September 6, 2026
Uncategorized

ಚಿಕ್ಕಮಗಳೂರು: ಇಬ್ಬರು ನಕ್ಸಲ್ ಬೆಂಬಲಿತ ಶಂಕಿತರಿಬ್ಬ ರು ವಶಕ್ಕೆ

ಚಿಕ್ಕಮಗಳೂರು : ದಶಕಗಳ ಬಳಿಕ ಮಲೆನಾಡಿನಲ್ಲಿ ನಕ್ಸಲರ ಸದ್ದು ಹೆಚ್ಚಾಗಿದೆ ಎನ್ನುವ ಬಗ್ಗೆ ಅಂತಕಕಾರಿ ಮಾಹಿತಿ ಹೊರಬಿದ್ದಿದೆ. 2014 ರ ನಂತರ ಮಲೆನಾಡಿನಲ್ಲಿ ಕೆಂಪು ಉಗ್ರರ ಹೆಜ್ಜೆ ಮತ್ತೆ 2024 ರಲ್ಲಿ ಗುರುತು ಪತ್ತೆಯಾಗಿದೆ.

ಮಲೆನಾಡಿನಲ್ಲಿ ಒತ್ತುವರಿ ತೆರವು ಗುಮ್ಮ, ಕಸ್ತೂರಿ ರಂಗ್ ವರದಿ ಭಯದ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಗ್ರಾಮಸ್ಥರ ಸಂಪರ್ಕ ಮಾಡುತ್ತಿರುವ ಕೆಂಪು ಉಗ್ರರ ಬಗ್ಗೆ ಪೊಲೀಸರು ಜಾಡು ಹಿಡಿದಿದ್ದಾರೆ ಎನ್ನಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪೊಲೀಸರು ಹಾಗೂ ಎ.ಎನ್.ಎಫ್ ಪೊಲೀಸರು ನಕ್ಸಲ್ ಬೆಂಬಲಿಗರನ್ನು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾಜ್ಯ ಗುಪ್ತಚರ ಮಾಹಿತಿ ಆಧಾರದಲ್ಲಿ ನಕ್ಸಲ್ ಬೆಂಬಲಿಗ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ‌‌.

ಕಳೆದ ಎರಡು ದಿನದ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ಓರ್ವ ವ್ಯಕ್ತಿಯನ್ನು ಭೇಟಿಯಾಗಲು ಬಂದ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದ ಗಡಿಭಾಗದ ಇಬ್ಬರು ಶಂಕಿತ ವ್ಯಕ್ತಿಗಳ ಬಗ್ಗೆ ರಾಜ್ಯ ಗುಪ್ತಚರ ಇಲಾಖೆಗೆ ಬಂದ ಖಚಿತ ಮಾಹಿತಿ ಆಧಾರದಲ್ಲಿ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದು. ಇಬ್ಬರಿಗೆ ಸಂಬಂಧಿಸಿದ ಸ್ಥಳದಲ್ಲಿ ಶೋಧ ನಡೆಸಿ ನಾಡ ಪಿಸ್ತೂಲ್ ವಶಕ್ಕೆ ಪಡೆಯಲಾಗಿದೆ ಎನ್ನಲಾಗಿದೆ.

ಕಾರ್ಕಳ ಎ.ಎನ್.ಎಫ್‌ ಎಸ್ಪಿ ಹಾಗೂ ಚಿಕ್ಕಮಗಳೂರು ಎಸ್ಪಿ ನೇತೃತ್ವದ ತಂಡದ ಪೊಲೀಸರು ನಕ್ಸಲರಿಗೆ ಮಾಹಿತಿ ಹಾಗೂ ಸಹಕಾರ ಹಿನ್ನಲೆಯಲ್ಲಿ ಇಬ್ಬರು ಶಂಕಿತರಿಗೆ ಸಂಬಂಧಿಸಿದ ಸ್ಥಳದಲ್ಲಿ ಶೃಂಗೇರಿ ಪೊಲೀಸ್ ಠಾಣೆಗೆ ಕರೆತಂದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

Related posts

ಅಂಡೆತಡ್ಕ ಸರಕಾರಿ ಉನ್ನತಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಬಾಲಕರ ತಂಡವು ಕುವೆಟ್ಟು ಸ.ಉ. ಹಿ. ಪ್ರಾ. ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಸತತವಾಗಿ ಮೂರನೇ ಬಾರಿ ದ್ವಿತೀಯ ಸ್ಥಾನ

Suddi Udaya

ಸಿಯೋನ್ ಆಶ್ರಮ: ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya

ಉಜಿರೆ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ರಿಕ್ಷಾ

Suddi Udaya

ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ: ಬೆಳ್ತಂಗಡಿ ಪಿಡಬ್ಲ್ಯೂಡಿ ಪ್ರಥಮ ಸಹಾಯಕ ನರೇಂದ್ರ ಭಟ್ ಶಟಲ್ ಬ್ಯಾಡ್ಮಿಂಟನ್ ನಲ್ಲಿ ದ್ವಿತೀಯ ಸ್ಥಾನ

Suddi Udaya

ಜೈನ ಶ್ರಾವಕ, ಶ್ರಾವಕಿಯರಿಗೆ ರಾಜ್ಯ ಮಟ್ಟದ ಸ್ಪರ್ಧೆ

Suddi Udaya

ಭಾರತ್ ಬ್ಯಾಂಕ್‌ ಮುಂಬೈ ಇದರ ಬೆಳ್ತಂಗಡಿ ಕಛೇರಿ ಶುಭಾರಂಭ: ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಜಿ, ಶಾಸಕ ಹರೀಶ್ ಪೂಂಜ,ಬ್ಯಾಂಕಿನ ಅಧ್ಯಕ್ಷ ಸೂರ್ಯಕಾಂತ್ ಜೆ. ಸುವರ್ಣ ಉಪಸ್ಥಿತಿ

Suddi Udaya
error: Content is protected !!