26.5 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ವರ್ತಕರ ಸಂಘದಿಂದ ರಸ್ತೆ ನಿರ್ಮಾಣದ ಬಗ್ಗೆ ಚರ್ಚಿಸಲು ಡಾ. ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ

ಬೆಳ್ತಂಗಡಿ : ವರ್ತಕರ ಸಂಘದ ಪರವಾಗಿ ಅವೈಜ್ಞಾನಿಕ ರಸ್ತೆ ನಿರ್ಮಾಣ ಹಾಗೂ ಇದರಿಂದ ವ್ಯಾಪಾರಿ ಸಮುದಾಯ ಹಾಗೂ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳನ್ನು ವಿವರಿಸಿ ತಮ್ಮ ಮನವಿಯನ್ನು ಸಲ್ಲಿಸಿದರು.

ಡಾ. ಡಿ ವೀರೇಂದ್ರ ಹೆಗ್ಗಡೆಯವರು ಕೂಡ ಈ ರಸ್ತೆ ನಿರ್ಮಾಣದಿಂದ ಎಲ್ಲರಿಗೂ ಆಗುವ ಸಮಸ್ಯೆಯಿಂದ ಅಸಮಾಧಾನವನ್ನು ವ್ಯಕ್ತಪಡಿಸಿದರು. ಕೂಡಲೇ ನಮ್ಮ ಮನವಿಯನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸಾರಿಗೆ ಸಚಿವರಿಗೆ ಪತ್ರ ಬರೆಯಲು ತಮ್ಮ ಆಪ್ತ ಕಾರ್ಯದರ್ಶಿಗೆ ಆದೇಶಿಸಿದ್ದಾರೆ. ಸಂಘದ ಮನವಿಯಲ್ಲಿ ಸರ್ವಿಸ್ ರಸ್ತೆಯನ್ನು ರದ್ದು ಪಡಿಸಿ ಉಜಿರೆಯಿಂದ ಧರ್ಮಸ್ಥಳಕ್ಕೆ 4 ಪಥದ ರಸ್ತೆ ಮಾದರಿಯಂತೆ ರಸ್ತೆ ಅಗಲ ಮಾಡಿ ಚರಂಡಿಯನ್ನು ರಸ್ತೆಯ 2 ಬದಿಯಲ್ಲಿ ಸ್ಥಳಂತರಿಸಲು ಮನವಿ ಮಾಡಿದರು.


ವರ್ತಕರ ಸಂಘದ ಅಧ್ಯಕ್ಷ ರೋನಾಲ್ಡ್ ಲೋಬೊ, ಉಪಾಧ್ಯಕ್ಷ ಶಶಿಧರ ಪೈ, ಕಾರ್ಯದರ್ಶಿ ಲಾನ್ಸಿ ಪಿರೇರ, ಕಾರ್ಯಕಾರಿ ಸಮಿತಿ ಸದಸ್ಯರಾದ ಶೀತಲ್ ಜೈನ್, ವೀನ್ಸo ಟ್ ಡಿಸೋಜಾ, ಶರ್ಮಿಳಾ ಮೋರಸ್ ಉಪಸ್ಥಿತರಿದ್ದರು.

Related posts

ಶ್ರೀ ಗುರುದೇವ ಕಾಲೇಜಿನಲ್ಲಿ ಪದ್ಮನಾಭ ಮಾಣಿಂಜರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ

Suddi Udaya

ಕಾಶಿಪಟ್ನ: ಸಮೀಪದ ಕಾಡಿನಲ್ಲಿ ಆತ್ಮಹತ್ಯೆಗೆ ಶರಣಾದ ದಂಪತಿ, ಕಾರಣ ಪೋಲೀಸ್ ತನಿಖೆಯಿಂದ ತಿಳಿಯಬೇಕಷ್ಠೆ.

Suddi Udaya

ಗೇರುಕಟ್ಟೆ: ಪರಪ್ಪು ಮಸೀದಿಯಲ್ಲಿ ಕೂರತ್ ತಂಙಳ್ ಉರೂಸ್ ಪ್ರಚಾರ ಪೋಸ್ಟರ್ ಬಿಡುಗಡೆ

Suddi Udaya

ಬೆಳಾಲು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಂಜೂರಾದ ಮಾಶಾಸನ ವಿತರಣೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಎನ್ಎಸ್ಎಸ್ ವಾರ್ಷಿಕ ಚಟುವಟಿಕೆಗಳ ಸಮಾರೋಪ ಸಮಾರಂಭ

Suddi Udaya
error: Content is protected !!