28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ವರ್ತಕರ ಸಂಘದಿಂದ ರಸ್ತೆ ನಿರ್ಮಾಣದ ಬಗ್ಗೆ ಚರ್ಚಿಸಲು ಡಾ. ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ

ಬೆಳ್ತಂಗಡಿ : ವರ್ತಕರ ಸಂಘದ ಪರವಾಗಿ ಅವೈಜ್ಞಾನಿಕ ರಸ್ತೆ ನಿರ್ಮಾಣ ಹಾಗೂ ಇದರಿಂದ ವ್ಯಾಪಾರಿ ಸಮುದಾಯ ಹಾಗೂ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳನ್ನು ವಿವರಿಸಿ ತಮ್ಮ ಮನವಿಯನ್ನು ಸಲ್ಲಿಸಿದರು.

ಡಾ. ಡಿ ವೀರೇಂದ್ರ ಹೆಗ್ಗಡೆಯವರು ಕೂಡ ಈ ರಸ್ತೆ ನಿರ್ಮಾಣದಿಂದ ಎಲ್ಲರಿಗೂ ಆಗುವ ಸಮಸ್ಯೆಯಿಂದ ಅಸಮಾಧಾನವನ್ನು ವ್ಯಕ್ತಪಡಿಸಿದರು. ಕೂಡಲೇ ನಮ್ಮ ಮನವಿಯನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸಾರಿಗೆ ಸಚಿವರಿಗೆ ಪತ್ರ ಬರೆಯಲು ತಮ್ಮ ಆಪ್ತ ಕಾರ್ಯದರ್ಶಿಗೆ ಆದೇಶಿಸಿದ್ದಾರೆ. ಸಂಘದ ಮನವಿಯಲ್ಲಿ ಸರ್ವಿಸ್ ರಸ್ತೆಯನ್ನು ರದ್ದು ಪಡಿಸಿ ಉಜಿರೆಯಿಂದ ಧರ್ಮಸ್ಥಳಕ್ಕೆ 4 ಪಥದ ರಸ್ತೆ ಮಾದರಿಯಂತೆ ರಸ್ತೆ ಅಗಲ ಮಾಡಿ ಚರಂಡಿಯನ್ನು ರಸ್ತೆಯ 2 ಬದಿಯಲ್ಲಿ ಸ್ಥಳಂತರಿಸಲು ಮನವಿ ಮಾಡಿದರು.


ವರ್ತಕರ ಸಂಘದ ಅಧ್ಯಕ್ಷ ರೋನಾಲ್ಡ್ ಲೋಬೊ, ಉಪಾಧ್ಯಕ್ಷ ಶಶಿಧರ ಪೈ, ಕಾರ್ಯದರ್ಶಿ ಲಾನ್ಸಿ ಪಿರೇರ, ಕಾರ್ಯಕಾರಿ ಸಮಿತಿ ಸದಸ್ಯರಾದ ಶೀತಲ್ ಜೈನ್, ವೀನ್ಸo ಟ್ ಡಿಸೋಜಾ, ಶರ್ಮಿಳಾ ಮೋರಸ್ ಉಪಸ್ಥಿತರಿದ್ದರು.

Related posts

ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ದೃಢಕಲಶ

Suddi Udaya

ಭಾರೀ ಗಾಳಿ ಮಳೆ: ಬಂದಾರು ಪೇರಲ್ದಪಲಿಕೆಯಲ್ಲಿ ವಿದ್ಯುತ್ ತಂತಿ ಮೇಲೆ ಬಿದ್ದ ಮರ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿ ಯಾತ್ರಿ ನಿವಾಸ ಶಿಲಾನ್ಯಾಸ: ವಿ.ಪ. ಸದಸ್ಯ ಬಿ.ಕೆ. ಹರಿಪ್ರಸಾದ್ ರಿಗೆ ಆಹ್ವಾನ

Suddi Udaya

ಉಜಿರೆಯ ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ ನೂತನ ವಿದ್ಯಾರ್ಥಿನಿಯರ ಸ್ವಾಗತ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಭೇಟಿ

Suddi Udaya

ವೇಣೂರು: ಸಾಯಿ ಈಶ್ವರ್ ಗುರೂಜಿಯವರ ದಿವ್ಯ ಸಂಕಲ್ಪದಂತೆ ಸನಾತನ ಹಿಂದೂ ಧರ್ಮದ 300 ಹೆಣ್ಣು ಮಕ್ಕಳಿಗೆ ಉಚಿತ ಮೂಗುತಿ ಧಾರಣೆ

Suddi Udaya
error: Content is protected !!