಲ ಅಭಿಯಾನ ಮಾತ್ರವಲ್ಲದೆ ಜಾಗೃತಿ ಕಾರ್ಯಕ್ರಮವೂ ಆಗಿತ್ತು. ಅಯ್ಯಪ್ಪ ಭಜನಾ ಮಂದಿರದ ಎದುರುಗಡೆಯಿಂದ ಮೊದಲುಗೊಂಡು ತಾಲೂಕು ಆಸ್ಪತ್ರೆಯ ತನಕ ಸ್ವಚ್ಛತೆಯನ್ನು ನಡೆಸಿದರು. ಬಿರು ಬಿಸಿಲಿನಲ್ಲಿಯೂ ಎಕ್ಸೆಲ್ ವಿದ್ಯಾರ್ಥಿಗಳಲ್ಲಿನ ಸಾಮಾಜಿಕ ಕಾಳಜಿಯನ್ನು ಹಾಗೂ ಅಭಿಯಾನದಲ್ಲಿನ ಉತ್ಸಾಹದಾಯಕ ಪಾಲ್ಗೊಳ್ಳುವಿಕೆಯನ್ನು ಕಂಡು ಸಾರ್ವಜನಿಕರಿಂದ ಹೆಚ್ಚಿನ ಪ್ರಶಂಸೆಗೆ ಪಾತ್ರರಾದರು.

ಮಾಜಿ ಸೈನಿಕರು ಮಕ್ಕಳಿಗೆ ತಂಪು ಪಾನೀಯ ಮತ್ತು ಹಣ್ಣು ಹಂಪಲುಗಳನ್ನು ನೀಡಿದರು. ಬೆಳ್ತಂಗಡಿಯ ಪಟ್ಟಣ ಪಂಚಾಯತ್ ವತಿಯಿಂದ ಕಸ ವಿಲೇವಾರಿಗಾಗಿ ತ್ಯಾಜ್ಯ ಸಂಗ್ರಹ ವಾಹನದ ವ್ಯವಸ್ಥೆಯನ್ನು ಮಾಡಲಾಗಿತ್ತು.

Related posts

ಸುಲ್ಕೇರಿಯಲ್ಲಿ ಭಾರಿ ಮಳೆ: ಸಂಚಾರ ಅಸ್ತವ್ಯಸ್ತ

Suddi Udaya

ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ: ಪೆರಿಂಜೆ ಶ್ರೀ ಧ.ಮಂ.ಅ. ಪ್ರೌಢಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ನೆರಿಯ ಗ್ರಾಮ ಸಭೆ: ಜನವಸತಿಯಿರುವ ಪ್ರದೇಶಕ್ಕೆ ದಾರಿದೀಪ ವಿಸ್ತರಣೆಗೆ ಗ್ರಾಮಸ್ಥರ ಒತ್ತಾಯ

Suddi Udaya

ನ.16-17: ಉಜಿರೆಯಲ್ಲಿ ಇಂಟರಾಕ್ಟ್ ಜಿಲ್ಲಾ ಸಮ್ಮೇಳನ – ಯೂತ್ ಕಾರ್ನಿವಾಲ್: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಭಾಗಿ

Suddi Udaya

ಉಜಿರೆ ಎಸ್.ಡಿ.ಎಂ ಸಿಬಿಎಸ್ಇ ಶಾಲೆಯಲ್ಲಿ ‘ಕಲಾಬ್ದಿ – 2025’ ಗೆ ಚಾಲನೆ

Suddi Udaya

ಕುತ್ಲೂರು ಉನ್ನತಿಕರಿಸೀದ ಸ.ಹಿ.ಪ್ರಾ ಶಾಲಾ ಮಕ್ಕಳಿಗೆಊಟದ ಸ್ಟೀಲ್ ತಟ್ಟೆ ಹಾಗೂ ಕಪಾಟು ವಿತರಣೆ

Suddi Udaya
error: Content is protected !!